Latest Updates
-
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು!
ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಮಳೆಗಾಲ ಜೂನ್ ತಿಂಗಳಿನಲ್ಲಿ ಶುರುವಾಗುವುದು. ಈ ವರ್ಷ ಚಂಡ ಮಾರುತದಿಂದಾಗಿ ಮೇ ತಿಂಗಳಿನಲ್ಲಿಯೇ ಕೆಲವಡೆತುಂಬಾ ಮಳೆ ಸುರಿಯುತ್ತಿದೆ. ಮಳೆಗಾಲ ಬಂತೆಂದರೆ ಶೀತದ ವಾತಾವರಣ ಕಾರಣ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.
ಈ ಸಮಯದಲ್ಲಿ ಬೆಚ್ಚಗಿನ ಉಡುಪು ಹಾಗೂ ಬಿಸಿ-ಬಿಸಿಯಾದ ಆಹಾರ ಸೇವಿಸಬೇಕು. ನಾವಿಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಪ್ರಕಾರ ಯಾವ ಆಹಾರ ಸೇವಿಸಬೇಕು ನೋಡಿ:

ಮಳೆಗಾಲದಲ್ಲಿ ಕಾಡುವ ವಾತ, ಪಿತ್ತ ದೋಷ
ವಾತ ಹಾಗೂ ಪಿತ್ತ ದೋಷ: ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ:

ತಾಜಾ ಹಾಗೂ ಲಘು ಆಹಾರ ಸೇವಿಸಿ
* ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
* ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಮದು ಹರಳು ಕಲ್ಲುಪ್ಪು ತಿನ್ನಿ.
* ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.

ಇವುಗಳನ್ನು ತಿನ್ನಿ
* ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
* ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
* ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
* ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು.
ನೀರು ಚೆನ್ನಾಗಿ ಕುಡಿಯಿರಿ
ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.

ಯಾವ ಆಹಾರ ದೂರವಿಡಬೇಕು
* ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ.
ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
* ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ.
ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.

ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
* ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
* ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
* ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿಡಿ.
* ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
* ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
* ಕೊಳಕು ನೀರಿನಲ್ಲಿ ನಡೆದಾಡಬೇಡಿ.
* ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
* ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.
* ಈ ಸಮಯದಲ್ಲಿ ಸುಖಿ ಚಿಕಿತ್ಸೆ (ಪಂಚ ಕರ್ಮ) ಪಡೆಯಿರಿ.



Click it and Unblock the Notifications