Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಕೆಸುವಿನ ಎಲೆ: ಪತ್ರೊಡೆ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆ
ಪತ್ರೊಡೆ, ಕೆಸುವಿನ ಸಾರು, ಕೆಸುವಿನ ಗೊಜ್ಜು ಇವೆಲ್ಲಾ ಮಳೆಗಾಲದ ವಿಶೇಷ ಅಡುಗೆಗಳಾಗಿವೆ. ಮಲೆಗಾಲದಲ್ಲಿ ಬೆಚ್ಚಗಿನ ಆಹಾರಗಳನ್ನು, ಮೈ ಬೆಚ್ಚಗಿಡುವ ಆಹಾರಗಳನ್ನು ಸೇವಿಸಬೇಕು, ಕೆಸುವಿನ ಎಲೆಯಿಂದ ಮಾಡಿದ ಆಹಾರ ಮೈ ಉಷ್ಣಾಂಶ ಹೆಚ್ಚಿಸುವುದು, ಆದ್ದರಿಂದ ಮಳೆಗಾಲದಲ್ಲಿ ಕೆಸುವಿನಿಂದ ಆಹಾರ ಸೇವಿಸುವುದು ಒಳ್ಳೆಯದು.
ಕೆಸುವಿನ ಎಲೆಯಲ್ಲಿ ತುಂಬಾ ಪೋಷಕಾಂಶಗಳಿರುವುದರಿಂದ ಇದರಿಂದ ತಯಾರಿಸುವ ಪತ್ರೊಡೆಯನ್ನು ಔಷಧೀಯ ಗುಣಗಳಿರುವ ಆಹಾರ ಎಂದು ಆಯುಷ್ ಇಲಾಖೆ ಹೇಳಿದೆ. ಕೆಸುವಿನ ಎಲೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಬಿ, ಥೈಯಾಮಿನ್, ರಿಬೋಫ್ಲೇವಿನ್, ಫೋಲೆಟ್, ಮ್ಯಾಂಗನೀಸ್, ತಾಮ್ರ, ಪೊಟಾಷ್ಯಿಯಂ, ಕಬ್ಬಿಣದಂಶ ಇರುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಕೂಡ ಇದೆ.
ಕೆಸುವಿನ ಎಲೆಯಲ್ಲಿ ವಿಟಮಿನ್ಸ್ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶವಿರುವುದರಿಂದ ಪತ್ರೊಡೆ ಸವಿಯುವುದರಿಂದ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ
ಪತ್ರೊಡೆ ಸವಿಯುವುದರಿಂದ ಅದರಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಮಳೆಗಾಲದಲ್ಲಿ ಜೀರ್ಣಕ್ರಿಯೆ ಸ್ವಲ್ಪ ನಿಧಾನವಾಗಿರುತ್ತದೆ. ಪತ್ರೊಡೆಯಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.

ರಕ್ತದೊತ್ತಡ ನಿಯಂತ್ರಿಸುತ್ತದೆ
ಪತ್ರೊಡೆ ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಉರಿಯೂತದ ಸಮಸ್ಯೆ ಕಡಿಮೆಯಾಗುವುದು. ಹಲ್ಲು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ, ಅಲ್ಲದೆ ಸಂಧಿವಾತದ ಸಮಸ್ಯೆ ತಡೆಗಟ್ಟುವುದು.

ಮಧುಮೇಹಿಗಳಿಗೆ ಉತ್ತಮವಾದ ಆಹಾರ
ಕೆಸುವಿನ ಎಲೆ ರಕ್ತದಲ್ಲಿ ಗ್ಲೂಕೋಸ್ ಹಾಗೂ ಇನ್ಸುಲಿನ್ ನಿಯಂತ್ರಿಸುತ್ತದೆ ಆದ್ದರಿಂದ ಮಧುಮೇಹಿಗಳಿಗೆ ಅತ್ಯುತ್ತಮವಾದ ಆಹಾರವಾಗಿದೆ. ಮಧುಮೇಹಿಗಳು ಕೆಸುವಿನ ಎಲೆಯ ಗೊಜ್ಜು ಕೂಡ ಮಾಡಿ ಸವಿಯಬಹುದು. ಕೆಸವಿನ ಎಲೆ ರಕ್ತದೊತ್ತಡ ಕೂಡ ನಿಯಂತ್ರಣದಲ್ಲಿಡುತ್ತದೆ.

ತ್ವಚೆ ಆರೋಗ್ಯಕ್ಕೆ ಒಳ್ಳೆಯದು
ಇದರಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿಗೆ ಹಾಗೂ ತ್ವಚೆ ಒಳ್ಳೆಯದು, ಅಲ್ಲದೆ ತ್ವಚೆ ಮೃದುವಾಗುವುದು. ಅಲ್ಲದೆ ತ್ವಚೆಯ ಹೊಳಪು ಕೂಡ ಹೆಚ್ಚುವುದು. '
ನೀವು ಕೆಸುವಿನ ಎಲೆಯಿಂದ ಮಾಡಿದ ಅಡುಗೆಗೆ ಹುಣಸೆ ಹಣ್ಣು ಸೇರಿಸಿ ಮಾಡಬೇಕು, ಇಲ್ಲದಿದ್ದರೆ ಬಾಯಿ ತುರಿಸಬಹುದು.



Click it and Unblock the Notifications