Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
2023 ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದೆ ಎಂದು ನೋಡುವಾಗ ಆರೋಗ್ಯ ಸಮಸ್ಯೆ ತೊಡೆದು ಹಾಕಲು ಒಂದು ಭದ್ರಅಡಿಪಾಯ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಬಹುದು. ಆರೋಗ್ಯ ಕ್ಷೇತ್ರದಲ್ಲೂ ತಂತ್ರಜ್ಞಾನಕ್ಕೆ ತುಂಬಾನೇ ಮಹತ್ವ ನೀಡಲಾಗಿದೆ.

2023ರ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯೇನು ಎಂದು ನೋಡುವುದಾದರೆ...
ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗೆ ಶ್ರಮ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ, ಔಷಧ, ವೈದ್ಯಕೀಯ ಸಾಧನಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಬಜೆಟ್ನಲ್ಲಿ ಶೇ.2.1 ರಷ್ಟು ಮೀಸಲಿಟ್ಟಿರುವುದರಿಂದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಉಂಟಾಗಲಿದೆ.
157 ಹೊಸ ನರ್ಸಿಂಗ್ ಕಾಲೇಜುಗಳು
2014ರಿಂದ ಸ್ಥಾಪಿತವಾಗಿರುವ 157 ವೈದ್ಯಕೀಯ ಕಾಲೇಜಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಿಕೆಲ್ ಸೆಲ್ ಅನಿಮಿಯಾ (ರಕ್ತಹೀನತೆ) ತೊಡೆದು ಹಾಕಲು ನಿರ್ಧಾರ
ಸಿಕಲ್ ಸೆಲ್ ರಕ್ತಹೀನತೆ ಎಂಬುವುದು ನಿಮ್ಮ ರಕ್ತಕಣಗಳ ಆಕಾರವನ್ನು ಬದಲಾಯಿಸುತ್ತದೆ ಅಲ್ಲದೆ ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಈ ಬಗೆಯ ಸಮಸ್ಯೆ 50ರ ಹರೆಯದಲ್ಲಿ ಹೆಚ್ಚಾಗಿ ಕಂಡು ಬರುವುದು. 2047ರಷ್ಟರಲ್ಲಿ ಈ ಸಮಸ್ಯೆ ಸಂಪೂರ್ಣ ತೊಡೆದು ಹಾಕಲು ಮಿಷನ್ ಸ್ಥಾಪನೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಲಾಗಿದೆ.
ಫಾರ್ಮಾ ಸಂಶೋಧನೆಯಲ್ಲಿ ಹೂಡಿಕೆಗೆ ಉತ್ತೇಜನೆ
ಕೇಂದ್ರ 2023ರ ಬಜೆಟ್ನಲ್ಲೊ ಫಾರ್ಮಾಸ್ಯುಟಿಕಲ್ಸ್ನಲ್ಲಿ ಸಂಶೋಧನೆಗಾಗಿ ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಮತ್ತು ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಐಸಿಎಂಆರ್ ಲ್ಯಾಬ್ಗಳ ಸಂಖ್ಯೆ ಹೆಚ್ಚಳ
ಐಸಿಎಂಆರ್ ಲ್ಯಾಬ್ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ನೀಡಲಾಗುವುದು, ಈ ಕಾರಣಕ್ಕಾಗಿ ದೇಶದಲ್ಲಿ ಐಸಿಎಂಆರ್ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅದಲ್ಲದೆ ಈ ಬಜೆಟ್ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುವುದು ಎಂದು ವಿತ್ತ ಸಚಿವೆ ಹೇಳಿದ್ದಾರೆ.
ಒಟ್ಟಿನಲ್ಲಿ ಈ ಸಾಲಿನ ಆರೋಗ್ಯ ಕ್ಷೇತ್ರದ ದೃಷ್ಟಿಯಿಂದ ನೋಡುವುದಾದರೆ ಉತ್ತಮವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಬೆಳವಣಿಗೆಯಾದರೆ ಅನೇಕ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿ, ಈ ನಿಟ್ಟಿನಲ್ಲಿ ಈ ಸಾಲಿನ ಬಜೆಟ್ ಮೂಲಕ ಕೇಂದ್ರ ಸರ್ಕಾರ ವಿಶೇಷ ಕೊಡುಗೆ ನೀಡಿದೆ.
ಆರೋಗ್ಯ ಬಜೆಟ್ ಬಗ್ಗೆ ನಿಮ್ಮ ಅನಿಸಿಕೆಯೇನು ಕಮೆಂಟ್ ಮಾಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications












