Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಿವು
ಕೊರೋನಾ ವೈರಸ್ ಲಸಿಕೆ ಬಗ್ಗೆ ಜನರಿಗೆ ಅನೇಕ ಪ್ರಶ್ನೆಗಳಿವೆ. ಲಸಿಕೆ ಹಾಕಿದ ನಂತರ ವ್ಯಕ್ತಿಯು ಅನುಭವಿಸುವ ಅಡ್ಡಪರಿಣಾಮಗಳು ಯಾವುವು ಎಂಬುದು ಈ ಪ್ರಶ್ನೆಗಳಲ್ಲಿ ಮೊದಲಿಗೆ ಬರುತ್ತದೆ. ಕೆಲವು ತಜ್ಞರ ಪ್ರಕಾರ, ಲಸಿಕೆ ಹಾಕಿದ ನಂತರ ಕೆಲವು ಜನರಿಗೆ ಜ್ವರ ಅಥವಾ ಮೈ-ಕೈ ನೋವು ಕಾಣಿಸಿಕೊಳ್ಳುತ್ತವೆ.
ಆದರೆ ಯಾವುದೇ ಅಡ್ಡಪರಿಣಾಮಗಳನ್ನು ಎದುರಿಸಿದಾಗ ನೀವು ನಿಮ್ಮ ಆಹಾರಕ್ರಮವನ್ನು ಗಮನದಲ್ಲಿರಿಸಿಕೊಳ್ಳುವುದು ತುಂಬಾ ಮುಖ್ಯ. ಹಾಗಾದರೆ ಲಸಿಕೆ ಪಡೆದ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುವ ಆಹಾರಗಳಾವುವು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಾವುವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:

ಹಸಿರು ತರಕಾರಿಗಳು:
ಆಹಾರದಲ್ಲಿ ಹಸಿರು ತರಕಾರಿಗಳು ಇರುವುದು ಅವಶ್ಯಕವಾಗಿದೆ. ಇದರಲ್ಲಿ ಪಾಲಕ್, ಕೋಸುಗಡ್ಡೆ ಮುಂತಾದ ತರಕಾರಿಗಳು ಸೇರಿಕೊಂಡಿವೆ. ಈ ಎಲ್ಲಾ ತರಕಾರಿಗಳು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚೆಚ್ಚು ಸೇರಿಸುವುದು ಉತ್ತಮ.

ಈರುಳ್ಳಿ:
ಈರುಳ್ಳಿ ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸುತ್ತದೆ. ಜೊತೆಗೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದ್ದು, ನಿಮ್ಮನ್ನು ಅಡ್ಡಪರಿಣಾಮಗಳಿಗೆ ತುತ್ತಾಗುವುದನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ:
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕಗಳಿವೆ. ಇದರ ಗುಣಗಳು ಇದನ್ನು ಉತ್ತಮ ಔಷಧಿಯನ್ನಾಗಿ ಮಾಡುತ್ತವೆ ಏಕೆಂದರೆ ನಿಮ್ಮ ದೇಹವನ್ನು ಒಳಗಿನಿಂದ ಪೋಷಿಸಲು ಈ ಎಲ್ಲಾ ಪೋಷಕಾಂಶಗಳು ಅವಶ್ಯಕ. ಆದ್ದರಿಂದ ಬೆಳ್ಳುಳ್ಳಿಯನ್ನು ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವುದು ಒಳ್ಳೆಯದು.

ಅರಿಶಿನ:
ಅರಿಶಿನವು ಉರಿಯೂತದ ವಿರುದ್ಧದ ಪ್ರಬಲ ಆಯುಧವಾಗಿದೆ. ನಿಮ್ಮ ಮೆದುಳನ್ನು ಒತ್ತಡದಿಂದ ರಕ್ಷಿಸುತ್ತದೆ, ಆದ್ದರಿಂದ ಅರಿಶಿನವನ್ನು ಸೇವಿಸಬೇಕು. ಇದು ನಿಮ್ಮನ್ನ ಎಲ್ಲಾ ರೀತಿಯ ಒತ್ತಡದಿಂದ ತಡೆಯುತ್ತದೆ.

ಕಪ್ಪು ದ್ರಾಕ್ಷಿ:
ನಿಮಗೆಲ್ಲರಿಗೂ ತಿಳಿದಿರುವ ಕಪ್ಪು ದ್ರಾಕ್ಷಿಯಲ್ಲಿ ಆ್ಯಂಟಿಆಕ್ಸಿಡೆಂಟ್ಗಳ ಮೂಲವಾಗಿದೆ. ಅವು ಸಿರೊಟೋನಿನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಮೊಸರಿನೊಂದಿಗೆ ಕಪ್ಪುದ್ರಾಕ್ಷಿಗಳನ್ನು ಸೇವಿಸಲು ಸೂಚಿಸಲಾಗಿದೆ.



Click it and Unblock the Notifications