Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕೋವಿಡ್ 19 ಬಳಿಕ ಬಂದ ಮಧುಮೇಹ ಶಾಶ್ವತವಲ್ಲ: ಅಧ್ಯಯನ
ಕೋವಿಡ್ 19 ಸೋಂಕಿನಿಂದ ಚೇತರಿಸಿದವರಿಗೆ ಮಧುಮೇಹದ ಆತಂಕ ಉಂಟಾಗಿತ್ತು. ಹೌದು, ಕೋವಿಡ್ 19 ಸೋಂಕಿನಿಂದ ಚೇತರಿಸಿದವರಲ್ಲಿ ಅನೇಕರಿಗೆ ಮಧುಮೇಹ ಸಮಸ್ಯೆ ಕಂಡು ಬಂದಿತ್ತು. ಆದರೆ ಹಾಗೆ ಉಂಟಾಗಿದ್ದರೆ ಭಯ ಪಡಬೇಕಾಗಿಲ್ಲ, ಅದರಿಂದ ಗುಣಮುಖರಾಗುವಿರಿ ಎಂದು ಎಂಜಿಹೆಚ್(Massachusetts General Hospita)ಹೇಳಿರುವುದರಿಂದ ಹೆಚ್ಚಿನವರಿಗೆ ಸಮಧಾನ ಉಂಟಾಗಿದೆ.
ಎಂಜಿಹೆಚ್ ಆಸ್ಪತ್ರೆ ಅಧ್ಯಯನ ನಡೆಸಿ ಈ ವರದಿ ನೀಡಿದೆ. ಆ ವರದಿ ಪ್ರಕಾರ ಕೋವಿಡ್ 19 ಸೋಂಕಿನ ಬಳಿಕ ಕಾಣಿಸಿಕೊಳ್ಳುವ ಮಧುಮೇಹ ಶಾಶ್ವತವಲ್ಲ ಎಂದು ಹೇಳಿದೆ.

ಕೋವಿಡ್-19 ಬಳಿಕ ಮಧುಮೇಹಕ್ಕೆ ಕಾರಣವೇನು?
ಕೋವಿಡ್ 19 ಸೋಂಕು ತಗುಲಿದಾಗ ಹೆಚ್ಚಿನವರು ಅತ್ಯಧಿಕ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದಾಗಿ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಿರುತ್ತದೆ. ಈ ರೀತಿ ಬಂದ ಮಧುಮೇಹ ಶಾಶ್ವತವಾಗಿ ಉಳಿಯುವುದಿಲ್ಲ. ಸ್ವಲ್ಪ ಸಮಯದ ಬಳಿಕ ಸರಿಹೋಗುವುದು.

ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಲು ಸ್ಟಿರಾಯ್ಡ್ ಕೂಡ ಕಾರಣ
ಕೋವಿಡ್ 19 ವೈರಸ್ ತಗುಲಿದಾಗ ರೋಗಿಗಳು ಬೇಗನೆ ಚೇತರಿಸಿಕೊಳ್ಳುವಂತೆ ಮಾಡಲು ಸ್ಟಿರಾಯ್ಡ್ ನೀಡಲಾಗುತ್ತಿತ್ತು. ಇದು ಕೂಡ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗಲು ಎಂದು ಕಾರಣ ಎಂಬುವುದನ್ನು ತಜ್ಞರು ಹೇಳಿದ್ದಾರೆ.

ಕೆಲವರಿಗೆ ಮಧುಮೇಹ ಇದೆ ಎಂಬುವುದು ಕೋವಿಡ್ ಚಿಕಿತ್ಸೆ ಸಮಯದಲ್ಲಿ ಗೊತ್ತಾಗಿದ್ದು
ಕೆಲವರಲ್ಲಿ ಕೋವಿಡ್ 19ನ ಬಳಿಕ ಮಧುಮೇಹ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಅದಕ್ಕಿಂತ ಮೊದಲೇ ಇತ್ತು, ಆದರೆ ಅವರು ಪರೀಕ್ಷೆ ಮಾಡಿರಲಿಲ್ಲ, ಕೋವಿಡ್ 19ಗೆ ಚಿಕಿತ್ಸೆ ನೀಡುವಾಗ ಅವರಿಗೆ ಮಧುಮೇಹ ಇರುವುದು ತಿಳಿದುಬಂತು ಎಂದು
ಡಾ. ಮಹೇಶ್ ಡಿ ಎಂ (Consultant, Endocrinology, Aster CMI Hospital) ಹೇಳಿದ್ದಾರೆ.

ಕೋವಿಡ್ 19 ನಂತರ ಬಂದ ಮಧುಮೇಹ ಕಡಿಮೆಯಾಗಬಹುದು
ಕೋವಿಡ್ 19 ನಂತರ ಮಧುಮೇಹ ಬಂದರೆ ಕೆಲವರಿಗೆ ಮೆಡಿಷನ್ ಮೂಲಕ ಇನ್ನು ಕೆಲವರಿಗೆ ಇನ್ಸುಲಿನ್ ಮೂಲಕ ಚಿಕಿತ್ಸೆ ನೀಡಲಾಗುವುದು. ಇದರಲ್ಲಿ ಹೆಚ್ಚಿನವರಿಗೆ ಮಧುಮೇಹ ನಿಯಂತ್ರಣಕ್ಕೆ ಬಂದು ಮುಂದೆ ಚಿಕಿತ್ಸೆ ಅಗ್ಯತವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆದರೆ ಕೆಲವರಿಗೆ ಮಧುಮೇಹ ಚಿಕಿತ್ಸೆ ಮುಂದುರೆಸಬೇಕಾಗುತ್ತದೆ. ಅದರ ಕುರಿತು ವೈದ್ಯರು ಪರಿಶೀಲಿಸಿ ಮಾಹಿತಿ ನಿಡುತ್ತಾರೆ.



Click it and Unblock the Notifications