Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಭಾರತದಲ್ಲೀಗ ಹೀಟ್ವೇವ್: ದೇಹದ ಮೇಲೆ ಬೀರುತ್ತಿರುವ ಗಂಭೀರ ಪರಿಣಾಮವೇನು?
ಭಾರತದಲ್ಲಿ ಬಿಸಿಲಿನ ಧಗೆ ತುಂಬಾನೇ ಹೆಚ್ಚಾಗಿದೆ. ರಾಜಾಸ್ಥಾನ, ದಹಲಿ, ಉತ್ತರ ಪ್ರದೇಶದಲ್ಲಿ ಉಷ್ಣಾಂಶ 45 ಡಿಗ್ರಿC ತಲುಪಿದೆ. ಉಷ್ಣಾಂಶ 36-37 ಡಿಗ್ರಿC ಇರುವಾಗಲೇ ಸಹಿಸಲು ಕಷ್ಟ. ಅದೇ ಈಗ 45 ಡಿಗ್ರಿC ತಲುಪಿದೆ ಎಂದಾದರೆ ಅಲ್ಲಿ ಉಷ್ಣಾಂಶ ಎಷ್ಟು ಭೀಕರವಾಗಿದೆ ಎಂಬುವುದನ್ನು ನಮಗೆ ಊಹಿಸಲೇ ಅಸಾಧ್ಯವಾಗಿದೆ, ಆದರೆ ಅಲ್ಲಿಯವರು ಅನುಭವಿಸುತ್ತಿದ್ದಾರೆ.
ಮಾರ್ಚ್ ತಿಂಗಳಿನಿಂದಲೇ ಬಿಸಿಲಿನ ಉರಿ ಹೆಚ್ಚಾಗಲರಂಭಿಸಿತ್ತು, ಏಪ್ರಿಲ್ ಕೊನೆಯ ವಾರದಲ್ಲಿ ಉಷ್ಣಾಂಶ ತುಂಬಾ ಹೆಚ್ಚಿದೆ, ಮೇ ತಿಂಗಳಿನಲ್ಲಿ ಬಿಸಿಲಿನ ಧಗೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಉತ್ತರ ಭಾರತದಲ್ಲಿ ಹೀಟ್ ವೇವ್ ಶುರುವಾಗಿದೆ. ಮಳೆ ಕಡಿಮೆಯಾಗಿರುವುದು, ಗುಡುಗು ಹೆಚ್ಚು ಮಳೆ ಕಡಿಮೆ ಈ ರೀತಿಯ ಪ್ರಕೃತಿಯ ಬದಲಾವಣೆಯಿಂದಾಗಿ ಉಷ್ಣಾಂಶ ಹೆಚ್ಚಾಗುತ್ತಿದೆ.

ಹೀಟ್ವೇವ್ಎಂದರೇನು?
ಉಷ್ಣಾಂಶ ಅಧಿಕವಾದಾಗ ಆ ಪ್ರದೇಶವನ್ನು ಹೀಟ್ವೇವ್ ಪ್ರದೇಶ ಎಂದು ಕರೆಯಲಾಗುವುದು. ಸಮತಟ್ಟಾದ ಪ್ರದೇಶದಲ್ಲು ಉಷ್ಣಾಂಶ 40 ಡಿಗ್ರಿ C ತಲುಪಿದಾಗ, ಕರಾವಳಿ ಭಾಗದಲ್ಲಿ 37 ಡಿಗ್ರಿ C, ಬೆಟ್ಟ ಪ್ರದೇಶಗಳಲ್ಲಿ ಉಷ್ಣಾಂಶ 30 ಡಿಗ್ರಿ C ತಲುಪಿದರೆ ಅದಕ್ಕೆ ಹೀಟ್ವೇವ್ ಎಂದು ಕರೆಯಲಾಗುವುದು,
ಸಾಮಾನ್ಯ ಉಷ್ಣಾಂಶಗಿಂತ 4.5 ಡಿಗ್ರಿ C ಅಥವಾ 6.4 ಡಿಗ್ರಿ C ಹೆಚ್ಚಾದರೆ ಹೀಟ್ವೇವ್ ಎಂದು ಕರೆಯಲಾಗುವುದು. ಅದಕ್ಕಿಂತ ಹೆಚ್ಚು ಉಷ್ಣಾಂಶ ಹೆಚ್ಚಾದರೆ ಗಂಭೀರ ಬಿಸಿಗಾಳಿ ಎಂದು ಕರೆಯಲಾಗುವುದು.

ಹೀಟ್ವೇವ್ ಶರೀರದ ಮೇಲೆ ಪರಿಣಾಮವೇನು?
ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾದಾಗ ಇದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದರೆ ನಿರ್ಲಕ್ಷ್ಯ ಮಾಡಿದರೆ ಅಪಾಯ ಉಂಟಾಗಬಹುದು. ದೇಹದಲ್ಲಿ ಉಷ್ಣಾಂಶ ಹೆಚ್ಚಾದರೆ ರಕ್ತದೊತ್ತಡ ಕಡಿಮೆಯಾಗಿದೆ. ಅಲ್ಲದೆ ಹೃದಯದ ಮೇಲೆ ಹೆಚ್ಚು ಒತ್ತಡ ಬೀರುತ್ತದೆ.
ಕಡಿಮೆ ರಕ್ತದೊತ್ತಡ, ತಲೆಸುತ್ತು, ತಲೆನೋವು, ವಾಂತಿ ಈ ರೀತಿಯ ಸಮಸ್ಯೆ ಹೆಚ್ಚಾಗುವುದು. ಮೈ ತುಂಬಾ ಬೆವರುವುದರಿಂದ ದೇಹದಲ್ಲಿ ಉಪ್ಪಿನಂಶ ಕಡಿಮೆಯಾಗುವುದು, ನೀರಿನಂಶ ಕಡಿಮೆಯಾಗುವುದು. ಇದರಿಂದ ಸ್ನಾಯು ಸೆಳೆತ, ತಲೆಸುತ್ತು ಉಂಟಾಗುವುದು. ಹೃದಯಘಾತದ ಸಾಧ್ಯತೆ ಹೆಚ್ಚು.

ಸುರಕ್ಷತೆಗೆ ಏನು ಮಾಡಬೇಕು?
* ತುಂಬಾ ನೀರು ಕುಡಿಯಿರಿ.
* ಲೈಟ್ ಆಹಾರ ಸೇವಿಸಿ, ನೀರಿನಂಶ ಅಧಿಕವಿರುವ ಆಹಾರ ಸೇವಿಸಿ.
* ಸಡಿಲವಾದ ಕಾಟನ್ ಉಡುಪು ಧರಿಸಿ.
* ಬಿಸಿಲಿನಲ್ಲಿ ಓಡಾಡಬೇಡಿ.
* ಈ ಸಮಯದಲ್ಲಿ ಅನಗ್ಯತ ಪ್ರಯಾಣ ಮಾಡಿ.
* ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಕಂಡುಬಂದರೆ ಕೂಡಲೇ ವೈದರನ್ನು ಕಾಣಿ.



Click it and Unblock the Notifications