Just In
Don't Miss
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಸುವಿನ ಎಲೆ: ಪತ್ರೊಡೆ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆ
ಪತ್ರೊಡೆ, ಕೆಸುವಿನ ಸಾರು, ಕೆಸುವಿನ ಗೊಜ್ಜು ಇವೆಲ್ಲಾ ಮಳೆಗಾಲದ ವಿಶೇಷ ಅಡುಗೆಗಳಾಗಿವೆ. ಮಲೆಗಾಲದಲ್ಲಿ ಬೆಚ್ಚಗಿನ ಆಹಾರಗಳನ್ನು, ಮೈ ಬೆಚ್ಚಗಿಡುವ ಆಹಾರಗಳನ್ನು ಸೇವಿಸಬೇಕು, ಕೆಸುವಿನ ಎಲೆಯಿಂದ ಮಾಡಿದ ಆಹಾರ ಮೈ ಉಷ್ಣಾಂಶ ಹೆಚ್ಚಿಸುವುದು, ಆದ್ದರಿಂದ ಮಳೆಗಾಲದಲ್ಲಿ ಕೆಸುವಿನಿಂದ ಆಹಾರ ಸೇವಿಸುವುದು ಒಳ್ಳೆಯದು.
ಕೆಸುವಿನ ಎಲೆಯಲ್ಲಿ ತುಂಬಾ ಪೋಷಕಾಂಶಗಳಿರುವುದರಿಂದ ಇದರಿಂದ ತಯಾರಿಸುವ ಪತ್ರೊಡೆಯನ್ನು ಔಷಧೀಯ ಗುಣಗಳಿರುವ ಆಹಾರ ಎಂದು ಆಯುಷ್ ಇಲಾಖೆ ಹೇಳಿದೆ. ಕೆಸುವಿನ ಎಲೆಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಬಿ, ಥೈಯಾಮಿನ್, ರಿಬೋಫ್ಲೇವಿನ್, ಫೋಲೆಟ್, ಮ್ಯಾಂಗನೀಸ್, ತಾಮ್ರ, ಪೊಟಾಷ್ಯಿಯಂ, ಕಬ್ಬಿಣದಂಶ ಇರುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಕೂಡ ಇದೆ.
ಕೆಸುವಿನ ಎಲೆಯಲ್ಲಿ ವಿಟಮಿನ್ಸ್ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶವಿರುವುದರಿಂದ ಪತ್ರೊಡೆ ಸವಿಯುವುದರಿಂದ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.
ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ
ಪತ್ರೊಡೆ ಸವಿಯುವುದರಿಂದ ಅದರಲ್ಲಿ ಆ್ಯಂಟಿಆಕ್ಸಿಡೆಂಟ್ ಅಧಿಕವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಮಳೆಗಾಲದಲ್ಲಿ ಜೀರ್ಣಕ್ರಿಯೆ ಸ್ವಲ್ಪ ನಿಧಾನವಾಗಿರುತ್ತದೆ. ಪತ್ರೊಡೆಯಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ತುಂಬಾನೇ ಸಹಕಾರಿ.
ರಕ್ತದೊತ್ತಡ ನಿಯಂತ್ರಿಸುತ್ತದೆ
ಪತ್ರೊಡೆ ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಉರಿಯೂತದ ಸಮಸ್ಯೆ ಕಡಿಮೆಯಾಗುವುದು. ಹಲ್ಲು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ, ಅಲ್ಲದೆ ಸಂಧಿವಾತದ ಸಮಸ್ಯೆ ತಡೆಗಟ್ಟುವುದು.
ಮಧುಮೇಹಿಗಳಿಗೆ ಉತ್ತಮವಾದ ಆಹಾರ
ಕೆಸುವಿನ ಎಲೆ ರಕ್ತದಲ್ಲಿ ಗ್ಲೂಕೋಸ್ ಹಾಗೂ ಇನ್ಸುಲಿನ್ ನಿಯಂತ್ರಿಸುತ್ತದೆ ಆದ್ದರಿಂದ ಮಧುಮೇಹಿಗಳಿಗೆ ಅತ್ಯುತ್ತಮವಾದ ಆಹಾರವಾಗಿದೆ. ಮಧುಮೇಹಿಗಳು ಕೆಸುವಿನ ಎಲೆಯ ಗೊಜ್ಜು ಕೂಡ ಮಾಡಿ ಸವಿಯಬಹುದು. ಕೆಸವಿನ ಎಲೆ ರಕ್ತದೊತ್ತಡ ಕೂಡ ನಿಯಂತ್ರಣದಲ್ಲಿಡುತ್ತದೆ.
ತ್ವಚೆ ಆರೋಗ್ಯಕ್ಕೆ ಒಳ್ಳೆಯದು
ಇದರಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿಗೆ ಹಾಗೂ ತ್ವಚೆ ಒಳ್ಳೆಯದು, ಅಲ್ಲದೆ ತ್ವಚೆ ಮೃದುವಾಗುವುದು. ಅಲ್ಲದೆ ತ್ವಚೆಯ ಹೊಳಪು ಕೂಡ ಹೆಚ್ಚುವುದು. '
ನೀವು ಕೆಸುವಿನ ಎಲೆಯಿಂದ ಮಾಡಿದ ಅಡುಗೆಗೆ ಹುಣಸೆ ಹಣ್ಣು ಸೇರಿಸಿ ಮಾಡಬೇಕು, ಇಲ್ಲದಿದ್ದರೆ ಬಾಯಿ ತುರಿಸಬಹುದು.