Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಮಳೆಗಾಲ ಜೂನ್ ತಿಂಗಳಿನಲ್ಲಿ ಶುರುವಾಗುವುದು. ಈ ವರ್ಷ ಚಂಡ ಮಾರುತದಿಂದಾಗಿ ಮೇ ತಿಂಗಳಿನಲ್ಲಿಯೇ ಕೆಲವಡೆತುಂಬಾ ಮಳೆ ಸುರಿಯುತ್ತಿದೆ. ಮಳೆಗಾಲ ಬಂತೆಂದರೆ ಶೀತದ ವಾತಾವರಣ ಕಾರಣ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.
ಈ ಸಮಯದಲ್ಲಿ ಬೆಚ್ಚಗಿನ ಉಡುಪು ಹಾಗೂ ಬಿಸಿ-ಬಿಸಿಯಾದ ಆಹಾರ ಸೇವಿಸಬೇಕು. ನಾವಿಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಪ್ರಕಾರ ಯಾವ ಆಹಾರ ಸೇವಿಸಬೇಕು ನೋಡಿ:

ಮಳೆಗಾಲದಲ್ಲಿ ಕಾಡುವ ವಾತ, ಪಿತ್ತ ದೋಷ
ವಾತ ಹಾಗೂ ಪಿತ್ತ ದೋಷ: ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ:

ತಾಜಾ ಹಾಗೂ ಲಘು ಆಹಾರ ಸೇವಿಸಿ
* ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
* ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಮದು ಹರಳು ಕಲ್ಲುಪ್ಪು ತಿನ್ನಿ.
* ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.

ಇವುಗಳನ್ನು ತಿನ್ನಿ
* ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
* ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
* ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
* ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು.
ನೀರು ಚೆನ್ನಾಗಿ ಕುಡಿಯಿರಿ
ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.

ಯಾವ ಆಹಾರ ದೂರವಿಡಬೇಕು
* ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ.
ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
* ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ.
ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.

ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
* ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
* ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
* ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿಡಿ.
* ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
* ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
* ಕೊಳಕು ನೀರಿನಲ್ಲಿ ನಡೆದಾಡಬೇಡಿ.
* ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
* ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.
* ಈ ಸಮಯದಲ್ಲಿ ಸುಖಿ ಚಿಕಿತ್ಸೆ (ಪಂಚ ಕರ್ಮ) ಪಡೆಯಿರಿ.



Click it and Unblock the Notifications











