Just In
- 3 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಳೆಗಾಲದಲ್ಲಿ ಅಣಬೆ ತಿನ್ನಬಾರದೇ? ಏಕೆ?
ಮಳೆಗಾಲದಲ್ಲಿ ತೋಟದಲ್ಲಿ ಅಣಬೆಗಳು ಏಳುವುದು ಅಧಿಕ. ಏಕೆಂದರೆ ಮಣ್ಣು ಮಳೆಬಿದ್ದು ಮೆತ್ತಗಾಗಿರುತ್ತೆ, ಆಗ ಅಣಬೆಗಳು ಏಳಲಾರಂಭಿಸುತ್ತದೆ. ಬಗೆ-ಬಗೆಯ ಅಣಬೆಗಳು ಈ ಸಮಯದಲ್ಲಿ ಸಿಗುತ್ತವೆ, ಆದರೆ ಕೆಲವೊಂದು ಅಣಬೆಗಳು ತುಂಬಾ ವಿಷಕಾರಿಯೂ ಆಗಿರುವುದರಿಂದ ಮಳೆಗಾಲದಲ್ಲಿ ಅಣಬೆ ತಂದು ಸಾರು ಮಾಡುವಾಗ ತುಂಬಾನೇ ಹುಷಾರಾಗಿರಬೇಕು.
ಕೆಲ ಅಣಬೆಗಳನ್ನು ತಿಂದರೆ ಪ್ರಾಣಕ್ಕೆ ಕೂಡ ಅಪಾಯ ಉಂಟಾಗಬಹುದು, ಇನ್ನು ಬೆಳೆಸುವ ಅಣಬೆ ಯಾರೂ ಈ ಸಮಯದಲ್ಲಿ ಬ್ಯಾಕ್ಟಿರಿಯಾಗಳು , ವೈರಸ್ಗಳು ತಗುಲುವ ಸಾಧ್ಯತೆ ಇರುವುದರಿಂದ ಮಳೆಗಾಲದಲ್ಲಿ ಅಣಬೆಯನ್ನು ಬಳಸುವುದಾದರೆ ಎಚ್ಚರವಹಿಸಿ.
ಮಳೆಗಾಲದಲ್ಲಿ ಅಣಬೆಯನ್ನು ತಿನ್ನದಿದ್ದರೆ ಒಳ್ಳೆಯದು, ಏಕೆ?
ಮಳೆಗಾಲದಲ್ಲಿ ಅಣಬೆಗಳು ಹೆಚ್ಚಾಗಿ ಸಿಗುವುದಾದರೂ ಎಲ್ಲಾ ಬಗೆಯ ಅಣಬೆಗಳನ್ನು ತಿನ್ನಬೇಡಿ. ತಿನ್ನಲು ಸುರಕ್ಷಿತವಾಗಿದೆ ಎಂದಾಗಿದ್ದರೆ ಮಾತ್ರ ಅಡುಗೆ ಮಾಡಿ.
ಇಲ್ಲದಿದ್ದರೆ ಅಣಬೆಯನ್ನು ತಿಂದರೆ ವಾಂತಿ, ಬೇಧಿ ಈ ರೀತಿಯ ಸಮಸ್ಯೆ ಅಥವಾ ತ್ವಚೆ ಅಲರ್ಜಿ ಮುಂತಾದ ತೊಂದರೆಗಳು ಉಂಟಾಗಬಹುದು.
ಮಳೆಗಾಲದಲ್ಲೂ ಅಣಬೆ ಸೂಪರ್ ಫುಡ್ ಹೌದು
ಅಣಬೆ ಸೂಪರ್ ಫುಡ್ ಎನ್ನುವುದರಲ್ಲಿ ನೋ ಡೌಟ್. ಇದರಲ್ಲಿ ಪ್ರೊಟೀನ್, ವಿಟಮಿನ್ ಬಿ, ಕಾರ್ಬ್ಸ್, ಕ್ಯಾಲ್ಸಿಯಂ, ಕಬ್ಬಿಣದಂಶ, ಮೆಗ್ನಿಷ್ಯಿಯಂ,ಪೊಟಾಷ್ಯಿಯಂ, ಸೋಡಿಯಂ, ಸತು, ವಿಟಮಿನ್ ಸಿ, ವಿಟಮಿನ್, ಫೋಲೆಟ್, ಚೋಲೈನ್, ನಿಯಾಸಿನ್ ಹೀಗೆ ಅನೇಕ ವಿಟಮಿನ್ಸ್ ಇವೆ. ಇನ್ನು ಮಳೆಗಾಲದಲ್ಲಿ ಸೂರ್ಯನ ಬೆಳಕು ಮೈ ಮೇಲೆ ಬೀಳುವುದು ಕಡಿಮೆ, ಆಗ ವಿಟಮಿನ್ ಡಿ ಇರುವ ಆಹಾರ ಸೇವಿಸಬೇಕು, ಅಣಬೆಯಲ್ಲಿ ವಿಟಮಿನ್ ಡಿ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು.
* ಅಣಬೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ತುಂಬಾ ಒಳ್ಳೆಯದು. ಇದನ್ನು ತಿನ್ನುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮಧುಮೇಹಿಗಳಿಗೆ ಸೂಪರ್ ಆಹಾರವಾಗಿದೆ.
* ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅಣಬೆ ಸೂಪ್ ಮಾಡಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು.
ಮಳೆಗಾಲದಲ್ಲಿ ಈ ಆಹಾರಗಳನ್ನು ಸೇವಿಸುವಾಗ ಜಾಗ್ರತೆ
* ರಸ್ತೆ ಬದಿಯ ಆಹಾರಗಳು, ಜ್ಯೂಸ್ಗಳು
ಏಕೆಂದರೆ ಕಲುಷಿತ ನೀರು ಮಿಶ್ರವಾಗುವ ಸಾಧ್ಯತೆ ಇದೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆ ಉಂಟಾಗುವುದು.
* ಎಣ್ಣೆಯಲ್ಲಿ ಕರಿದ ಪದಾರ್ಥಗಳು
ಮಳೆಗಾಲದಲ್ಲಿ ಪಕೋಡ, ಬಜ್ಜಿ ಇವೆಲ್ಲಾ ಬಿಸಿಬಿಸಿ ಟೀ ಜೊತೆ ತಿನ್ನಲು ತುಂಬಾನೇ ಖುಷಿಯಾಗುವುದು, ಆದರೆ ಹೊರಗಡೆ ತಿಂದ್ರೆ ಅವರು ಬಳಸಿದ ಎಣ್ಣೆಯನ್ನೇ ಮತ್ತೆ ಬಳಸುವ ಸಾಧ್ಯತೆ ಇರುವುದರಿಂದ ಹೊಟ್ಟೆ ಸಮಸ್ಯೆ ಉಂಟಾಗುವುದು.
* ಹಸಿ ತರಕಾರಿ-ಹಣ್ಣುಗಳನ್ನು ಬಳಸಬೇಡಿ.
* ಆಹಾರವನ್ನು ಚೆನ್ನಾಗಿ ಬೇಯಿಸಿ ತಿನ್ನಿ.
* ಹಣ್ಣುಗಳನ್ನು ಚೆನ್ನಾಗಿ ತೊಳೆದು ತಿನ್ನಿ.