Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಿವು
ಕೊರೋನಾ ವೈರಸ್ ಲಸಿಕೆ ಬಗ್ಗೆ ಜನರಿಗೆ ಅನೇಕ ಪ್ರಶ್ನೆಗಳಿವೆ. ಲಸಿಕೆ ಹಾಕಿದ ನಂತರ ವ್ಯಕ್ತಿಯು ಅನುಭವಿಸುವ ಅಡ್ಡಪರಿಣಾಮಗಳು ಯಾವುವು ಎಂಬುದು ಈ ಪ್ರಶ್ನೆಗಳಲ್ಲಿ ಮೊದಲಿಗೆ ಬರುತ್ತದೆ. ಕೆಲವು ತಜ್ಞರ ಪ್ರಕಾರ, ಲಸಿಕೆ ಹಾಕಿದ ನಂತರ ಕೆಲವು ಜನರಿಗೆ ಜ್ವರ ಅಥವಾ ಮೈ-ಕೈ ನೋವು ಕಾಣಿಸಿಕೊಳ್ಳುತ್ತವೆ.
ಆದರೆ ಯಾವುದೇ ಅಡ್ಡಪರಿಣಾಮಗಳನ್ನು ಎದುರಿಸಿದಾಗ ನೀವು ನಿಮ್ಮ ಆಹಾರಕ್ರಮವನ್ನು ಗಮನದಲ್ಲಿರಿಸಿಕೊಳ್ಳುವುದು ತುಂಬಾ ಮುಖ್ಯ. ಹಾಗಾದರೆ ಲಸಿಕೆ ಪಡೆದ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುವ ಆಹಾರಗಳಾವುವು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಾವುವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:

ಹಸಿರು ತರಕಾರಿಗಳು:
ಆಹಾರದಲ್ಲಿ ಹಸಿರು ತರಕಾರಿಗಳು ಇರುವುದು ಅವಶ್ಯಕವಾಗಿದೆ. ಇದರಲ್ಲಿ ಪಾಲಕ್, ಕೋಸುಗಡ್ಡೆ ಮುಂತಾದ ತರಕಾರಿಗಳು ಸೇರಿಕೊಂಡಿವೆ. ಈ ಎಲ್ಲಾ ತರಕಾರಿಗಳು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚೆಚ್ಚು ಸೇರಿಸುವುದು ಉತ್ತಮ.

ಈರುಳ್ಳಿ:
ಈರುಳ್ಳಿ ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸುತ್ತದೆ. ಜೊತೆಗೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದ್ದು, ನಿಮ್ಮನ್ನು ಅಡ್ಡಪರಿಣಾಮಗಳಿಗೆ ತುತ್ತಾಗುವುದನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ:
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕಗಳಿವೆ. ಇದರ ಗುಣಗಳು ಇದನ್ನು ಉತ್ತಮ ಔಷಧಿಯನ್ನಾಗಿ ಮಾಡುತ್ತವೆ ಏಕೆಂದರೆ ನಿಮ್ಮ ದೇಹವನ್ನು ಒಳಗಿನಿಂದ ಪೋಷಿಸಲು ಈ ಎಲ್ಲಾ ಪೋಷಕಾಂಶಗಳು ಅವಶ್ಯಕ. ಆದ್ದರಿಂದ ಬೆಳ್ಳುಳ್ಳಿಯನ್ನು ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವುದು ಒಳ್ಳೆಯದು.

ಅರಿಶಿನ:
ಅರಿಶಿನವು ಉರಿಯೂತದ ವಿರುದ್ಧದ ಪ್ರಬಲ ಆಯುಧವಾಗಿದೆ. ನಿಮ್ಮ ಮೆದುಳನ್ನು ಒತ್ತಡದಿಂದ ರಕ್ಷಿಸುತ್ತದೆ, ಆದ್ದರಿಂದ ಅರಿಶಿನವನ್ನು ಸೇವಿಸಬೇಕು. ಇದು ನಿಮ್ಮನ್ನ ಎಲ್ಲಾ ರೀತಿಯ ಒತ್ತಡದಿಂದ ತಡೆಯುತ್ತದೆ.

ಕಪ್ಪು ದ್ರಾಕ್ಷಿ:
ನಿಮಗೆಲ್ಲರಿಗೂ ತಿಳಿದಿರುವ ಕಪ್ಪು ದ್ರಾಕ್ಷಿಯಲ್ಲಿ ಆ್ಯಂಟಿಆಕ್ಸಿಡೆಂಟ್ಗಳ ಮೂಲವಾಗಿದೆ. ಅವು ಸಿರೊಟೋನಿನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಮೊಸರಿನೊಂದಿಗೆ ಕಪ್ಪುದ್ರಾಕ್ಷಿಗಳನ್ನು ಸೇವಿಸಲು ಸೂಚಿಸಲಾಗಿದೆ.



Click it and Unblock the Notifications