Just In
- 1 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 3 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಿವು
ಕೊರೋನಾ ವೈರಸ್ ಲಸಿಕೆ ಬಗ್ಗೆ ಜನರಿಗೆ ಅನೇಕ ಪ್ರಶ್ನೆಗಳಿವೆ. ಲಸಿಕೆ ಹಾಕಿದ ನಂತರ ವ್ಯಕ್ತಿಯು ಅನುಭವಿಸುವ ಅಡ್ಡಪರಿಣಾಮಗಳು ಯಾವುವು ಎಂಬುದು ಈ ಪ್ರಶ್ನೆಗಳಲ್ಲಿ ಮೊದಲಿಗೆ ಬರುತ್ತದೆ. ಕೆಲವು ತಜ್ಞರ ಪ್ರಕಾರ, ಲಸಿಕೆ ಹಾಕಿದ ನಂತರ ಕೆಲವು ಜನರಿಗೆ ಜ್ವರ ಅಥವಾ ಮೈ-ಕೈ ನೋವು ಕಾಣಿಸಿಕೊಳ್ಳುತ್ತವೆ.
ಆದರೆ ಯಾವುದೇ ಅಡ್ಡಪರಿಣಾಮಗಳನ್ನು ಎದುರಿಸಿದಾಗ ನೀವು ನಿಮ್ಮ ಆಹಾರಕ್ರಮವನ್ನು ಗಮನದಲ್ಲಿರಿಸಿಕೊಳ್ಳುವುದು ತುಂಬಾ ಮುಖ್ಯ. ಹಾಗಾದರೆ ಲಸಿಕೆ ಪಡೆದ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುವ ಆಹಾರಗಳಾವುವು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದನ್ನು ಈ ಲೇಖನದಲ್ಲಿ ನೀಡಿದ್ದೇವೆ.
ಕೋವಿಡ್ ಲಸಿಕೆ ಪಡೆದ ಮೇಲೆ ನಿಮ್ಮ ಆಹಾರದಲ್ಲಿ ಸೇರಿಸಬೇಕಾದ ವಸ್ತುಗಳಾವುವು ಎಂಬುದನ್ನು ಈ ಕೆಳಗೆ ನೀಡಿದ್ದೇವೆ:
ಹಸಿರು ತರಕಾರಿಗಳು:
ಆಹಾರದಲ್ಲಿ ಹಸಿರು ತರಕಾರಿಗಳು ಇರುವುದು ಅವಶ್ಯಕವಾಗಿದೆ. ಇದರಲ್ಲಿ ಪಾಲಕ್, ಕೋಸುಗಡ್ಡೆ ಮುಂತಾದ ತರಕಾರಿಗಳು ಸೇರಿಕೊಂಡಿವೆ. ಈ ಎಲ್ಲಾ ತರಕಾರಿಗಳು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಇವುಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚೆಚ್ಚು ಸೇರಿಸುವುದು ಉತ್ತಮ.
ಈರುಳ್ಳಿ:
ಈರುಳ್ಳಿ ನಿಮ್ಮನ್ನು ಶಾಖದ ಹೊಡೆತದಿಂದ ರಕ್ಷಿಸುತ್ತದೆ. ಜೊತೆಗೆ ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯಲ್ಲಿ ಪ್ರೋಬಯಾಟಿಕ್ ಸಮೃದ್ಧವಾಗಿದ್ದು, ನಿಮ್ಮನ್ನು ಅಡ್ಡಪರಿಣಾಮಗಳಿಗೆ ತುತ್ತಾಗುವುದನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿ:
ಬೆಳ್ಳುಳ್ಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಪೊಟ್ಯಾಸಿಯಮ್ ಮತ್ತು ರಂಜಕಗಳಿವೆ. ಇದರ ಗುಣಗಳು ಇದನ್ನು ಉತ್ತಮ ಔಷಧಿಯನ್ನಾಗಿ ಮಾಡುತ್ತವೆ ಏಕೆಂದರೆ ನಿಮ್ಮ ದೇಹವನ್ನು ಒಳಗಿನಿಂದ ಪೋಷಿಸಲು ಈ ಎಲ್ಲಾ ಪೋಷಕಾಂಶಗಳು ಅವಶ್ಯಕ. ಆದ್ದರಿಂದ ಬೆಳ್ಳುಳ್ಳಿಯನ್ನು ನಿಮ್ಮ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವುದು ಒಳ್ಳೆಯದು.
ಅರಿಶಿನ:
ಅರಿಶಿನವು ಉರಿಯೂತದ ವಿರುದ್ಧದ ಪ್ರಬಲ ಆಯುಧವಾಗಿದೆ. ನಿಮ್ಮ ಮೆದುಳನ್ನು ಒತ್ತಡದಿಂದ ರಕ್ಷಿಸುತ್ತದೆ, ಆದ್ದರಿಂದ ಅರಿಶಿನವನ್ನು ಸೇವಿಸಬೇಕು. ಇದು ನಿಮ್ಮನ್ನ ಎಲ್ಲಾ ರೀತಿಯ ಒತ್ತಡದಿಂದ ತಡೆಯುತ್ತದೆ.
ಕಪ್ಪು ದ್ರಾಕ್ಷಿ:
ನಿಮಗೆಲ್ಲರಿಗೂ ತಿಳಿದಿರುವ ಕಪ್ಪು ದ್ರಾಕ್ಷಿಯಲ್ಲಿ ಆ್ಯಂಟಿಆಕ್ಸಿಡೆಂಟ್ಗಳ ಮೂಲವಾಗಿದೆ. ಅವು ಸಿರೊಟೋನಿನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತವೆ. ಮೊಸರಿನೊಂದಿಗೆ ಕಪ್ಪುದ್ರಾಕ್ಷಿಗಳನ್ನು ಸೇವಿಸಲು ಸೂಚಿಸಲಾಗಿದೆ.