Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
2023 ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದೆ ಎಂದು ನೋಡುವಾಗ ಆರೋಗ್ಯ ಸಮಸ್ಯೆ ತೊಡೆದು ಹಾಕಲು ಒಂದು ಭದ್ರಅಡಿಪಾಯ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಬಹುದು. ಆರೋಗ್ಯ ಕ್ಷೇತ್ರದಲ್ಲೂ ತಂತ್ರಜ್ಞಾನಕ್ಕೆ ತುಂಬಾನೇ ಮಹತ್ವ ನೀಡಲಾಗಿದೆ.

2023ರ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯೇನು ಎಂದು ನೋಡುವುದಾದರೆ...
ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗೆ ಶ್ರಮ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ, ಔಷಧ, ವೈದ್ಯಕೀಯ ಸಾಧನಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಬಜೆಟ್ನಲ್ಲಿ ಶೇ.2.1 ರಷ್ಟು ಮೀಸಲಿಟ್ಟಿರುವುದರಿಂದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಉಂಟಾಗಲಿದೆ.
157 ಹೊಸ ನರ್ಸಿಂಗ್ ಕಾಲೇಜುಗಳು
2014ರಿಂದ ಸ್ಥಾಪಿತವಾಗಿರುವ 157 ವೈದ್ಯಕೀಯ ಕಾಲೇಜಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಿಕೆಲ್ ಸೆಲ್ ಅನಿಮಿಯಾ (ರಕ್ತಹೀನತೆ) ತೊಡೆದು ಹಾಕಲು ನಿರ್ಧಾರ
ಸಿಕಲ್ ಸೆಲ್ ರಕ್ತಹೀನತೆ ಎಂಬುವುದು ನಿಮ್ಮ ರಕ್ತಕಣಗಳ ಆಕಾರವನ್ನು ಬದಲಾಯಿಸುತ್ತದೆ ಅಲ್ಲದೆ ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಈ ಬಗೆಯ ಸಮಸ್ಯೆ 50ರ ಹರೆಯದಲ್ಲಿ ಹೆಚ್ಚಾಗಿ ಕಂಡು ಬರುವುದು. 2047ರಷ್ಟರಲ್ಲಿ ಈ ಸಮಸ್ಯೆ ಸಂಪೂರ್ಣ ತೊಡೆದು ಹಾಕಲು ಮಿಷನ್ ಸ್ಥಾಪನೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಲಾಗಿದೆ.
ಫಾರ್ಮಾ ಸಂಶೋಧನೆಯಲ್ಲಿ ಹೂಡಿಕೆಗೆ ಉತ್ತೇಜನೆ
ಕೇಂದ್ರ 2023ರ ಬಜೆಟ್ನಲ್ಲೊ ಫಾರ್ಮಾಸ್ಯುಟಿಕಲ್ಸ್ನಲ್ಲಿ ಸಂಶೋಧನೆಗಾಗಿ ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಮತ್ತು ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಐಸಿಎಂಆರ್ ಲ್ಯಾಬ್ಗಳ ಸಂಖ್ಯೆ ಹೆಚ್ಚಳ
ಐಸಿಎಂಆರ್ ಲ್ಯಾಬ್ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ನೀಡಲಾಗುವುದು, ಈ ಕಾರಣಕ್ಕಾಗಿ ದೇಶದಲ್ಲಿ ಐಸಿಎಂಆರ್ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅದಲ್ಲದೆ ಈ ಬಜೆಟ್ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುವುದು ಎಂದು ವಿತ್ತ ಸಚಿವೆ ಹೇಳಿದ್ದಾರೆ.
ಒಟ್ಟಿನಲ್ಲಿ ಈ ಸಾಲಿನ ಆರೋಗ್ಯ ಕ್ಷೇತ್ರದ ದೃಷ್ಟಿಯಿಂದ ನೋಡುವುದಾದರೆ ಉತ್ತಮವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಬೆಳವಣಿಗೆಯಾದರೆ ಅನೇಕ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿ, ಈ ನಿಟ್ಟಿನಲ್ಲಿ ಈ ಸಾಲಿನ ಬಜೆಟ್ ಮೂಲಕ ಕೇಂದ್ರ ಸರ್ಕಾರ ವಿಶೇಷ ಕೊಡುಗೆ ನೀಡಿದೆ.
ಆರೋಗ್ಯ ಬಜೆಟ್ ಬಗ್ಗೆ ನಿಮ್ಮ ಅನಿಸಿಕೆಯೇನು ಕಮೆಂಟ್ ಮಾಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
