Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಮಳೆಗಾಲ ಜೂನ್ ತಿಂಗಳಿನಲ್ಲಿ ಶುರುವಾಗುವುದು. ಈ ವರ್ಷ ಚಂಡ ಮಾರುತದಿಂದಾಗಿ ಮೇ ತಿಂಗಳಿನಲ್ಲಿಯೇ ಕೆಲವಡೆತುಂಬಾ ಮಳೆ ಸುರಿಯುತ್ತಿದೆ. ಮಳೆಗಾಲ ಬಂತೆಂದರೆ ಶೀತದ ವಾತಾವರಣ ಕಾರಣ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.
ಈ ಸಮಯದಲ್ಲಿ ಬೆಚ್ಚಗಿನ ಉಡುಪು ಹಾಗೂ ಬಿಸಿ-ಬಿಸಿಯಾದ ಆಹಾರ ಸೇವಿಸಬೇಕು. ನಾವಿಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಪ್ರಕಾರ ಯಾವ ಆಹಾರ ಸೇವಿಸಬೇಕು ನೋಡಿ:

ಮಳೆಗಾಲದಲ್ಲಿ ಕಾಡುವ ವಾತ, ಪಿತ್ತ ದೋಷ
ವಾತ ಹಾಗೂ ಪಿತ್ತ ದೋಷ: ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ:

ತಾಜಾ ಹಾಗೂ ಲಘು ಆಹಾರ ಸೇವಿಸಿ
* ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
* ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಮದು ಹರಳು ಕಲ್ಲುಪ್ಪು ತಿನ್ನಿ.
* ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.

ಇವುಗಳನ್ನು ತಿನ್ನಿ
* ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
* ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
* ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
* ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು.
ನೀರು ಚೆನ್ನಾಗಿ ಕುಡಿಯಿರಿ
ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.

ಯಾವ ಆಹಾರ ದೂರವಿಡಬೇಕು
* ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ.
ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
* ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ.
ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.

ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
* ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
* ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
* ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿಡಿ.
* ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
* ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
* ಕೊಳಕು ನೀರಿನಲ್ಲಿ ನಡೆದಾಡಬೇಡಿ.
* ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
* ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.
* ಈ ಸಮಯದಲ್ಲಿ ಸುಖಿ ಚಿಕಿತ್ಸೆ (ಪಂಚ ಕರ್ಮ) ಪಡೆಯಿರಿ.



Click it and Unblock the Notifications