Latest Updates
-
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಒಮಿಕ್ರಾನ್ ಸಾಮಾನ್ಯ ಶೀತವಲ್ಲ, ಹಗುರವಾಗಿ ಪರಿಗಣಿಸಬೇಡಿ: ಕೇಂದ್ರದ ಎಚ್ಚರಿಕೆ
ದೇಶದಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದರೂ ಇದರ ಅಪಾಯದ ಮಟ್ಟ ಕಡಿಮೆ ಎಂಬುವುದನ್ನು ತಜ್ಞರು ಹೇಳುತ್ತಿದ್ದಾರೆ, ಹಾಗಂತ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ ಎಂಬುವುದಾಗಿ ಎಚ್ಚರಿಸಿದ್ದಾರೆ. ICMRನ ಸಾಂಕ್ರಮಿಕ ರೋಗ ಶಾಸ್ತ್ರಜ್ಞರು ಒಮಿಕ್ರಾನ್ ಶೀತದಂತೆ ಸಾಮಾನ್ಯ ರೋಗವಾಗಿದೆ ಎಂದು ಮಂಗಳವಾರ ಹೇಳಿದ್ದರು, ಅದಕ್ಕೆ ಕೌಂಟರ್ ನೀಡಿದ ಕೇಂದ್ರ ನೀತಿ ಆಯೋಗದ ಶಾಂಕ್ರಮಿಕ ರೋಗ ತಜ್ಞ ಒಮಿಕ್ರಾನ್ ಅನ್ನು ಶೀತದಂತೆ ಹಗುರವಾಗಿ ಪರಿಗಣಿಸಿದರೆ ಅಪಾಯ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.
ಒಮಿಕ್ರಾನ್ ಎಂಬುವುದು ಸಾಮಾನ್ಯ ಶೀತವಲ್ಲ ಆದರೆ ಈ ರೀತಿಯ ತಪ್ಪು ಕಲ್ಪನೆ ಹೆಚ್ಚಾಗುತ್ತಿದೆ ಎಂದು ಭಾರತದ ಪ್ರಮುಖ ಸಾಂಕ್ರಮಿಕ ರೋಗ ಎಂದು ಡಾ. ವಿ ಕೆ ಪೌಲ್ ಹೇಳಿದ್ದಾರೆ.
ಒಮಿಕ್ರಾನ್ ಕುರಿತು ಜನರಲ್ಲಿ ಇನ್ನೂ ಅನೇಕ ಗೊಂದಲಗಳಿವೆ, ಒಮಿಕ್ರಾನ್ ಎಂದರೇನು, ಇದು ಅಪಾಯಕಾರಿಯೇ, ಇದನ್ನು ತಡೆಗಟ್ಟಲು ಜನರು ಏನು ಮಾಡಬೇಕು ಎಂಬುವುದನ್ನು ವಿವರಿಸಿದ್ದಾರೆ ನೋಡಿ:

ಒಮಿಕ್ರಾನ್ ಸಾಮಾನ್ಯ ಶೀತವಲ್ಲ
ಒಮಿಕ್ರಾನ್ ಸಾಮಾನ್ಯ ಶೀತವಲ್ಲ, ಆದರೆ ಒಮಿಕ್ರಾನ್ ಒಂದು ಸಾಮಾನ್ಯ ಶೀತದಂತೆ ಎಲ್ಲರಿಗೆ ಬರುವ ಸಾಧ್ಯತೆ ಇದೆ, ಒಮಿಕ್ರಾನ್ ಹರಡುವುದನ್ನು ಕಡಿಮೆ ಮಾಡುವುದು ಜನರ ಕೈಯಲ್ಲಿದೆ. ಮಾಸ್ಕ್ ಧರಿಸಿ, ಯಾರೂ ಇನ್ನೂ ಲಸಿಕೆ ಪಡೆದಿಲ್ಲವೂ ಅವರು ತಡಮಾಡದೆ ಲಸಿಕೆ ಪಡೆಯಿರಿ ಎಂದು ಡಾ. ಪೌಲ್ ಹೇಳಿದ್ದಾರೆ.

ಕೋವಿಡ್ 19 ತಡೆಗಟ್ಟಲು ಲಸಿಕೆ ಪರಿಣಾಮಕಾರಿ
ಲಸಿಕೆ ಪಡೆದವರಲ್ಲಿ ಕೋವಿಡ್ 19 ಸೋಂಕು ಹೆಚ್ಚು ಗಂಬೀರ ಪರಿಣಾಮ ಬೀರದಿರುವುದು ಈಗಾಗಲೇ ಸಾಬೀತಾಗಿದೆ. ಈ ಕೋವಿಡ್ ಸಾಂಕ್ರಮಿಕ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಪಡೆಯುವುದು ಅವಶ್ಯಕವಾಗಿದೆ. ಲಸಿಕೆ ಪಡೆಯದವರಲ್ಲಿ ಒಮಿಕ್ರಾನ್ ಹರಡುವ ಸಾಧ್ಯತೆ ಶೇ.78ರಷ್ಟು ಅಧಿಕವಿದೆ. ಎರಡು ಡೋಸ್ ಲಸಿಕೆ ಪಡೆದವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.90-95ರಷ್ಟು ಕಡಿಮೆ ಇದೆ. ಭಾರತದಲ್ಲಿ ಒಮಿಕ್ರಾನ್ ಕಡಿಮೆ ಇದೆ, ಆದರೆ ಈ ಸೋಂಕು ವೇಗವಾಗಿ ಹರಡುವುದರಿಂದ ಬಹುತೇಕ ಜನರಿಗೆ ತಗುಲವ ಸಾಧ್ಯತೆ ಇದೆ. ಆದ್ದರಿಂದ ನಿರ್ಲಕ್ಷ್ಯ ಮಾಡಬೇಡಿ, ಹೊರ ದೇಶಗಳಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ, ಆದ್ದರಿಂದ ಲಸಿಕೆ ಪಡೆಯಿರಿ ಹಾಗೂ ಕೋವಿಡ್ 19 ನಿಯಮಗಳನ್ನು ಪಾಲಿಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಹಾಕಲಾಗಿರುವ ರೂಲ್ಸ್ ಅನ್ನು ಮರು ಪರಿಶೀಲಿಸಬೇಕಾಗಿದೆ
ಮಂಗಳವಾರ ICMR( ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್)ನ ಪ್ರಸಿದ್ಧ ಸಾಂಕ್ರಮಿಕ ರೋಗ ಶಾಸ್ತ್ರಜ್ಞ ಜಯಪ್ರಕಾಶ್ ಮುಲಿಯಿಲ್ ಕೋವಿಡ್ 19 ತಡೆಗಟ್ಟಲು ಹಾಕಲಾಗಿರುವ ನಿರ್ಬಂಧಗಳನ್ನು ಮರುಪರಿಶೀಲಿಸುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಒಮಿಕ್ರಾನ್ ಹೆಚ್ಚೇನು ಅಪಾಯಕಾರಿಯಾದ ಸೋಂಕಲ್ಲ, ಇದು ಡೆಲ್ಟಾದಂತೆ ಗಂಭೀರ ಪರಿಣಾಮ ಬೀರುತ್ತಿಲ್ಲ ಎಂಬುವುದಾಗಿ ಹೇಳಿದ್ದರು.



Click it and Unblock the Notifications