Latest Updates
-
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ
ಮಳೆಗಾಲದಲ್ಲಿ ಅಣಬೆ ತಿನ್ನಬಾರದೇ? ಏಕೆ?
ಮಳೆಗಾಲದಲ್ಲಿ ತೋಟದಲ್ಲಿ ಅಣಬೆಗಳು ಏಳುವುದು ಅಧಿಕ. ಏಕೆಂದರೆ ಮಣ್ಣು ಮಳೆಬಿದ್ದು ಮೆತ್ತಗಾಗಿರುತ್ತೆ, ಆಗ ಅಣಬೆಗಳು ಏಳಲಾರಂಭಿಸುತ್ತದೆ. ಬಗೆ-ಬಗೆಯ ಅಣಬೆಗಳು ಈ ಸಮಯದಲ್ಲಿ ಸಿಗುತ್ತವೆ, ಆದರೆ ಕೆಲವೊಂದು ಅಣಬೆಗಳು ತುಂಬಾ ವಿಷಕಾರಿಯೂ ಆಗಿರುವುದರಿಂದ ಮಳೆಗಾಲದಲ್ಲಿ ಅಣಬೆ ತಂದು ಸಾರು ಮಾಡುವಾಗ ತುಂಬಾನೇ ಹುಷಾರಾಗಿರಬೇಕು.
ಕೆಲ ಅಣಬೆಗಳನ್ನು ತಿಂದರೆ ಪ್ರಾಣಕ್ಕೆ ಕೂಡ ಅಪಾಯ ಉಂಟಾಗಬಹುದು, ಇನ್ನು ಬೆಳೆಸುವ ಅಣಬೆ ಯಾರೂ ಈ ಸಮಯದಲ್ಲಿ ಬ್ಯಾಕ್ಟಿರಿಯಾಗಳು , ವೈರಸ್ಗಳು ತಗುಲುವ ಸಾಧ್ಯತೆ ಇರುವುದರಿಂದ ಮಳೆಗಾಲದಲ್ಲಿ ಅಣಬೆಯನ್ನು ಬಳಸುವುದಾದರೆ ಎಚ್ಚರವಹಿಸಿ.

ಮಳೆಗಾಲದಲ್ಲಿ ಅಣಬೆಯನ್ನು ತಿನ್ನದಿದ್ದರೆ ಒಳ್ಳೆಯದು, ಏಕೆ?
ಮಳೆಗಾಲದಲ್ಲಿ ಅಣಬೆಗಳು ಹೆಚ್ಚಾಗಿ ಸಿಗುವುದಾದರೂ ಎಲ್ಲಾ ಬಗೆಯ ಅಣಬೆಗಳನ್ನು ತಿನ್ನಬೇಡಿ. ತಿನ್ನಲು ಸುರಕ್ಷಿತವಾಗಿದೆ ಎಂದಾಗಿದ್ದರೆ ಮಾತ್ರ ಅಡುಗೆ ಮಾಡಿ.
ಇಲ್ಲದಿದ್ದರೆ ಅಣಬೆಯನ್ನು ತಿಂದರೆ ವಾಂತಿ, ಬೇಧಿ ಈ ರೀತಿಯ ಸಮಸ್ಯೆ ಅಥವಾ ತ್ವಚೆ ಅಲರ್ಜಿ ಮುಂತಾದ ತೊಂದರೆಗಳು ಉಂಟಾಗಬಹುದು.

ಮಳೆಗಾಲದಲ್ಲೂ ಅಣಬೆ ಸೂಪರ್ ಫುಡ್ ಹೌದು
ಅಣಬೆ ಸೂಪರ್ ಫುಡ್ ಎನ್ನುವುದರಲ್ಲಿ ನೋ ಡೌಟ್. ಇದರಲ್ಲಿ ಪ್ರೊಟೀನ್, ವಿಟಮಿನ್ ಬಿ, ಕಾರ್ಬ್ಸ್, ಕ್ಯಾಲ್ಸಿಯಂ, ಕಬ್ಬಿಣದಂಶ, ಮೆಗ್ನಿಷ್ಯಿಯಂ,ಪೊಟಾಷ್ಯಿಯಂ, ಸೋಡಿಯಂ, ಸತು, ವಿಟಮಿನ್ ಸಿ, ವಿಟಮಿನ್, ಫೋಲೆಟ್, ಚೋಲೈನ್, ನಿಯಾಸಿನ್ ಹೀಗೆ ಅನೇಕ ವಿಟಮಿನ್ಸ್ ಇವೆ. ಇನ್ನು ಮಳೆಗಾಲದಲ್ಲಿ ಸೂರ್ಯನ ಬೆಳಕು ಮೈ ಮೇಲೆ ಬೀಳುವುದು ಕಡಿಮೆ, ಆಗ ವಿಟಮಿನ್ ಡಿ ಇರುವ ಆಹಾರ ಸೇವಿಸಬೇಕು, ಅಣಬೆಯಲ್ಲಿ ವಿಟಮಿನ್ ಡಿ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು.
* ಅಣಬೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ತುಂಬಾ ಒಳ್ಳೆಯದು. ಇದನ್ನು ತಿನ್ನುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮಧುಮೇಹಿಗಳಿಗೆ ಸೂಪರ್ ಆಹಾರವಾಗಿದೆ.
* ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅಣಬೆ ಸೂಪ್ ಮಾಡಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು.

ಮಳೆಗಾಲದಲ್ಲಿ ಈ ಆಹಾರಗಳನ್ನು ಸೇವಿಸುವಾಗ ಜಾಗ್ರತೆ
* ರಸ್ತೆ ಬದಿಯ ಆಹಾರಗಳು, ಜ್ಯೂಸ್ಗಳು
ಏಕೆಂದರೆ ಕಲುಷಿತ ನೀರು ಮಿಶ್ರವಾಗುವ ಸಾಧ್ಯತೆ ಇದೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆ ಉಂಟಾಗುವುದು.
* ಎಣ್ಣೆಯಲ್ಲಿ ಕರಿದ ಪದಾರ್ಥಗಳು
ಮಳೆಗಾಲದಲ್ಲಿ ಪಕೋಡ, ಬಜ್ಜಿ ಇವೆಲ್ಲಾ ಬಿಸಿಬಿಸಿ ಟೀ ಜೊತೆ ತಿನ್ನಲು ತುಂಬಾನೇ ಖುಷಿಯಾಗುವುದು, ಆದರೆ ಹೊರಗಡೆ ತಿಂದ್ರೆ ಅವರು ಬಳಸಿದ ಎಣ್ಣೆಯನ್ನೇ ಮತ್ತೆ ಬಳಸುವ ಸಾಧ್ಯತೆ ಇರುವುದರಿಂದ ಹೊಟ್ಟೆ ಸಮಸ್ಯೆ ಉಂಟಾಗುವುದು.
* ಹಸಿ ತರಕಾರಿ-ಹಣ್ಣುಗಳನ್ನು ಬಳಸಬೇಡಿ.
* ಆಹಾರವನ್ನು ಚೆನ್ನಾಗಿ ಬೇಯಿಸಿ ತಿನ್ನಿ.
* ಹಣ್ಣುಗಳನ್ನು ಚೆನ್ನಾಗಿ ತೊಳೆದು ತಿನ್ನಿ.



Click it and Unblock the Notifications











