Just In
- 4 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 4 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 5 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 6 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಟಿಪ್ಸ್
ಮಳೆಗಾಲ ಜೂನ್ ತಿಂಗಳಿನಲ್ಲಿ ಶುರುವಾಗುವುದು. ಈ ವರ್ಷ ಚಂಡ ಮಾರುತದಿಂದಾಗಿ ಮೇ ತಿಂಗಳಿನಲ್ಲಿಯೇ ಕೆಲವಡೆತುಂಬಾ ಮಳೆ ಸುರಿಯುತ್ತಿದೆ. ಮಳೆಗಾಲ ಬಂತೆಂದರೆ ಶೀತದ ವಾತಾವರಣ ಕಾರಣ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.
ಈ ಸಮಯದಲ್ಲಿ ಬೆಚ್ಚಗಿನ ಉಡುಪು ಹಾಗೂ ಬಿಸಿ-ಬಿಸಿಯಾದ ಆಹಾರ ಸೇವಿಸಬೇಕು. ನಾವಿಲ್ಲಿ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಪ್ರಕಾರ ಯಾವ ಆಹಾರ ಸೇವಿಸಬೇಕು ನೋಡಿ:
ಮಳೆಗಾಲದಲ್ಲಿ ಕಾಡುವ ವಾತ, ಪಿತ್ತ ದೋಷ
ವಾತ ಹಾಗೂ ಪಿತ್ತ ದೋಷ: ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ:
ತಾಜಾ ಹಾಗೂ ಲಘು ಆಹಾರ ಸೇವಿಸಿ
* ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
* ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಮದು ಹರಳು ಕಲ್ಲುಪ್ಪು ತಿನ್ನಿ.
* ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.
ಇವುಗಳನ್ನು ತಿನ್ನಿ
* ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
* ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
* ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
* ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು.
ನೀರು ಚೆನ್ನಾಗಿ ಕುಡಿಯಿರಿ
ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.
ಯಾವ ಆಹಾರ ದೂರವಿಡಬೇಕು
* ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ.
ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
* ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ.
ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.
ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು
* ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
* ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
* ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿಡಿ.
* ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
* ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
* ಕೊಳಕು ನೀರಿನಲ್ಲಿ ನಡೆದಾಡಬೇಡಿ.
* ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
* ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.
* ಈ ಸಮಯದಲ್ಲಿ ಸುಖಿ ಚಿಕಿತ್ಸೆ (ಪಂಚ ಕರ್ಮ) ಪಡೆಯಿರಿ.