Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಕೆಸುವಿನ ಎಲೆ: ಪತ್ರೊಡೆ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆ
ಪತ್ರೊಡೆ, ಕೆಸುವಿನ ಸಾರು, ಕೆಸುವಿನ ಗೊಜ್ಜು ಇವೆಲ್ಲಾ ಮಳೆಗಾಲದ ವಿಶೇಷ ಅಡುಗೆಗಳಾಗಿವೆ. ಮಲೆಗಾಲದಲ್ಲಿ ಬೆಚ್ಚಗಿನ ಆಹಾರಗಳನ್ನು, ಮೈ ಬೆಚ್ಚಗಿಡುವ ಆಹಾರಗಳನ್ನು ಸೇವಿಸಬೇಕು, ಕೆಸುವಿನ ಎಲೆಯಿಂದ ಮಾಡಿದ ಆಹಾರ ಮೈ ಉಷ್ಣಾಂಶ ಹೆಚ್ಚಿಸುವುದು, ಆದ್ದರಿಂದ ಮಳೆಗಾಲದಲ್ಲಿ ಕೆಸುವಿನಿಂದ ಆಹಾರ ಸೇವಿಸುವುದು ಒಳ್ಳೆಯದು.
ಕೆಸುವಿನ ಎಲೆಯಲ್ಲಿ ತುಂಬಾ ಪೋಷಕಾಂಶಗಳಿರುವುದರಿಂದ ಇದರಿಂದ ತಯಾರಿಸುವ ಪತ್ರೊಡೆಯನ್ನು ಔಷಧೀಯ ಗುಣಗಳಿರುವ ಆಹಾರ ಎಂದು ಆಯುಷ್ ಇಲಾಖೆ ಹೇಳಿದೆ. ಕೆಸುವಿನ ಎಲೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಬಿ, ಥೈಯಾಮಿನ್, ರಿಬೋಫ್ಲೇವಿನ್, ಫೋಲೆಟ್, ಮ್ಯಾಂಗನೀಸ್, ತಾಮ್ರ, ಪೊಟಾಷ್ಯಿಯಂ, ಕಬ್ಬಿಣದಂಶ ಇರುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಕೂಡ ಇದೆ.
ಕೆಸುವಿನ ಎಲೆಯಲ್ಲಿ ವಿಟಮಿನ್ಸ್ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶವಿರುವುದರಿಂದ ಪತ್ರೊಡೆ ಸವಿಯುವುದರಿಂದ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ
ಪತ್ರೊಡೆ ಸವಿಯುವುದರಿಂದ ಅದರಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಮಳೆಗಾಲದಲ್ಲಿ ಜೀರ್ಣಕ್ರಿಯೆ ಸ್ವಲ್ಪ ನಿಧಾನವಾಗಿರುತ್ತದೆ. ಪತ್ರೊಡೆಯಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.

ರಕ್ತದೊತ್ತಡ ನಿಯಂತ್ರಿಸುತ್ತದೆ
ಪತ್ರೊಡೆ ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಉರಿಯೂತದ ಸಮಸ್ಯೆ ಕಡಿಮೆಯಾಗುವುದು. ಹಲ್ಲು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ, ಅಲ್ಲದೆ ಸಂಧಿವಾತದ ಸಮಸ್ಯೆ ತಡೆಗಟ್ಟುವುದು.

ಮಧುಮೇಹಿಗಳಿಗೆ ಉತ್ತಮವಾದ ಆಹಾರ
ಕೆಸುವಿನ ಎಲೆ ರಕ್ತದಲ್ಲಿ ಗ್ಲೂಕೋಸ್ ಹಾಗೂ ಇನ್ಸುಲಿನ್ ನಿಯಂತ್ರಿಸುತ್ತದೆ ಆದ್ದರಿಂದ ಮಧುಮೇಹಿಗಳಿಗೆ ಅತ್ಯುತ್ತಮವಾದ ಆಹಾರವಾಗಿದೆ. ಮಧುಮೇಹಿಗಳು ಕೆಸುವಿನ ಎಲೆಯ ಗೊಜ್ಜು ಕೂಡ ಮಾಡಿ ಸವಿಯಬಹುದು. ಕೆಸವಿನ ಎಲೆ ರಕ್ತದೊತ್ತಡ ಕೂಡ ನಿಯಂತ್ರಣದಲ್ಲಿಡುತ್ತದೆ.

ತ್ವಚೆ ಆರೋಗ್ಯಕ್ಕೆ ಒಳ್ಳೆಯದು
ಇದರಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿಗೆ ಹಾಗೂ ತ್ವಚೆ ಒಳ್ಳೆಯದು, ಅಲ್ಲದೆ ತ್ವಚೆ ಮೃದುವಾಗುವುದು. ಅಲ್ಲದೆ ತ್ವಚೆಯ ಹೊಳಪು ಕೂಡ ಹೆಚ್ಚುವುದು. '
ನೀವು ಕೆಸುವಿನ ಎಲೆಯಿಂದ ಮಾಡಿದ ಅಡುಗೆಗೆ ಹುಣಸೆ ಹಣ್ಣು ಸೇರಿಸಿ ಮಾಡಬೇಕು, ಇಲ್ಲದಿದ್ದರೆ ಬಾಯಿ ತುರಿಸಬಹುದು.



Click it and Unblock the Notifications
