Latest Updates
-
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ!
ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಮಳೆಗಾಲ ಜೂನ್ ತಿಂಗಳಿನಲ್ಲಿ ಶುರುವಾಗುವುದು. ಈ ವರ್ಷ ಚಂಡ ಮಾರುತದಿಂದಾಗಿ ಮೇ ತಿಂಗಳಿನಲ್ಲಿಯೇ ಕೆಲವಡೆತುಂಬಾ ಮಳೆ ಸುರಿಯುತ್ತಿದೆ. ಮಳೆಗಾಲ ಬಂತೆಂದರೆ ಶೀತದ ವಾತಾವರಣ ಕಾರಣ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.
ಈ ಸಮಯದಲ್ಲಿ ಬೆಚ್ಚಗಿನ ಉಡುಪು ಹಾಗೂ ಬಿಸಿ-ಬಿಸಿಯಾದ ಆಹಾರ ಸೇವಿಸಬೇಕು. ನಾವಿಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಪ್ರಕಾರ ಯಾವ ಆಹಾರ ಸೇವಿಸಬೇಕು ನೋಡಿ:

ಮಳೆಗಾಲದಲ್ಲಿ ಕಾಡುವ ವಾತ, ಪಿತ್ತ ದೋಷ
ವಾತ ಹಾಗೂ ಪಿತ್ತ ದೋಷ: ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ:

ತಾಜಾ ಹಾಗೂ ಲಘು ಆಹಾರ ಸೇವಿಸಿ
* ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
* ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಮದು ಹರಳು ಕಲ್ಲುಪ್ಪು ತಿನ್ನಿ.
* ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.

ಇವುಗಳನ್ನು ತಿನ್ನಿ
* ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
* ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
* ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
* ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು.
ನೀರು ಚೆನ್ನಾಗಿ ಕುಡಿಯಿರಿ
ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.

ಯಾವ ಆಹಾರ ದೂರವಿಡಬೇಕು
* ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ.
ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
* ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ.
ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.

ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
* ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
* ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
* ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿಡಿ.
* ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
* ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
* ಕೊಳಕು ನೀರಿನಲ್ಲಿ ನಡೆದಾಡಬೇಡಿ.
* ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
* ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.
* ಈ ಸಮಯದಲ್ಲಿ ಸುಖಿ ಚಿಕಿತ್ಸೆ (ಪಂಚ ಕರ್ಮ) ಪಡೆಯಿರಿ.



Click it and Unblock the Notifications











