Latest Updates
-
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ!
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಿವು
ಕೊರೋನಾ ವೈರಸ್ ಲಸಿಕೆ ಬಗ್ಗೆ ಜನರಿಗೆ ಅನೇಕ ಪ್ರಶ್ನೆಗಳಿವೆ. ಲಸಿಕೆ ಹಾಕಿದ ನಂತರ ವ್ಯಕ್ತಿಯು ಅನುಭವಿಸುವ ಅಡ್ಡಪರಿಣಾಮಗಳು ಯಾವುವು ಎಂಬುದು ಈ ಪ್ರಶ್ನೆಗಳಲ್ಲಿ ಮೊದಲಿಗೆ ಬರುತ್ತದೆ. ಕೆಲವು ತಜ್ಞರ ಪ್ರಕಾರ, ಲಸಿಕೆ ಹಾಕಿದ ನಂತರ ಕೆಲವು ಜನರಿಗೆ ಜ್ವರ ಅಥವಾ ಮೈ-ಕೈ ನೋವು ಕಾಣಿಸಿಕೊಳ್ಳುತ್ತವೆ.
ಆದರೆ ಯಾವುದೇ ಅಡ್ಡಪರಿಣಾಮಗಳನ್ನು ಎದುರಿಸಿದಾಗ ನೀವು ನಿಮ್ಮ ಆಹಾರಕ್ರಮವನ್ನು ಗಮನದಲ್ಲಿರಿಸಿಕೊಳ್ಳುವುದು ತುಂಬಾ ಮುಖ್ಯ. ಹಾಗಾದರೆ ಲಸಿಕೆ ಪಡೆದ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುವ ಆಹಾರಗಳಾವುವು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಾವುವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:

ಹಸಿರು ತರಕಾರಿಗಳು:
ಆಹಾರದಲ್ಲಿ ಹಸಿರು ತರಕಾರಿಗಳು ಇರುವುದು ಅವಶ್ಯಕವಾಗಿದೆ. ಇದರಲ್ಲಿ ಪಾಲಕ್, ಕೋಸುಗಡ್ಡೆ ಮುಂತಾದ ತರಕಾರಿಗಳು ಸೇರಿಕೊಂಡಿವೆ. ಈ ಎಲ್ಲಾ ತರಕಾರಿಗಳು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚೆಚ್ಚು ಸೇರಿಸುವುದು ಉತ್ತಮ.

ಈರುಳ್ಳಿ:
ಈರುಳ್ಳಿ ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸುತ್ತದೆ. ಜೊತೆಗೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದ್ದು, ನಿಮ್ಮನ್ನು ಅಡ್ಡಪರಿಣಾಮಗಳಿಗೆ ತುತ್ತಾಗುವುದನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ:
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕಗಳಿವೆ. ಇದರ ಗುಣಗಳು ಇದನ್ನು ಉತ್ತಮ ಔಷಧಿಯನ್ನಾಗಿ ಮಾಡುತ್ತವೆ ಏಕೆಂದರೆ ನಿಮ್ಮ ದೇಹವನ್ನು ಒಳಗಿನಿಂದ ಪೋಷಿಸಲು ಈ ಎಲ್ಲಾ ಪೋಷಕಾಂಶಗಳು ಅವಶ್ಯಕ. ಆದ್ದರಿಂದ ಬೆಳ್ಳುಳ್ಳಿಯನ್ನು ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವುದು ಒಳ್ಳೆಯದು.

ಅರಿಶಿನ:
ಅರಿಶಿನವು ಉರಿಯೂತದ ವಿರುದ್ಧದ ಪ್ರಬಲ ಆಯುಧವಾಗಿದೆ. ನಿಮ್ಮ ಮೆದುಳನ್ನು ಒತ್ತಡದಿಂದ ರಕ್ಷಿಸುತ್ತದೆ, ಆದ್ದರಿಂದ ಅರಿಶಿನವನ್ನು ಸೇವಿಸಬೇಕು. ಇದು ನಿಮ್ಮನ್ನ ಎಲ್ಲಾ ರೀತಿಯ ಒತ್ತಡದಿಂದ ತಡೆಯುತ್ತದೆ.

ಕಪ್ಪು ದ್ರಾಕ್ಷಿ:
ನಿಮಗೆಲ್ಲರಿಗೂ ತಿಳಿದಿರುವ ಕಪ್ಪು ದ್ರಾಕ್ಷಿಯಲ್ಲಿ ಆ್ಯಂಟಿಆಕ್ಸಿಡೆಂಟ್ಗಳ ಮೂಲವಾಗಿದೆ. ಅವು ಸಿರೊಟೋನಿನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಮೊಸರಿನೊಂದಿಗೆ ಕಪ್ಪುದ್ರಾಕ್ಷಿಗಳನ್ನು ಸೇವಿಸಲು ಸೂಚಿಸಲಾಗಿದೆ.



Click it and Unblock the Notifications