Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಿವು
ಕೊರೋನಾ ವೈರಸ್ ಲಸಿಕೆ ಬಗ್ಗೆ ಜನರಿಗೆ ಅನೇಕ ಪ್ರಶ್ನೆಗಳಿವೆ. ಲಸಿಕೆ ಹಾಕಿದ ನಂತರ ವ್ಯಕ್ತಿಯು ಅನುಭವಿಸುವ ಅಡ್ಡಪರಿಣಾಮಗಳು ಯಾವುವು ಎಂಬುದು ಈ ಪ್ರಶ್ನೆಗಳಲ್ಲಿ ಮೊದಲಿಗೆ ಬರುತ್ತದೆ. ಕೆಲವು ತಜ್ಞರ ಪ್ರಕಾರ, ಲಸಿಕೆ ಹಾಕಿದ ನಂತರ ಕೆಲವು ಜನರಿಗೆ ಜ್ವರ ಅಥವಾ ಮೈ-ಕೈ ನೋವು ಕಾಣಿಸಿಕೊಳ್ಳುತ್ತವೆ.
ಆದರೆ ಯಾವುದೇ ಅಡ್ಡಪರಿಣಾಮಗಳನ್ನು ಎದುರಿಸಿದಾಗ ನೀವು ನಿಮ್ಮ ಆಹಾರಕ್ರಮವನ್ನು ಗಮನದಲ್ಲಿರಿಸಿಕೊಳ್ಳುವುದು ತುಂಬಾ ಮುಖ್ಯ. ಹಾಗಾದರೆ ಲಸಿಕೆ ಪಡೆದ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುವ ಆಹಾರಗಳಾವುವು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಾವುವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:

ಹಸಿರು ತರಕಾರಿಗಳು:
ಆಹಾರದಲ್ಲಿ ಹಸಿರು ತರಕಾರಿಗಳು ಇರುವುದು ಅವಶ್ಯಕವಾಗಿದೆ. ಇದರಲ್ಲಿ ಪಾಲಕ್, ಕೋಸುಗಡ್ಡೆ ಮುಂತಾದ ತರಕಾರಿಗಳು ಸೇರಿಕೊಂಡಿವೆ. ಈ ಎಲ್ಲಾ ತರಕಾರಿಗಳು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚೆಚ್ಚು ಸೇರಿಸುವುದು ಉತ್ತಮ.

ಈರುಳ್ಳಿ:
ಈರುಳ್ಳಿ ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸುತ್ತದೆ. ಜೊತೆಗೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದ್ದು, ನಿಮ್ಮನ್ನು ಅಡ್ಡಪರಿಣಾಮಗಳಿಗೆ ತುತ್ತಾಗುವುದನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ:
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕಗಳಿವೆ. ಇದರ ಗುಣಗಳು ಇದನ್ನು ಉತ್ತಮ ಔಷಧಿಯನ್ನಾಗಿ ಮಾಡುತ್ತವೆ ಏಕೆಂದರೆ ನಿಮ್ಮ ದೇಹವನ್ನು ಒಳಗಿನಿಂದ ಪೋಷಿಸಲು ಈ ಎಲ್ಲಾ ಪೋಷಕಾಂಶಗಳು ಅವಶ್ಯಕ. ಆದ್ದರಿಂದ ಬೆಳ್ಳುಳ್ಳಿಯನ್ನು ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವುದು ಒಳ್ಳೆಯದು.

ಅರಿಶಿನ:
ಅರಿಶಿನವು ಉರಿಯೂತದ ವಿರುದ್ಧದ ಪ್ರಬಲ ಆಯುಧವಾಗಿದೆ. ನಿಮ್ಮ ಮೆದುಳನ್ನು ಒತ್ತಡದಿಂದ ರಕ್ಷಿಸುತ್ತದೆ, ಆದ್ದರಿಂದ ಅರಿಶಿನವನ್ನು ಸೇವಿಸಬೇಕು. ಇದು ನಿಮ್ಮನ್ನ ಎಲ್ಲಾ ರೀತಿಯ ಒತ್ತಡದಿಂದ ತಡೆಯುತ್ತದೆ.

ಕಪ್ಪು ದ್ರಾಕ್ಷಿ:
ನಿಮಗೆಲ್ಲರಿಗೂ ತಿಳಿದಿರುವ ಕಪ್ಪು ದ್ರಾಕ್ಷಿಯಲ್ಲಿ ಆ್ಯಂಟಿಆಕ್ಸಿಡೆಂಟ್ಗಳ ಮೂಲವಾಗಿದೆ. ಅವು ಸಿರೊಟೋನಿನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಮೊಸರಿನೊಂದಿಗೆ ಕಪ್ಪುದ್ರಾಕ್ಷಿಗಳನ್ನು ಸೇವಿಸಲು ಸೂಚಿಸಲಾಗಿದೆ.



Click it and Unblock the Notifications