Latest Updates
-
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ
ಒಮಿಕ್ರಾನ್ ಸಾಮಾನ್ಯ ಶೀತವಲ್ಲ, ಹಗುರವಾಗಿ ಪರಿಗಣಿಸಬೇಡಿ: ಕೇಂದ್ರದ ಎಚ್ಚರಿಕೆ
ದೇಶದಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದರೂ ಇದರ ಅಪಾಯದ ಮಟ್ಟ ಕಡಿಮೆ ಎಂಬುವುದನ್ನು ತಜ್ಞರು ಹೇಳುತ್ತಿದ್ದಾರೆ, ಹಾಗಂತ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ ಎಂಬುವುದಾಗಿ ಎಚ್ಚರಿಸಿದ್ದಾರೆ. ICMRನ ಸಾಂಕ್ರಮಿಕ ರೋಗ ಶಾಸ್ತ್ರಜ್ಞರು ಒಮಿಕ್ರಾನ್ ಶೀತದಂತೆ ಸಾಮಾನ್ಯ ರೋಗವಾಗಿದೆ ಎಂದು ಮಂಗಳವಾರ ಹೇಳಿದ್ದರು, ಅದಕ್ಕೆ ಕೌಂಟರ್ ನೀಡಿದ ಕೇಂದ್ರ ನೀತಿ ಆಯೋಗದ ಶಾಂಕ್ರಮಿಕ ರೋಗ ತಜ್ಞ ಒಮಿಕ್ರಾನ್ ಅನ್ನು ಶೀತದಂತೆ ಹಗುರವಾಗಿ ಪರಿಗಣಿಸಿದರೆ ಅಪಾಯ ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.
ಒಮಿಕ್ರಾನ್ ಎಂಬುವುದು ಸಾಮಾನ್ಯ ಶೀತವಲ್ಲ ಆದರೆ ಈ ರೀತಿಯ ತಪ್ಪು ಕಲ್ಪನೆ ಹೆಚ್ಚಾಗುತ್ತಿದೆ ಎಂದು ಭಾರತದ ಪ್ರಮುಖ ಸಾಂಕ್ರಮಿಕ ರೋಗ ಎಂದು ಡಾ. ವಿ ಕೆ ಪೌಲ್ ಹೇಳಿದ್ದಾರೆ.
ಒಮಿಕ್ರಾನ್ ಕುರಿತು ಜನರಲ್ಲಿ ಇನ್ನೂ ಅನೇಕ ಗೊಂದಲಗಳಿವೆ, ಒಮಿಕ್ರಾನ್ ಎಂದರೇನು, ಇದು ಅಪಾಯಕಾರಿಯೇ, ಇದನ್ನು ತಡೆಗಟ್ಟಲು ಜನರು ಏನು ಮಾಡಬೇಕು ಎಂಬುವುದನ್ನು ವಿವರಿಸಿದ್ದಾರೆ ನೋಡಿ:

ಒಮಿಕ್ರಾನ್ ಸಾಮಾನ್ಯ ಶೀತವಲ್ಲ
ಒಮಿಕ್ರಾನ್ ಸಾಮಾನ್ಯ ಶೀತವಲ್ಲ, ಆದರೆ ಒಮಿಕ್ರಾನ್ ಒಂದು ಸಾಮಾನ್ಯ ಶೀತದಂತೆ ಎಲ್ಲರಿಗೆ ಬರುವ ಸಾಧ್ಯತೆ ಇದೆ, ಒಮಿಕ್ರಾನ್ ಹರಡುವುದನ್ನು ಕಡಿಮೆ ಮಾಡುವುದು ಜನರ ಕೈಯಲ್ಲಿದೆ. ಮಾಸ್ಕ್ ಧರಿಸಿ, ಯಾರೂ ಇನ್ನೂ ಲಸಿಕೆ ಪಡೆದಿಲ್ಲವೂ ಅವರು ತಡಮಾಡದೆ ಲಸಿಕೆ ಪಡೆಯಿರಿ ಎಂದು ಡಾ. ಪೌಲ್ ಹೇಳಿದ್ದಾರೆ.

ಕೋವಿಡ್ 19 ತಡೆಗಟ್ಟಲು ಲಸಿಕೆ ಪರಿಣಾಮಕಾರಿ
ಲಸಿಕೆ ಪಡೆದವರಲ್ಲಿ ಕೋವಿಡ್ 19 ಸೋಂಕು ಹೆಚ್ಚು ಗಂಬೀರ ಪರಿಣಾಮ ಬೀರದಿರುವುದು ಈಗಾಗಲೇ ಸಾಬೀತಾಗಿದೆ. ಈ ಕೋವಿಡ್ ಸಾಂಕ್ರಮಿಕ ತಡೆಗಟ್ಟಲು ಪ್ರತಿಯೊಬ್ಬರು ಲಸಿಕೆ ಪಡೆಯುವುದು ಅವಶ್ಯಕವಾಗಿದೆ. ಲಸಿಕೆ ಪಡೆಯದವರಲ್ಲಿ ಒಮಿಕ್ರಾನ್ ಹರಡುವ ಸಾಧ್ಯತೆ ಶೇ.78ರಷ್ಟು ಅಧಿಕವಿದೆ. ಎರಡು ಡೋಸ್ ಲಸಿಕೆ ಪಡೆದವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.90-95ರಷ್ಟು ಕಡಿಮೆ ಇದೆ. ಭಾರತದಲ್ಲಿ ಒಮಿಕ್ರಾನ್ ಕಡಿಮೆ ಇದೆ, ಆದರೆ ಈ ಸೋಂಕು ವೇಗವಾಗಿ ಹರಡುವುದರಿಂದ ಬಹುತೇಕ ಜನರಿಗೆ ತಗುಲವ ಸಾಧ್ಯತೆ ಇದೆ. ಆದ್ದರಿಂದ ನಿರ್ಲಕ್ಷ್ಯ ಮಾಡಬೇಡಿ, ಹೊರ ದೇಶಗಳಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ, ಆದ್ದರಿಂದ ಲಸಿಕೆ ಪಡೆಯಿರಿ ಹಾಗೂ ಕೋವಿಡ್ 19 ನಿಯಮಗಳನ್ನು ಪಾಲಿಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಹಾಕಲಾಗಿರುವ ರೂಲ್ಸ್ ಅನ್ನು ಮರು ಪರಿಶೀಲಿಸಬೇಕಾಗಿದೆ
ಮಂಗಳವಾರ ICMR( ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್)ನ ಪ್ರಸಿದ್ಧ ಸಾಂಕ್ರಮಿಕ ರೋಗ ಶಾಸ್ತ್ರಜ್ಞ ಜಯಪ್ರಕಾಶ್ ಮುಲಿಯಿಲ್ ಕೋವಿಡ್ 19 ತಡೆಗಟ್ಟಲು ಹಾಕಲಾಗಿರುವ ನಿರ್ಬಂಧಗಳನ್ನು ಮರುಪರಿಶೀಲಿಸುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಒಮಿಕ್ರಾನ್ ಹೆಚ್ಚೇನು ಅಪಾಯಕಾರಿಯಾದ ಸೋಂಕಲ್ಲ, ಇದು ಡೆಲ್ಟಾದಂತೆ ಗಂಭೀರ ಪರಿಣಾಮ ಬೀರುತ್ತಿಲ್ಲ ಎಂಬುವುದಾಗಿ ಹೇಳಿದ್ದರು.



Click it and Unblock the Notifications