Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರತಿದಿನ ಅನ್ನ ಸೇವಿಸುತ್ತಿದ್ದೀರಾ? ಹಾಗಾದ್ರೆ ಈ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ!
ಅನ್ನ ಭಾರತೀಯ ಪಾಕಪದ್ಧತಿಯ ಪ್ರಮುಖ ಭಾಗವಾಗಿದೆ. ಅನ್ನವಿಲ್ಲದೇ ಊಟ ಸಂಪೂರ್ಣವಾಗಲಾರದು. ಮೂರು ಹೊತ್ತು ಅನ್ನವನ್ನೇ ಸೇವಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಅತಿಯಾದ ಅನ್ನ ಸೇವನೆಯು ಆರೋಗ್ಯದ ಮೇಲೆ ಪರಿಣಾಮ ಬೀರುವುದೆಂದು ತಿಳಿದಿದೆಯೇ?.
ರೊಟ್ಟಿಗಿಂತ ಅನ್ನವನ್ನು ತಯಾರಿಸುವುದು ಸುಲಭ ಹಾಗೂ ಸಮಯ ಉಳಿತಾಯವೂ ಆಗುವುದು. ಆದರೆ ಇದನ್ನು ಅತಿಯಾಗಿ ಸೇವಿಸುವುದರಿಂದ ನೀವು ಅನಾರೋಗ್ಯಕ್ಕೆ ಒಳಗಾಗಬಹುದು. ಅದು ಹೇಗೆ ಎಂಬುದನ್ನು ಇಲ್ಲಿ ನೋಡೋಣ.
ಅತಿಯಾದ ಅನ್ನ ಸೇವೆನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಅಡ್ಡಪರಿಣಾಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಮಧುಮೇಹದ ಅಪಾಯ:
ಪ್ರತಿನಿತ್ಯ ಅನ್ನವನ್ನು ತಿನ್ನುವುದರಿಂದ ಅಥವಾ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಅನೇಕ ಅನಾನುಕೂಲತೆಗಳಿವೆ. ಅವುಗಳಲ್ಲಿ ಒಂದು ಮಧುಮೇಹಕ್ಕೆ ಸಂಬಂಧಿಸಿದೆ. ಬೇಯಿಸಿದ ಒಂದು ಬಟ್ಟಲು ಅನ್ನದಲ್ಲಿ ಕನಿಷ್ಠ 10 ಟೀಚಮಚ ಕ್ಯಾಲೋರಿ ಇರುತ್ತದೆ. ಪ್ರತಿದಿನ ಈ ಪ್ರಮಾಣದ ಅನ್ನವನ್ನು ಸೇವಿಸಿದರೆ, ಮಧುಮೇಹದ ಅಪಾಯವು ಹೆಚ್ಚಾಗುತ್ತದೆ. ಇದು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಮಧುಮೇಹಿಗಳು ಅನ್ನವನ್ನು ಸೇವಿಸದಂತೆ ಸೂಚಿಸಲಾಗುತ್ತದೆ.

ತೂಕ ಹೆಚ್ಚಾಗುವುದು:
ಅನ್ನದಲ್ಲಿ ಹೆಚ್ಚಿನ ಕ್ಯಾಲೋರಿ ಇರುವುದರಿಂದ, ಇದನ್ನು ತಿನ್ನುವುದರಿಂದ ತೂಕ ಹೆಚ್ಚಾಗಿ ಬೊಜ್ಜು ಬರುವ ಅಪಾಯವಿದೆ. ನೀವು ಈಗಾಗಲೇ ಅಧಿಕ ತೂಕ ಹೊಂದಿದ್ದರೆ, ಕಡಿಮೆ ಅನ್ನವನ್ನು ಸೇವಿಸಿ. ಇಲ್ಲವಾದಲ್ಲಿ ನಿಮ್ಮ ತೂಕ ಹೆಚ್ಚಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ನಾಂದಿಯಾಗುತ್ತದೆ.

ಅತಿಯಾಗಿ ತಿನ್ನುವುದು:
ಅಕ್ಕಿ ಭಾರವಾಗಿರುವುದರಿಂದ ಹೊಟ್ಟೆ ಬೇಗನೆ ತುಂಬುತ್ತದೆ ಆದರೆ, ಸುಲಭವಾಗಿ ಜೀರ್ಣವಾಗುತ್ತದೆ. ಆದ್ದರಿಂದ ಸ್ವಲ್ಪ ಸಮಯದ ನಂತರ ಮತ್ತೆ ಹಸಿವು ಉಂಟಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ನೀವು ಏನನ್ನಾದರೂ ತಿನ್ನುತ್ತೀರಿ. ಹೀಗೆ ಅನ್ನದ ಸೇವನೆಯು ಅತಿಯಾಗಿ ತಿನ್ನುವುದಕ್ಕೆ ಕಾರಣವಾಗುತ್ತದೆ. ಅತಿಯಾಗಿ ತಿನ್ನುವುದು ತೂಕ ಹೆಚ್ಚಳ, ಬೊಜ್ಜಿಗೆ ಕಾರಣವಾಗುತ್ತದೆ. ಹೀಗೆ ಒಂದೊಂದು ಅಂಶಗಳು ಒಂದೊಂದಕ್ಕೆ ಸಂಬಂಧಹೊಂದಿರುತ್ತವೆ.

ಜೀರ್ಣಶಕ್ತಿ ದುರ್ಬಲವಾಗುವುದು:
ಬಿಳಿ ಅಕ್ಕಿಯಲ್ಲಿ ನಾರಿನ ಪ್ರಮಾಣ ತುಂಬಾ ಕಡಿಮೆ. ಆದ್ದರಿಂದ, ಅಕ್ಕಿಯನ್ನು ಅತಿಯಾಗಿ ಸೇವಿಸಿದರೆ ಗ್ಯಾಸ್-ಆಸಿಡಿಟಿ ಸಮಸ್ಯೆ ಆರಂಭವಾಗುತ್ತದೆ. ಇದು ಜೀರ್ಣಕ್ರಿಯೆ ದುರ್ಬಲವಾಗಲು ಅಥವಾ ಜೀರ್ಣಶಕ್ತಿ ಕುಂಠಿತವಾಗಲು ಕಾರಣವಾಗುತ್ತದೆ.

ಸೋಮಾರಿತನ ಬೆಳೆಯುವುದು:
ಅನ್ನ ತಿನ್ನುವುದರಿಂದ ನಿಮಗೆ ನಿದ್ದೆ ಸುಲಭವಾಗಿ ಬರುತ್ತದೆ. ವಿಶೇಷವಾಗಿ ಹಗಲಿನಲ್ಲಿ ತಿಂದರೆ, ನಿದ್ರೆಯ ಜೊತೆಗೆ ಹೋರಾಡುವುದು ಕಷ್ಟವಾಗುತ್ತದೆ. ಅಕ್ಕಿಯನ್ನು ತಿನ್ನುವುದರಿಂದ, ದೇಹದಲ್ಲಿ ಸಕ್ಕರೆಯ ಪ್ರಮಾಣವು ವೇಗವಾಗಿ ಹೆಚ್ಚಾಗುತ್ತದೆ, ಇದರಿಂದಾಗಿ ನಿದ್ರೆ ಆರಂಭವಾಗುತ್ತದೆ. ಆದ್ದರಿಂದ ಅತಿಯಾಗಿ ಅನ್ನ ಸೇವಿಸುವುದನ್ನು ಕಡಿಮೆ ಮಾಡಿ, ಇದು ಜಡ ಅಥವಾ ಸೋಮಾರಿತನಕ್ಕೆ ಕಾರಣವಾಗುವುದು.

ವಿಟಮಿನ್ ಸಿ ಕೊರತೆ:
ಬಿಳಿ ಅಕ್ಕಿಯಲ್ಲಿ ವಿಟಮಿನ್-ಸಿ ಪ್ರಮಾಣವು ತುಂಬಾ ಕಡಿಮೆಯಾಗಿದೆ, ಹಾಗಾಗಿ ಇದನ್ನು ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಪೌಷ್ಟಿಕಾಂಶ ಸಿಗುವುದಿಲ್ಲ. ಇದರಿಂದ ಮೂಳೆಗಳಿಗೆ ಯಾವುದೇ ಪೋಷಕಾಂಶ ಲಭ್ಯವಾಗದೇ, ಮೂಳೆಗಳು ದುರ್ಬಲಗೊಳ್ಳಲು ಆರಂಭವಾಗುತ್ತದೆ. ಆದ್ದರಿಂದ ಇನ್ನು ಮುಂದಾದರೂ ಅತಿಯಾದ ಅನ್ನಸೇವನೆಯನ್ನು ಆದಷ್ಟು ಕಡಿಮೆ ಮಾಡಿ.



Click it and Unblock the Notifications