Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬೇಸಿಗೆಯಲ್ಲಿ ಡಯಾಬಿಟಿಸ್ ನಿಯಂತ್ರಣಕ್ಕೆ ಹೀಗೆ ಮಾಡಿ ಅಂತಿದ್ದಾರೆ ತಜ್ಞರು
ಬೇಸಿಗೆ ಕಾಲವು ಮಧುಮೇಹ ರೋಗಿಗಳಿಗೆ ಹೆಚ್ಚಿನ ಸಮಸ್ಯೆಗಳನ್ನು ತರುತ್ತದೆ. ಏಕೆಂದರೆ ಬಿಸಿ ವಾತಾವರಣವು ಮಧುಮೇಹ ಇರುವವರಿಗೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಸಂಶೋಧನೆ ಸೂಚಿಸುತ್ತದೆ. ಈ ದಿನಗಳಲ್ಲಿ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕಷ್ಟವಾಗಬಹುದು. ತಜ್ಞರ ಪ್ರಕಾರ, ಈ ಕಾಲದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ರೋಗಲಕ್ಷಣಗಳಿಗೆ ಗಮನ ಕೊಡುವುದು ಮುಖ್ಯವಾಗಿರುತ್ತದೆ.

ಮಧುಮೇಹ ರೋಗಿಗಳು ಆಯಾಸ, ಮೂತ್ರ ವಿಸರ್ಜನೆ ಕಡಿಮೆಯಾಗುವುದು, ಕಪ್ಪು ಮೂತ್ರ, ಕಡಿಮೆ ರಕ್ತದೊತ್ತಡ, ಹೆಚ್ಚಿದ ಹೃದಯ ಬಡಿತ, ಹೆಚ್ಚಿದ ಬಾಯಾರಿಕೆ, ತಲೆತಿರುಗುವಿಕೆ ಅಥವಾ ಮೂರ್ಛೆ ಸೇರಿದಂತೆ ನಿರ್ಜಲೀಕರಣದ ಕೆಲವು ರೋಗಲಕ್ಷಣಗಳನ್ನು ಈ ಬೇಸಿಗೆಯಲ್ಲಿ ಅನುಭವಿಸಬಹುದು. ಆದ್ದರಿಂದ ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು, ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವುಗಳಾವುವು ಎಂಬುದನ್ನು ಇಲ್ಲಿ ನೋಡೋಣ.
ಬೇಸಿಗೆಯಲ್ಲಿ ಮಧುಮೇಹ ನಿಯಂತ್ರಣಕ್ಕೆ ಸಲಹೆಗಳನ್ನು ಈ ಕೆಳಗೆ ನೀಡಲಾಗಿದೆ:

ಮೆಂತ್ಯೆ ಬೀಜಗಳು ಮಧುಮೇಹಕ್ಕೆ ಉತ್ತಮ ಚಿಕಿತ್ಸೆ:
ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು, ಮಧುಮೇಹ ರೋಗಿಗಳು ರಾತ್ರಿ ಮಲಗುವ ಮೊದಲು ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯೆ ಬೀಜಗಳನ್ನು ನೆನೆಸಿಡಬೇಕು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ದಿನವಿಡೀ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.

ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಿ:
ತಜ್ಞರ ಪ್ರಕಾರ, ನೀವು ಮಧುಮೇಹ ರೋಗಿಗಳಾಗಿದ್ದರೆ, ಬೇಸಿಗೆಯಲ್ಲಿ ಸಿಹಿತಿಂಡಿಗಳು, ಕಾರ್ಬೋಹೈಡ್ರೇಟ್ಗಳು ಮತ್ತು ಡೈರಿ ಉತ್ಪನ್ನಗಳ ಅತಿಯಾದ ಸೇವನೆಯನ್ನು ತಪ್ಪಿಸಬೇಕು. ಬದಲಾಗಿ, ಹೆಚ್ಚು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವುದು.

ಮಾವಿನ ಎಲೆ ಮಧುಮೇಹಕ್ಕೆ ಉತ್ತಮ:
ಹೌದು, ಡಯಾಬಿಟಿಸ್ ನಿಯಂತ್ರಣಕ್ಕೆ ಮಾವಿನ ಎಲೆಗಳು ಸಹಕಾರಿ. ಇದಕ್ಕಾಗಿ 15 ಮಾವಿನ ಎಲೆಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ರಾತ್ರಿಯಿಡೀ ಬಿಡಿ, ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಅಲ್ಲದೆ, ಬೇವಿನ ಪುಡಿಯನ್ನು ದಿನಕ್ಕೆ ಒಂದು ಬಾರಿ ಸೇವಿಸಬಹುದು.

ಹರ್ಬಲ್ ಟೀ ಮಧುಮೇಹ ನಿಯಂತ್ರಿಸುವ ಮಾರ್ಗ:
ಸಹಜವಾಗಿ, ಬೇಸಿಗೆಯಲ್ಲಿ ಚಹಾ ಕುಡಿಯುವುದು ಸರಿಯಾದ ಉಪಾಯವಲ್ಲ, ಆದರೆ ನೀವು ಮಧುಮೇಹ ರೋಗಿಯಾಗಿದ್ದರೆ, ಸಾಮಾನ್ಯ ಚಹಾದ ಬದಲಿಗೆ ಗಿಡಮೂಲಿಕೆ ಚಹಾವನ್ನು ಸೇವಿಸಬೇಕು. ನೀವು ಬೆಳಿಗ್ಗೆ ಶುಂಠಿ, ಅರಿಶಿನ, ದಾಲ್ಚಿನ್ನಿ ಪುಡಿಯಿಂದ ಮಾಡಿದ ಗಿಡಮೂಲಿಕೆ ಚಹಾವನ್ನು ತೆಗೆದುಕೊಳ್ಳಬಹುದು.

ಶುಗರ್ ನಿಯಂತ್ರಣದಲ್ಲಿಡಲು ನಿದ್ರೆ ಮತ್ತು ಯೋಗ ಕೂಡ ಉತ್ತಮ:
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು, ಮಧುಮೇಹಿಗಳು ಮಂಡೂಕಾಸನ, ವಜ್ರಾಸನ ಮತ್ತು ಅರ್ಧ ಮತ್ಸ್ಯೇಂದ್ರಾಸನದಂತಹ ಯೋಗಾಸನಗಳನ್ನು ಅಭ್ಯಾಸ ಮಾಡಬೇಕು. ನೀವು ಕಪಾಲಭಾತಿ ಮತ್ತು ಉಜ್ಜಯಿಯಂತಹ ಪ್ರಾಣಾಯಾಮವನ್ನೂ ಮಾಡಬಹುದು. ಇದಲ್ಲದೆ, ಪ್ರತಿದಿನ 7-8 ಗಂಟೆಗಳ ಕಾಲ ಉತ್ತಮ ನಿದ್ರೆ ಪಡೆಯಿರಿ.



Click it and Unblock the Notifications