Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಕೆಸುವಿನ ಎಲೆ: ಪತ್ರೊಡೆ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆ
ಪತ್ರೊಡೆ, ಕೆಸುವಿನ ಸಾರು, ಕೆಸುವಿನ ಗೊಜ್ಜು ಇವೆಲ್ಲಾ ಮಳೆಗಾಲದ ವಿಶೇಷ ಅಡುಗೆಗಳಾಗಿವೆ. ಮಲೆಗಾಲದಲ್ಲಿ ಬೆಚ್ಚಗಿನ ಆಹಾರಗಳನ್ನು, ಮೈ ಬೆಚ್ಚಗಿಡುವ ಆಹಾರಗಳನ್ನು ಸೇವಿಸಬೇಕು, ಕೆಸುವಿನ ಎಲೆಯಿಂದ ಮಾಡಿದ ಆಹಾರ ಮೈ ಉಷ್ಣಾಂಶ ಹೆಚ್ಚಿಸುವುದು, ಆದ್ದರಿಂದ ಮಳೆಗಾಲದಲ್ಲಿ ಕೆಸುವಿನಿಂದ ಆಹಾರ ಸೇವಿಸುವುದು ಒಳ್ಳೆಯದು.
ಕೆಸುವಿನ ಎಲೆಯಲ್ಲಿ ತುಂಬಾ ಪೋಷಕಾಂಶಗಳಿರುವುದರಿಂದ ಇದರಿಂದ ತಯಾರಿಸುವ ಪತ್ರೊಡೆಯನ್ನು ಔಷಧೀಯ ಗುಣಗಳಿರುವ ಆಹಾರ ಎಂದು ಆಯುಷ್ ಇಲಾಖೆ ಹೇಳಿದೆ. ಕೆಸುವಿನ ಎಲೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಬಿ, ಥೈಯಾಮಿನ್, ರಿಬೋಫ್ಲೇವಿನ್, ಫೋಲೆಟ್, ಮ್ಯಾಂಗನೀಸ್, ತಾಮ್ರ, ಪೊಟಾಷ್ಯಿಯಂ, ಕಬ್ಬಿಣದಂಶ ಇರುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಕೂಡ ಇದೆ.
ಕೆಸುವಿನ ಎಲೆಯಲ್ಲಿ ವಿಟಮಿನ್ಸ್ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶವಿರುವುದರಿಂದ ಪತ್ರೊಡೆ ಸವಿಯುವುದರಿಂದ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ
ಪತ್ರೊಡೆ ಸವಿಯುವುದರಿಂದ ಅದರಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಮಳೆಗಾಲದಲ್ಲಿ ಜೀರ್ಣಕ್ರಿಯೆ ಸ್ವಲ್ಪ ನಿಧಾನವಾಗಿರುತ್ತದೆ. ಪತ್ರೊಡೆಯಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.

ರಕ್ತದೊತ್ತಡ ನಿಯಂತ್ರಿಸುತ್ತದೆ
ಪತ್ರೊಡೆ ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಉರಿಯೂತದ ಸಮಸ್ಯೆ ಕಡಿಮೆಯಾಗುವುದು. ಹಲ್ಲು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ, ಅಲ್ಲದೆ ಸಂಧಿವಾತದ ಸಮಸ್ಯೆ ತಡೆಗಟ್ಟುವುದು.

ಮಧುಮೇಹಿಗಳಿಗೆ ಉತ್ತಮವಾದ ಆಹಾರ
ಕೆಸುವಿನ ಎಲೆ ರಕ್ತದಲ್ಲಿ ಗ್ಲೂಕೋಸ್ ಹಾಗೂ ಇನ್ಸುಲಿನ್ ನಿಯಂತ್ರಿಸುತ್ತದೆ ಆದ್ದರಿಂದ ಮಧುಮೇಹಿಗಳಿಗೆ ಅತ್ಯುತ್ತಮವಾದ ಆಹಾರವಾಗಿದೆ. ಮಧುಮೇಹಿಗಳು ಕೆಸುವಿನ ಎಲೆಯ ಗೊಜ್ಜು ಕೂಡ ಮಾಡಿ ಸವಿಯಬಹುದು. ಕೆಸವಿನ ಎಲೆ ರಕ್ತದೊತ್ತಡ ಕೂಡ ನಿಯಂತ್ರಣದಲ್ಲಿಡುತ್ತದೆ.

ತ್ವಚೆ ಆರೋಗ್ಯಕ್ಕೆ ಒಳ್ಳೆಯದು
ಇದರಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿಗೆ ಹಾಗೂ ತ್ವಚೆ ಒಳ್ಳೆಯದು, ಅಲ್ಲದೆ ತ್ವಚೆ ಮೃದುವಾಗುವುದು. ಅಲ್ಲದೆ ತ್ವಚೆಯ ಹೊಳಪು ಕೂಡ ಹೆಚ್ಚುವುದು. '
ನೀವು ಕೆಸುವಿನ ಎಲೆಯಿಂದ ಮಾಡಿದ ಅಡುಗೆಗೆ ಹುಣಸೆ ಹಣ್ಣು ಸೇರಿಸಿ ಮಾಡಬೇಕು, ಇಲ್ಲದಿದ್ದರೆ ಬಾಯಿ ತುರಿಸಬಹುದು.



Click it and Unblock the Notifications