Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ಪಾರಿವಾಳದಿಂದ ಅಸ್ತಮಾ ರೋಗಿಗಳಿಗೆ ಅಪಾಯ ಹೆಚ್ಚು, ನಿರ್ಲಕ್ಷ್ಯ ಮಾಡಿದರೆ ಸಾವು ಕೂಡ ಸಂಭವಿಸುವುದು!
ನೀವು ಬೆಂಗಳೂರು ನಿವಾಸಿಯಾಗಿದ್ದರೆ ನೀವು ಪಾರಿವಾಳವನ್ನು ಸಾಕ ಬೇಕಾಗಿಲ್ಲ, ಸಾಕಷ್ಟು ಪಾರಿವಾಳಗಳು ನಿಮ್ಮ ಮನೆಯ ಟೆರೇಸ್ ಹಾಗೂ ಕಿಟಕಿ ಬಳಿ ಬಂದು ಕುಳಿತಿರುತ್ತವೆ. ಆ ಪಾರಿವಾಳಗಳನ್ನು ನೋಡುವಾಗ ತುಂಬಾನೇ ಮುದ್ದು ಮುದ್ದಾಗಿ ಇರುವುದರಿಂದ ಅವುಗಳನ್ನು ನೋಡಿ ಖುಷಿ ಪಡುತ್ತೇವೆ ಅಲ್ವಾ? ಆದರೆ ನಿಮಗೆ ಗೊತ್ತಿಲ್ಲದ ಒಂದು ಸಂಗತಿ ಗೊತ್ತಾ? ಈ ಮುದ್ದು ಮುದ್ದಾಗಿ ಕಾಣುವ ಪಾರಿವಾಳಗಳಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆಯಂತೆ, ಹೇಗೆ ಎಂದು ನೋಡೋಣ ಬನ್ನಿ:

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಪಾರಿವಾಳ ಸಂಖ್ಯೆ
ಬೆಂಗಳೂರಿನಲ್ಲಿ ಪಾರಿವಾಳ ಹೆಚ್ಚಾದರೆ ಏನು ತೊಂದರೆ ಅಂತ ಕೇಳುತ್ತಿದ್ದೀರಾ? ಬೆಂಗಳೂರು ಅಸ್ತಮಾ ನಗರವಾಗಿ ಗುರುತಿಸಿಕೊಂಡಿದೆ. ಹಿಂದೆ ಇದ್ದಂಥ ಪ್ರಕೃತಿ ಸೌಂದರ್ಯ ಈಗ ಇಲ್ಲ, ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಈ ಕಾರಣಗಳಿಂದ ಅಸ್ತಮಾ ಕಾಯಿಲೆ ಹೆಚ್ಚಾಗುತ್ತಿದೆ. ಅದರ ಜೊತೆಗೆ ಪಾರಿವಾಳ ಸಂಖ್ಯೆ ಹೆಚ್ಚಾದರೆ ಅಸ್ತಮಾ ಕಾಯಿಲೆ, ನ್ಯೂಮೋನಿಯಾ ಈ ಬಗೆಯ ಸಮಸ್ಯೆ ಮತ್ತಷ್ಟು ಹೆಚ್ಚಾಗಲಿದೆ.

ಪಾರಿವಾಳದ ಹಿಕ್ಕೆಯಿಂದ ಅಸ್ತಮಾ ಸಮಸ್ಯೆ ಹೆಚ್ಚಾಗುವುದು
ಪಾರಿವಾಳ ಅಲ್ಲಲ್ಲಿ ಹಿಕ್ಕೆ (ಮಲ ವಿಸರ್ಜನೆ)ಯಿಂದ ಅಸ್ತಮಾ ರೋಗಿಗಳ ಸಮಸ್ಯೆ ಮತ್ತಷ್ಟು ಅಧಿಕವಾಗುವುದು. ಕೆಲವರಲ್ಲಿ Hypersensitive Pneumonitis (HP) ಕೂಡ ಉಂಟಾಗುವುದು. ಆದ್ದರಿಂದ ಪಾರಿವಾಳ ಅಸ್ತಮಾ ರೋಗಿಗಳಿಗೆ ಅಪಾಯಕಾರಿಯಾಗಿದೆ.
ಅಸ್ತಮಾ ರೋಗಿಗಳು ಪಾರಿವಾಳದ ಬಗ್ಗೆ ಎಚ್ಚರವಹಿಸಬೇಕಾಗಿದೆ
ಮನೆಯಲ್ಲಿ ಯಾರಿಗಾದರೂ ಅಸ್ತಮಾ ಸಮಸ್ಯೆಯಿದ್ದರೆ ಅವರಿಗೆ ಅಸ್ತಮಾ ಸಮಸ್ಯೆ ಅಧಿಕವಾಗುವುದು pulmonologist(ಶ್ವಾಸಕೋಶ ತಜ್ಞರು) ಹೇಳುತ್ತಾರೆ.
ಕಳೆದ ವರ್ಷ ಖ್ಯಾತ ಬಹುಭಾಷೆ ನಟಿ ಅವರ ಪತಿ ಹೈಪರ್ಸೆನ್ಸಿಟಿವ್ ನ್ಯೂಮೋನಿಯಾದಿಂದಾಗಿ ಸಾವನ್ನಪ್ಪಿದರು, ಅವರ ಸಾವಿಗೆ ಕಾರಣ ಪಾರಿವಾಳ ಹಿಕ್ಕೆ ಎಂದು ಹೇಳಲಾಗಿತ್ತು.
ಪಾರಿವಾಳ ಹಿಕ್ಕೆಯಲ್ಲಿರುವ ಬ್ಯಾಕ್ಟಿರಿಯಾದಿಂದ ಶ್ವಾಸಕೋಶದ ಉರಿಯೂತ ಉಂಟಾಗುವುದು. ಇದಕ್ಕೆ ಚಿಕಿತ್ಸೆ ಸಿಗದಿದ್ದರೆ ವ್ಯಕ್ತಿ ಸಾವನ್ನಪ್ಪುವುದು.

ಪಾರಿವಾಳ ಸಾಕುತ್ತಿದ್ದರೆ ಅಥವಾ ಮನೆಗೆ ಬರುತ್ತಿದ್ದರೆ ಶುಚಿತ್ವದ ಕಡೆಗೆ ಗಮನ ಹರಿಸಿ
ನೀವು ಪಾರಿವಾಳವನ್ನು ಸಾಕುತ್ತಿದ್ದರೆ ಅದು ವಾಸಿಸುತ್ತಿರುವ ಸ್ಥಳವನ್ನು ತುಂಬಾ ಸ್ವಚ್ಛವಾಗಿಡಬೇಕು, ಇನ್ನು ಪಾರಿವಾಳ ಮನೆಯ ಕಿಟಿಕಿ ಬಳಿ ಅಥವಾ ಅವು ಕೂರಲು ಸ್ಥಳವಿರುವ ಕಡೆ ಗಲೀಜು ಮಾಡುತ್ತಿದ್ದರೆ ಅವುಗಳನ್ನು ತೆಗೆದು ಸ್ವಚ್ಛವಾಗಿಡಿ. ಅಸ್ತಮಾ ರೋಗಿಗಳು ಈ ಕೆಲಸ ಮಾಡಬಾರದು, ಮನೆಯಲ್ಲಿ ಇರುವ ಬೇರೆ ಸದಸ್ಯರು ಮನೆಯನ್ನು ಸ್ವಚ್ಛ ಮಾಡಬೇಕು.

ನಗರ ಬದುಕಿನ ಪ್ರಮುಖ ಅಂಗವಾಗಿದೆ ಪಾರಿವಾಳ
ಪರಿವಾಳದಿಂದ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತದೆ ಎಂದು ಹೇಳಿದರೆ ಬಹುತೇಕರು ನಂಬಲು ಸಾಧ್ಯವಿಲ್ಲ. ಏಕೆಂದರೆ ಆ ಪಕ್ಷಿಗಳು ಅವರ ಬದುಕಿನ ಅಂಗವಾಗಿರುತ್ತದೆ. ಕೆಲವರು ಮನೆಯಲ್ಲಿ ಪಾರಿವಾಳವನ್ನು ಸಾಕುತ್ತಾರೆ, ಇನ್ನು ಕೆಲವರು ನೀರು, ಅಕ್ಕಿ, ಧಾನ್ಯಗಳನ್ನು ನೀಡುತ್ತಾರೆ.
ನಿಮಗೆ ಅಸ್ತಮಾವಿದ್ದರೆ ಜಾಗ್ರತೆ: ಪಾರಿವಾಳ ನೀವು ಸಾಕುವುದಾದರೆ ಅಸ್ತಮಾ ಇರುವವರು ಅದರ ಬಳಿ ಹೋದರೆ ಸಮಸ್ಯೆ ಹೆಚ್ಚಾಗಬಹುದು ಜಾಗ್ರತೆ. ಆದ್ದರಿಂದ ಅವುಗಳಿರುವ ಕಡೆ ಶುಚಿತ್ವದ ಕಡೆ ತುಂಬಾನೇ ಗಮನ ನೀಡಬೇಕು.



Click it and Unblock the Notifications











