Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಾಗುತ್ತಿದೆ ಪಾರ್ಶ್ವವಾಯು, ಹೃದಯಾಘಾತ ಸಮಸ್ಯೆ
ಕೊರೊನಾ ಬಂದಾಗ ಒಂದು ಸಂಕಟ ಎದುರಾದರೆ ಅದರಿಂದ ಗುಣಮುಖರಾಗಿ ನಿಟ್ಟುಸಿರು ಬಿಡುವಾಗ ಬೇರೆ-ಬೇರೆ ಕಾಯಿಲೆಗಳು ಎದುರಾಗುತ್ತಿರುವುದರಿಂದ ಜನರಲ್ಲಿ ಭಯ, ತೊಂದರೆ ಕೊರೊನಾದಿಂದ ಗುಣಮುಖರಾದ ಮೇಲೂ ಮುಂದುವರೆಯುತ್ತಿದೆ.
ಕೊರೊನಾದಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್ ಫಂಗಸ್ ರೀತಿಯ ಸಮಸ್ಯೆ ಕಂಡು ಬಂದಿತ್ತು. ಇದೀಗ ಕೋವಿಡ್ 19 ಬಳಿಕ ಹೃದಯಾಘಾತ, ಪಾರ್ಶ್ವವಾಯು ಉಂಟಾಗುವ ಅಪಾಯವು ಇದೆ ಎಂದು ತಿಳಿದು ಬಂದಿದೆ.

ಗುಣಮುಖರಾದವರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ
ಮುಂಬಯಿಯ ಕಮೋಥೆ ನಿವಾಸಿ 36 ವರ್ಷದ ಚಂದ್ರ ಶೇಖರ ರೆಡ್ಡಿಗೆ ಮೊದಲಿಗೆ ಕೊರೊನಾ ಬಂತು, ರೋಗ ಲಕ್ಷಣಗಳೇನು ತೀವ್ರವಾಗಿರಲಿಲ್ಲ, ಕೋವಿಡ್ 19ನಿಂದ ಬೇಗನೆ ಗುಣಮುಖರಾದರು. ಅದಾದ ಬಳಿಕ ಅವರಿಗೆ ಸ್ಟ್ರೋಕ್ ಉಂಟಾಗಿ ಈಗ ಕಾಲುಗಳು ಸ್ವಾದೀನ ಕಳೆದುಕೊಂಡಿದೆ.
ಅವರು ಕೂರಲು ತಿಂಗಳು ಹಿಡಿಯಿತು, ಸಂಪೂರ್ಣ ಗುಣಮುಖರಾಗಲು 6 ತಿಂಗಳು ಬೇಕಾಗಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ವೈದ್ಯರು ಇಂಥ ಪ್ರಕರಣಗಳು ಕಂಡು ಬರುತ್ತಿರುವುದಾಗಿ ಹೇಳುತ್ತಿದ್ದಾರೆ.
ಕೆಲವರು ಕೋವಿಡ್ 19ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಹೋಗಿ 2 ತಿಂಗಳು ಆದ ಬಳಿಕ ಹೃದಯಾಘಾತ, ಪಾರ್ಶ್ವವಾಯು ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.

ವೈದ್ಯರ ಅಭಿಪ್ರಾಯವೇನು?
ರೆಡ್ಡಿಯವರಿಗೆ ಚಿಕಿತ್ಸೆ ನೀಡಿದ ಮೆದುಳು ಹಾಗೂ ಬೆನ್ನು ಮೂಳೆಯ ಸರ್ಜನ್ ಆಗಿರುವ ಡಾ. ವಿಶ್ವನಾಥ್ ಅಯ್ಯರ್ ಈ ಏಪ್ರಿಲ್ ತಿಂಗಳಿನಲ್ಲಿ ಇಂಥ 4 ಕೇಸ್ಗಳು ಬಂದಿದ್ದೆವು ಅಂದಿದ್ದಾರೆ. ರೋಗಿಯಲ್ಲಿ ಉರಿಯೂತ ಉಂಟಾಗಿ ರಕ್ತ ಹೆಪ್ಪುಗಟ್ಟುವುದರಿಂದ ಸ್ಟ್ರೋಕ್ ಉಂಟಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
KEM ಆಸ್ಪತ್ರೆಯ ನ್ಯೂರೋಲಾಜಿಸ್ಟ್ ಡಾ. ನಿತಿನ್ ಡಾಂಗೆ ಕೋವಿಡ್ 19 ಗುಣಮುಖರಾದವರಲ್ಲಿ 20ಕ್ಕೂ ಹೆಚ್ಚು ಜನರು ಪಾರ್ಶ್ವವಾಯು, ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ. ತುಂಬಾ ಚಿಕ್ಕ ಪ್ರಾಯದವರಲ್ಲೂ ಈ ರೀತಿಯ ಸಮಸ್ಯೆ ಕಂಡು ಬರುತ್ತಿದೆ.
ಥಾಣೆಯ ಜ್ಯುಪಿಟರ್ ಆಸ್ಪತ್ರೆಯ ಡಾ. ಆಶಿಷ್ ನಬರ್ ಅವರು ತಮ್ಮ ಕುಟುಂಬದಲ್ಲಿ ಈ ರೀತಿ ಒಬ್ಬರನ್ನು ಕಳೆದುಕೊಂಡಿದ್ದಾರೆ. ಅವರ 50 ವರ್ಷ ಪ್ರಾಯದ ಸಂಬಂಧಿ ಕೋವಿಡ್ 19 ನಿಂದ ಗುಣಮುಖರಾಗಿ 5-6 ದಿನಗಳ ಬಳಿಕ ಪಾರ್ಶ್ವವಾಯು ಉಂಟಾಯಿತು. ಅವರ ಅಪಧಮಿನಿಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಎಂಆರ್ಐ ಸ್ಕ್ಯಾನಿಂಗ್ನಲ್ಲಿ ತಿಳಿದು ಬಂತು. ಸರ್ಜರಿ ಮಾಡಲಾಯಿತು, ಆದರೆ ಅವರನ್ನು ವೆಂಟಿಲೇಟರ್ನಲ್ಲಿ ಹಾಕಬೇಕಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಕೋವಿಡ್ 19ನಿದ ಚೇತರಿಸಿ ಬಳಿಕವೂ ಆರೋಗ್ಯ ಜೋಪಾನ
ಕೊರೊನಾದಿಂದ ಗುಣಮುಖರಾದೆವು ಎಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ವೈದ್ಯರು ಸೂಚಿಸಿದ ವ್ಯಾಯಾಮ ಮಾಡಿ. ಉಸಿರಾಟದ ವ್ಯಾಯಾಮವನ್ನು ಕನಿಷ್ಠ ಆರು ತಿಂಗಳು ಕಡ್ಡಾಯವಾಗಿ ಮಾಡಿ, ನಂತರವೂ ಮಾಡಿದರೆ ಮತ್ತಷ್ಟು ಒಳ್ಳೆಯದು. ಆರೋಗ್ಯಕರ ಆಹಾರ ಸೇವಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಿ.



Click it and Unblock the Notifications