Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಗಣೇಶನಿಗೆ ಪ್ರಿಯವಾದ ಮೋದಕದಲ್ಲಿದೆ ಈ ಆರೋಗ್ಯಕರ ಗುಣಗಳು
ಮೋದಕ ಇಲ್ಲದಿದ್ದರೆ ಗಣೇಶ ಹಬ್ಬ ಸಂಪೂರ್ಣವಾಗುವುದೇ ಇಲ್ಲ. ಗಣೇಶನಿಗೆ ಮೋದಕ ಎಂದರೆ ತುಂಬಾ ಪ್ರಿಯವಾದದ್ದು. ಆದ್ದರಿಂದ 21 ಮೋದಕ ಮಾಡಿ ಗಣೇಶನಿಗೆ ಅರ್ಪಿಸಲಾಗುವುದು.
ಗಣೇಶನಿಗೆ ಪ್ರಿಯವಾಗಿರುವ ಮೋದಕ ಎಲ್ಲರ ಮೆಚ್ಚಿನ ಸಿಹಿ ತಿಂಡಿಯಾಗಿದೆ. ಮೋದಕ ಇಷ್ಟವಿಲ್ಲ ಎಂದು ಹೇಳುವವರು ಬಲು ಅಪರೂಪ ಅಷ್ಟೊಂದು ರುಚಿಯಾಗಿರುತ್ತೆ. ಕಾಯಿ ಬೆಲ್ಲ ಹಾಕಿ ಮಾಡುವ ಮೋದಕ ಎಷ್ಟು ತಿಂದರೂ ಸಾಕಾಗುವುದಿಲ್ಲ, ಅಷ್ಟೊಂದು ರುಚಿಯಾಗಿರುತ್ತೆ. ಈ ಮೋದಕ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು.
ನಮ್ಮ ಎಲ್ಲಾ ಹಬ್ಬಗಳಲ್ಲಿ ಮಾಡುವ ಸಾಂಪ್ರದಾಯಿಕ ಅಡುಗೆಗಳಲ್ಲಿ ಆರೋಗ್ಯಕರ ಗುಣವೂ ಇರುತ್ತದೆ. ಸಂಕ್ರಾಂತಿಯ ಎಳ್ಳು-ಬೆಲ್ಲ ಆರೋಗ್ಯಕರ ಗುಣವನ್ನು ಹೊಂದಿದೆ. ಗಣೇಶನ ಹಬ್ಬದಲ್ಲಿ ಮಾಡುವ ಮೋದಕದಲ್ಲಿಯೂ ತುಂಬಾನೇ ಆರೋಗ್ಯಕರ ಗುಣಗಳಿವೆ.
ಭಾರತದ ಪ್ರಸಿದ್ಧ ನ್ಯೂಟ್ರಿಷಿಯನಿಸ್ಟ್ ಆಗಿರುವ ರುಜುತಾ ದ್ವಿವೇದಿ ಮೋದಕದಲ್ಲಿ ಯಾವೆಲ್ಲಾ ಆರೋಗ್ಯಕರ ಗುಣಗಳಿವೆ ಎಂದು ಹೇಳಿದ್ದಾರೆ ನೋಡಿ:
ಮೋದಕದ ಆರೊಗ್ಯಕರ ಗುಣಗಳು

ಮಲಬದ್ಧತೆ ಮತ್ತು ಕೊಲೆಸ್ಟ್ರಾಲ್ ಸಮಸ್ಯೆ ತಡೆಗಟ್ಟುತ್ತೆ
ಮಲಬದ್ಧತೆ:
ಮೋದಕವನ್ನು ತುಪ್ಪ ಬಳಸಿ ಮಾಡುವುದರಿಂದ ಇದು ಕರುಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಲು ಸಹಕಾರಿ.
ರಕ್ತದೊತ್ತಡ ನಿಯಂತ್ರಿಸುತ್ತದೆ: ಮೋದಕ ಒಳಗೆ ತುಂಬುವ ಬೆಲ್ಲ ಹಾಗೂ ತೆಂಗಿನ ಕಾಯಿ ಮಿಶ್ರಣ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಕೊಲೆಸ್ಟ್ರಾಲ್: ಮೋದಕವನ್ನು ತಯಾರಿಸುವಾಗ ತುಪ್ಪ, ಡ್ರೈ ಫ್ರೂಟ್ಸ್, ಕೊಬ್ಬರಿ ಇವೆಲ್ಲಾ ಬಳಸಲಾಗುವುದು. ಇವೆಲ್ಲಾ ದೇಹದಲ್ಲಿರುವ ಬೇಡದ ಕೊಬ್ಬನ್ನು ಕಡಿಮೆ ಮಾಡಿ ಒಳ್ಳೆಯ ಕೊಬ್ಬನ್ನು ಹೆಚ್ಚಿಸುತ್ತದೆ.

ಮಧುಮೇಹ ಹಾಗೂ ಸಂಧಿವಾತ ಸಮಸ್ಯೆ ಇರುವವರು ತಿಂದರೆ ಒಳ್ಳೆಯದು
ಮಧುಮೇಹ
ಮೋದಕದಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ಮಧುಮೇಹಿಗಳು ಕೂಡ ಇದನ್ನು ಸವಿಯಬಹುದು. ಮೋದಕ ಸಿಹಿಯಾದರೂ ಇದನ್ನು ತಿಂದರೆ ರಕ್ತದಲ್ಲಿ ಸಕ್ಕರೆಯಂಶ ತಕ್ಷಣ ಹೆಚ್ಚಾಗುವುದಿಲ್ಲ. ಆದ್ದರಿಂದ ಮಧುಮೇಹಿಗಳು ಭಯಪಡದೆ ಮೋದಕದ ರುಚಿ ಸವಿಯಬಹುದು.
ಸಂಧಿವಾತ ಸಮಸ್ಯೆ ಕಡಿಮೆಯಾಗಲೂ ಸಹಕಾರಿ
ತುಪ್ಪದಲ್ಲಿರುವ ಬಟ್ರೈಕ್ ಆಮ್ಲ ನರಗಳಲ್ಲಿರುವ ಉರಿಯೂತ ಕಡಿಮೆ ಮಾಡಲು ಸಹಕಾರಿ, ಅದರಲ್ಲೂ ಸಂಧಿವಾತದ ನೋವು ಕಡಿಮೆ ಮಾಡುವುದು.

ಪಿಸಿಓಡಿ ಹಾಗೂ ಥೈರಾಯ್ಡ್ ಹಾರ್ಮೋನ್ಗಳ ಸಮತೋಲನಕ್ಕೆ ಸಹಕಾರಿ
ಪಿಸಿಓಡಿ: ಪಿಸಿಓಡಿ ಹಾರ್ಮೋನಲ್ಗಳ ಅಸಮತೋಲನಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದೆ. ಇದನ್ನು ಅಕ್ಕಿ ಹಿಟ್ಟು ಬಳಸಿ ಮಾಡಿದರೂ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ. ಜೊತೆಗೆ ಹಿಟ್ಟಿನಲ್ಲಿರುವ ಬಿ1 ಅಂಶವೂ PMS (premenstrual syndrome) ಹಾಗೂ ಸಿಹಿ ತಿನ್ನುವ ಬಯಕೆಯನ್ನು ಕಡಿಮೆ ಮಾಡುತ್ತದೆ.
ಥೈರಾಯ್ಡ್ ಗ್ರಂಥಿಗೂ ಒಳ್ಳೆಯದು
ಇದು ಯೌವನದ ಕಳೆ ಮಾಸದಂತೆ ತಡೆಗಟ್ಟುವುದು ಹಾಗೂ ಥೈರಾಯ್ಡ್ ಗ್ರಂಥಿ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ.

ತೂಕ ಇಳಿಕೆ
ಮತ್ತೊಂದು ಖುಷಿಯ ವಿಷಯ ಎಂದರೆ ಮೋದಕ ತೂಕ ಇಳಿಕೆಗೆ ತುಂಬಾನೇ ಸಹಕಾರಿ. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆಯಿದ್ದು, ಆರೋಗ್ಯಕರ ಕೊಬ್ಬಿನಂಶವಿದ್ದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅತ್ಯುತ್ತಮವಾದ ಆಹಾರವಾಗಿದೆ.



Click it and Unblock the Notifications











