Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಈ ಕೆಟ್ಟ ಅಹಾರ ಅಭ್ಯಾಸಗಳು ರಕ್ತದ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಎಚ್ಚರ..!
ಬೆಳಗಿನ ಆಹಾರ ಇಡೀ ದಿನದ ಎಲ್ಲಾ ಹೊತ್ತಿನ ಅಹಾರಕ್ಕಿಂತ ನಿಮ್ಮ ಆರೋಗ್ಯದ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ, ಇದರ ಬಗ್ಗೆ ವಿಶೇಷ ಕಾಳಜಿ ವಹಿಸುವುದ ಅತ್ಯಂತ ಮುಖ್ಯ. ಬೆಳಗಿನ ಉಪಾಹಾರ ಬಿಟ್ಟರೆ ನಿಮ್ಮ ರಕ್ತದ ಸಕ್ಕರೆಯ ಮಟ್ಟ ಕಡಿಮೆ ಅಗುತ್ತದೆ ಎಚ್ಚರ.
ಅದರಲ್ಲೂ ಮಧುಮೇಹ ರೋಗಿಗಳಂತೂ ಬೆಳಗಿನ ಆಹಾರ ಮತ್ತು ಅದರ ಪೌಷ್ಟಿಕಾಂಶಗಳ ಬಗ್ಗೆ ಸಾಕಷ್ಟು ಕಾಳಜಿವಹಿಸಲೇಬೇಕು.

ಅಧಿಕ ಕೊಬ್ಬಿನಾಂಶ, ಪ್ರೋಟೀನ್ ಇದ್ದರೂ ಆರೋಗ್ಯಕರವಲ್ಲ, ಉಪಾಹಾರ ಬಿಟ್ಟರೂ, ಪೈಬರ್ ಅಂಶ ಕಡಿಮೆ ಆದರೂ ಆರೋಗ್ಯಕರವಲ್ಲ.
ಈ 4 ಅನಾರೋಗ್ಯಕರ ಉಪಹಾರ ಅಭ್ಯಾಸಗಳು ದೇಹದಲ್ಲಿ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಉಂಟುಮಾಡಬಹುದು.

1. ಉಪಹಾರ ತಪ್ಪಿಸುವುದು
ಬೆಳಗಿನ ಊಟವನ್ನು ತಪ್ಪಿಸಿಕೊಂಡರೆ ಅದು ಆರೋಗ್ಯಕ್ಕೆ ಹಾನಿಕರ. ಸಂಶೋಧನೆಯ ಪ್ರಕಾರ, ಟೈಪ್ 2 ಮಧುಮೇಹದಿಂದ ಬಳಲುತ್ತಿರುವ ಜನರು ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ರಕ್ತದ ಸಕ್ಕರೆಯ ತೀವ್ರ ಕಡಿಮೆ ಮಟ್ಟಕ್ಕರ ತಲುಪಬಹುದು ಎನ್ನಲಾಗಿದೆ.

2. ಪ್ರೋಟೀನ್ ಕೊರತೆ
ಸಂಶೋಧನೆಯ ಪ್ರಕಾರ, ಪ್ರೋಟೀನ್ ಸೇವನೆಯು ದೀರ್ಘಕಾಲದವರೆಗೆ ಹಸಿವನ್ನು ತಡೆಯುತ್ತದೆ. ಆದರೆ, ಹೆಚ್ಚಿನ ಪ್ರೋಟೀನ್ ಆಹಾರವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಅಲ್ಪಾವಧಿಯ ಅಧ್ಯಯನಗಳು ಸೂಚಿಸಿವೆ. ಆದರೆ, ಹೆಚ್ಚಿನ ಪ್ರಮಾಣದ ಪ್ರಾಣಿ ಪ್ರೋಟೀನ್ ಅನ್ನು ತಪ್ಪಿಸಲೇಬೇಕು. ಇದು ಟೈಪ್ 2 ಡಯಾಬಿಟಿಸ್ ಅಪಾಯವನ್ನು ಹೆಚ್ಚಿಸಬಹುದು. ಬೀನ್ಸ್, ಮಸೂರ, ಬೀಜಗಳು, ಮೀನು ಇತ್ಯಾದಿಗಳಲ್ಲಿ ಅಧಿಕ ಪ್ರೋಟೀನ್ಗಳಿದ್ದು, ನಿಮ್ಮ ಉಪಹಾರವು ಇಂಥಾ ಪ್ರೋಟೀನ್ನಿಂದ ಸಮೃದ್ಧವಾಗಿರಬೇಕು.

3. ಕೊಬ್ಬಿನಂಶ
ಅಧಿಕ ಕೊಬ್ಬಿನಂಶದ ಉಪಹಾರವು ಮಧುಮೇಹ ರೋಗಿಗಳಿಗೆ ಉತ್ತಮ ಆಹಾರ ಕ್ರಮವಲ್ಲ. ಕೊಬ್ಬುಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ಅಂತಿಮವಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟಗಳ ಏರಿಕೆಯನ್ನು ನಿಧಾನಗೊಳಿಸುತ್ತದೆ. ಸೀಮಿತ ಪ್ರಮಾಣದಲ್ಲಿ ಸೇವಿಸಿದಾಗ ಕೊಬ್ಬುಗಳು ಹಾನಿಕಾರಕವಲ್ಲ. ಕೊಬ್ಬಿನ ಅತಿಯಾದ ಸೇವನೆಯು ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗಬಹುದು. ಇನ್ಸುಲಿನ್ ಪ್ರತಿರೋಧವು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಸ್ಪೈಕ್ ಇರುವ ಸ್ಥಿತಿಯಾಗಿದೆ.

4. ಉಪಹಾರದಲ್ಲಿ ಫೈಬರ್ ಅನ್ನು ತಪ್ಪಿಸುವುದು
ಬೆಳಗಿನ ಉಪಾಹಾರದಲ್ಲಿ ಫೈಬರ್ ಭರಿತ ಆಹಾರವನ್ನು ಎಂದಿಗೂ ತಪ್ಪಿಸಬಾರದು. ಫೈಬರ್ ಭರಿತ ಆಹಾರದ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅಗತ್ಯ ಪ್ರಮಾಣದಲ್ಲಿ ಇರಿಸಿಕೊಳ್ಳಲು ಸಹಾಯ ಮಾಡುತ್ತದೆ.



Click it and Unblock the Notifications