Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 3 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 3 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 17 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
Don't Miss
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟಿ ಕಷಾಯದಲ್ಲಿದೆ ಸರ್ವ ರೋಗಕ್ಕೆ ಮದ್ದು
ಆಟಿ ಅಮವಾಸ್ಯೆಯ ದಿನವಾದ ಜುಲೈ 17ರಂದು ತುಳುನಾಡಿನಲ್ಲಿ ಆಟಿ ಕಷಾಯ ಮಾಡಿ ಕುಡಿಯುವ ಪದ್ಧತಿ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ. ಆದರೆ ಆಟಿ ಅಮವಾಸ್ಯೆಯಂದು ಹಾಲೆಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇಂದು ಅಲ್ಲಿಯ ದೇವಸ್ಥಾನಗಳಿಗೆ ಹೋದರೆ ಈ ಕಷಾಯ ಕೊಡುತ್ತಾರೆ.
ದಕ್ಷಿಣ ಕನ್ನಡದಲ್ಲಿ ಸಾಮೂಹಿಕವಾಗಿ ಕಷಾಯ ಮಾಡಿ ಕುಡಿಯುವ ಪದ್ಧತಿ ಇದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಲಾಗುವುದು. ಮಳೆಗಾಲದಲ್ಲಿ ನಿರಂತರವಾಗಿ ಸುರಿಯುವ ಮಳೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು. ಮಳೆಗಾಲದಲ್ಲಿ ಆರೋಗ್ಯವನ್ನು ಕಾಪಾಡುವ ಗುಣ ಈ ಕಷಾಯದಲ್ಲಿದೆ.
1. ಆಟಿ ಕಷಾಯ ಮಾಡುವುದು ಹೇಗೆ?
ಸೂರ್ಯ ಹುಟ್ಟುವ ಮುನ್ನ ಹೋಗಿ ಹಾಲೆ ಮರದ ತೊಗಡೆ ಕೆತ್ತಿ ತರುತ್ತಾರೆ. ನಂತರ ಅದಕ್ಕೆ ಕರಿ ಮೆಣಸು, ಬೆಳ್ಳುಳ್ಳಿ, ಓಮ ಕಾಳು ಸೇರಿಸಿ ಆಟಿ ಕಷಾಯ ಮಾಡಿ ಅದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಲಾಗುವುದು.
ಆಟಿ ಕಷಾಯದಲ್ಲಿರುವ ರೋಗ ನಿರೋಧಕ ಗುಣಗಳು:
2. ಶೀತ ವಾತವರಣ ತಡೆಯುವ ಶಕ್ತಿ ದೇಹಕ್ಕೆ ಸಿಗುವುದು
ಹಾಲೆ ಮರದ ಕಷಾಯ ಮಾಡಿ ಕುಡಿಯುವುದರಿಂದ ಶೀತ ವಾತಾವರಣ ತಡೆದುಕೊಳ್ಳುವ ಶಕ್ತಿ ದೊರೆಯುತ್ತದೆ ಹಾಗೂ ಜೀರ್ಣಾಂಗ ವ್ಯೂಹದ ಆರೋಗ್ಯ ಕಾಪಾಡುತ್ತದೆ. ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು ಈ ಕಷಾಯ ಕುಡಿಯುವುದರಿಂದ ದೂರವಾಗುವುದು.
3.ಸರ್ವರೋಗ ನಿವಾರಕ ಔಷಧೀಯ ಗುಣ
ಹಾಲೆಮರ ಹಾಲಿನಲ್ಲಿ ಸಸ್ಯ ಕ್ಷಾರದಂತಹ ಔಷಧೀಯ ಗುಣಗಳಿವೆ. ಆದ್ದರಿಂದ ಈ ಕಷಾಯ ಸರ್ವರೋಗ ನಿವಾರಣಾ ಗುಣವಿದೆ. ಹೊಟ್ಟೆನೋವು, ಅತಿಸಾರ, ಸಂಧಿವಾತ, ಮಲೇರಿಯಾ, ಜ್ವರ, ಸ್ತ್ರೀರೋಗ, ಹುಟ್ಟು ಈ ರೀತಿಯ ರೋಗಗಳನ್ನು ಗುಣಪಡಿಸುವ ಶಕ್ತಿ ಈ ಮರದಲ್ಲಿದೆ ಎನ್ನುವುದು ವೈದ್ಯಕೀಯವಾಗಿಯೂ ಸಾಬೀತಾಗಿದ್ದು, ಇದು ಅತ್ಯುತ್ತಮವಾದ ಮನೆಮದ್ದಾಗಿದೆ.
4. ಆಯುರ್ವೇದದಲ್ಲೂ ಹಾಲೇಮರಕ್ಕೆ ಪ್ರಾಶಸ್ತ್ಯ ಇದೆ
ಹಾಲೆ ಮರದಲ್ಲಿ ಜ್ವರ, ಕ್ಯಾನ್ಸರ್ನಂತಹ ಕಾಯಿಲೆಗಳನ್ನು ಗುಣಪಡಿಸುವ ಹಲವು ಬಗೆಯ ಔಷಧೀಯ ಗುಣವಿದೆ ಆದ್ದರಿಂದ ಇದನ್ನು ಆಯುರ್ವೇದ ಔಷಧಿಗಳಲ್ಲಿ ಬಳಸುತ್ತಾರೆ. ಬ್ರಾಹ್ಮೀ ಮುಹೂರ್ತದಲ್ಲಿ ಮರಗಳಲ್ಲಿ ಉದ್ದೇಶಿತ ಗುಣಗಳು ಹೆಚ್ಚಿಗೆ ಇರುವುದರಿಂದ ಇದರ ತೊಗಟೆಯನ್ನು ಸೂರ್ಯ ಹುಟ್ಟುವ ಮೊದಲೇ ಸಂಗ್ರಹಿಸುವ ಕ್ರಮ ಚಾಲ್ತಿಗೆ ಬಂದಿದೆ.
ಈ ಹಾಲೇಮರದ ಆರೋಗ್ಯಕರ ಗುಣಗಳ ಬಗ್ಗೆ ತುಳುನಾಡಿನ ಪ್ರತಿಯೊಬ್ಬ ವ್ಯಕ್ತಿಗೂ ಅರಿವಿದೆ, ಆದ್ದರಿಂದಲೇ ಎಲ್ಲಾ ಧರ್ಮದವರು ಆಟಿ ಅಮವಾಸ್ಯೆಯಂದು ಇದರ ಕಷಾಯ ಮಾಡಿ ಕುಡಿಯುತ್ತಾರೆ.
5. ಕಷಾಯ ಎಷ್ಟು ತೆಗೆದುಕೊಳ್ಳಬಹುದು?
ತೊಗಟೆಯನ್ನು ಜಜ್ಜಿ ಅದರ ರಸವನ್ನು ನೀರು ಜೊತೆ ಮಿಶ್ರ ಮಾಡುತ್ತಾರೆ. ಇದನ್ನು ವ್ಯಕ್ತಿಯೊಬ್ಬ ಗರಿಷ್ಠ 24 ಮಿ.ಲೀ. ಸೇವಿಸ ಬಹುದು. ಕುದಿಸಿ ಕಷಾಯ ಮಾಡುವುದಾದರೆ ಗರಿಷ್ಠ 50 ಮಿ.ಲೀ. ಸೇವಿಸಬಹುದು. ಹಾಲೇಮರದ ಹಾಲಿಗೆ ಜೀರಿಗೆ, ಬೆಳ್ಳುಳ್ಳಿ, ಅರಶಿಣ, ಓಂಕಾಳು ಹಾಕಿ ಕಷಾಯ ರೀತಿ ಮಾಡಿ ಕುಡಿಯುತ್ತಾರೆ.ತರ ತಾವು ಊಟ ಮಾಡುತ್ತಾರೆ. ಆಟಿಯಲ್ಲಿ ಮದರಂಗಿ ಚಿಗುರನ್ನು ಯಾರೂ ಮುರಿಯುವುದಿಲ್ಲ. ಯಾಕೆಂದರೆ ಆಟಿಯಲ್ಲಿ ಮದರಂಗಿ ಹಚ್ಚುವ ಸಂಭ್ರವನ್ನು ಯಾರೂ ಆಚರಿಸುವುದಿಲ್ಲ.