Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಭಾರತದಲ್ಲೀಗ ಹೀಟ್ವೇವ್: ದೇಹದ ಮೇಲೆ ಬೀರುತ್ತಿರುವ ಗಂಭೀರ ಪರಿಣಾಮವೇನು?
ಭಾರತದಲ್ಲಿ ಬಿಸಿಲಿನ ಧಗೆ ತುಂಬಾನೇ ಹೆಚ್ಚಾಗಿದೆ. ರಾಜಾಸ್ಥಾನ, ದಹಲಿ, ಉತ್ತರ ಪ್ರದೇಶದಲ್ಲಿ ಉಷ್ಣಾಂಶ 45 ಡಿಗ್ರಿC ತಲುಪಿದೆ. ಉಷ್ಣಾಂಶ 36-37 ಡಿಗ್ರಿC ಇರುವಾಗಲೇ ಸಹಿಸಲು ಕಷ್ಟ. ಅದೇ ಈಗ 45 ಡಿಗ್ರಿC ತಲುಪಿದೆ ಎಂದಾದರೆ ಅಲ್ಲಿ ಉಷ್ಣಾಂಶ ಎಷ್ಟು ಭೀಕರವಾಗಿದೆ ಎಂಬುವುದನ್ನು ನಮಗೆ ಊಹಿಸಲೇ ಅಸಾಧ್ಯವಾಗಿದೆ, ಆದರೆ ಅಲ್ಲಿಯವರು ಅನುಭವಿಸುತ್ತಿದ್ದಾರೆ.
ಮಾರ್ಚ್ ತಿಂಗಳಿನಿಂದಲೇ ಬಿಸಿಲಿನ ಉರಿ ಹೆಚ್ಚಾಗಲರಂಭಿಸಿತ್ತು, ಏಪ್ರಿಲ್ ಕೊನೆಯ ವಾರದಲ್ಲಿ ಉಷ್ಣಾಂಶ ತುಂಬಾ ಹೆಚ್ಚಿದೆ, ಮೇ ತಿಂಗಳಿನಲ್ಲಿ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಉತ್ತರ ಭಾರತದಲ್ಲಿ ಹೀಟ್ ವೇವ್ ಶುರುವಾಗಿದೆ. ಮಳೆ ಕಡಿಮೆಯಾಗಿರುವುದು, ಗುಡುಗು ಹೆಚ್ಚು ಮಳೆ ಕಡಿಮೆ ಈ ರೀತಿಯ ಪ್ರಕೃತಿಯ ಬದಲಾವಣೆಯಿಂದಾಗಿ ಉಷ್ಣಾಂಶ ಹೆಚ್ಚಾಗುತ್ತಿದೆ.

ಹೀಟ್ವೇವ್ಎಂದರೇನು?
ಉಷ್ಣಾಂಶ ಅಧಿಕವಾದಾಗ ಆ ಪ್ರದೇಶವನ್ನು ಹೀಟ್ವೇವ್ ಪ್ರದೇಶ ಎಂದು ಕರೆಯಲಾಗುವುದು. ಸಮತಟ್ಟಾದ ಪ್ರದೇಶದಲ್ಲು ಉಷ್ಣಾಂಶ 40 ಡಿಗ್ರಿ C ತಲುಪಿದಾಗ, ಕರಾವಳಿ ಭಾಗದಲ್ಲಿ 37 ಡಿಗ್ರಿ C, ಬೆಟ್ಟ ಪ್ರದೇಶಗಳಲ್ಲಿ ಉಷ್ಣಾಂಶ 30 ಡಿಗ್ರಿ C ತಲುಪಿದರೆ ಅದಕ್ಕೆ ಹೀಟ್ವೇವ್ ಎಂದು ಕರೆಯಲಾಗುವುದು,
ಸಾಮಾನ್ಯ ಉಷ್ಣಾಂಶಗಿಂತ 4.5 ಡಿಗ್ರಿ C ಅಥವಾ 6.4 ಡಿಗ್ರಿ C ಹೆಚ್ಚಾದರೆ ಹೀಟ್ವೇವ್ ಎಂದು ಕರೆಯಲಾಗುವುದು. ಅದಕ್ಕಿಂತ ಹೆಚ್ಚು ಉಷ್ಣಾಂಶ ಹೆಚ್ಚಾದರೆ ಗಂಭೀರ ಬಿಸಿಗಾಳಿ ಎಂದು ಕರೆಯಲಾಗುವುದು.

ಹೀಟ್ವೇವ್ ಶರೀರದ ಮೇಲೆ ಪರಿಣಾಮವೇನು?
ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾದಾಗ ಇದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದರೆ ನಿರ್ಲಕ್ಷ್ಯ ಮಾಡಿದರೆ ಅಪಾಯ ಉಂಟಾಗಬಹುದು. ದೇಹದಲ್ಲಿ ಉಷ್ಣಾಂಶ ಹೆಚ್ಚಾದರೆ ರಕ್ತದೊತ್ತಡ ಕಡಿಮೆಯಾಗಿದೆ. ಅಲ್ಲದೆ ಹೃದಯದ ಮೇಲೆ ಹೆಚ್ಚು ಒತ್ತಡ ಬೀರುತ್ತದೆ.
ಕಡಿಮೆ ರಕ್ತದೊತ್ತಡ, ತಲೆಸುತ್ತು, ತಲೆನೋವು, ವಾಂತಿ ಈ ರೀತಿಯ ಸಮಸ್ಯೆ ಹೆಚ್ಚಾಗುವುದು. ಮೈ ತುಂಬಾ ಬೆವರುವುದರಿಂದ ದೇಹದಲ್ಲಿ ಉಪ್ಪಿನಂಶ ಕಡಿಮೆಯಾಗುವುದು, ನೀರಿನಂಶ ಕಡಿಮೆಯಾಗುವುದು. ಇದರಿಂದ ಸ್ನಾಯು ಸೆಳೆತ, ತಲೆಸುತ್ತು ಉಂಟಾಗುವುದು. ಹೃದಯಘಾತದ ಸಾಧ್ಯತೆ ಹೆಚ್ಚು.

ಸುರಕ್ಷತೆಗೆ ಏನು ಮಾಡಬೇಕು?
* ತುಂಬಾ ನೀರು ಕುಡಿಯಿರಿ.
* ಲೈಟ್ ಆಹಾರ ಸೇವಿಸಿ, ನೀರಿನಂಶ ಅಧಿಕವಿರುವ ಆಹಾರ ಸೇವಿಸಿ.
* ಸಡಿಲವಾದ ಕಾಟನ್ ಉಡುಪು ಧರಿಸಿ.
* ಬಿಸಿಲಿನಲ್ಲಿ ಓಡಾಡಬೇಡಿ.
* ಈ ಸಮಯದಲ್ಲಿ ಅನಗ್ಯತ ಪ್ರಯಾಣ ಮಾಡಿ.
* ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಕಂಡುಬಂದರೆ ಕೂಡಲೇ ವೈದರನ್ನು ಕಾಣಿ.



Click it and Unblock the Notifications