Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಳೆಗಾಲದಲ್ಲಿ ಆರೋಗ್ಯ ಚೆನ್ನಾಗಿರಲು ಯಾವ ಆಹಾರ ಸೇವಿಸಬೇಕು? ಯಾವುದನ್ನು ತಿನ್ನಬಾರದು?
ದೇಶದೆಲ್ಲೆಡೆ ಮುಂಗಾರು ಚುರುಕುಗೊಂಡಿದೆ. ಈ ತಂಪಿನ ವಾತಾವರಣವು ಮನಸ್ಸಿಗೆ ಎಷ್ಡು ಮುದ ನೀಡುವುದೋ, ಆರೋಗ್ಯದ ಮೇಲೆ ಅಷ್ಟೇ ಪರಿಣಾಮ ಬೀರುವುದು. ಅದಕ್ಕಾಗಿ ಈ ಮಳೆಗಾಲದಲ್ಲಿ ಆಹಾರ ಸೇವಿಸುವಾಗ ತುಂಬಾ ಜಾಗರೂಕರಾಗಿರಬೇಕು. ಆಹಾರ ಸೋಂಕುಗಳಿಂದ ಹಿಡಿದು ಸೊಳ್ಳೆಯಿಂದ ಹರಡುವ ರೋಗಗಳವರೆಗೆ, ಮಳೆಗಾಲವು ಹಲವಾರು ರೀತಿಯ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ಸಮತೋಲಿತ ಆಹಾರ ಸೇವಿಸುವುದು ತುಂಬಾ ಮುಖ್ಯ.
ಮಳೆಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಹಾಗೂ ಯಾವುದನ್ನು ತಪ್ಪಿಸಬೇಕು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಶುದ್ಧ ನೀರು ಕುಡಿಯಿರಿ:
ಕೆಲವು ಮನೆಗಳಲ್ಲಿ, ಜನರು ಟ್ಯಾಪ್ ಮತ್ತು ಬೋರ್ವೆಲ್ ಬಂದ ನೀರನ್ನು ನೇರವಾಗಿ ಕುಡಿಯುತ್ತಾರೆ. ಇದು ಒಳ್ಳೆಯದಲ್ಲ. ಮಳೆಗಾಲದಲ್ಲಿ ನೀರು ಸೂಕ್ಷ್ಮಜೀವಿಗಳಿಂದ ಸುಲಭವಾಗಿ ಕಲುಷಿತಗೊಳ್ಳಬಹುದು. ಈ ನೀರನ್ನು ಕುಡಿಯುವುದರಿಂದ ಹೊಟ್ಟೆಯ ಸೋಂಕು, ಅತಿಸಾರ ಅಥವಾ ಟೈಫಾಯಿಡ್ ಉಂಟಾಗುತ್ತದೆ. ಆದ್ದರಿಂದ ಅಂತಹ ನೀರನ್ನು ಚೆನ್ನಾಗಿ ಕುದಿಸಿ ಕುಡಿಯಿರಿ.

ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಡಿ:
ನಾವೆಲ್ಲರೂ ಮಳೆಯಲ್ಲಿ ಬಿಸಿಬಿಸಿ ಪಕೋಡ ಮತ್ತು ಸಮೋಸಾಗಳನ್ನು ಆನಂದಿಸುತ್ತೇವೆ. ಆದರೆ ಈ ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ತಿಂಡಿಗಳು ನಿಮ್ಮನ್ನು ಉಬ್ಬಿಸಲು ಕಾರಣವಾಗುವುದು. ಮಳೆಗಾಲದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿದೆ ಏಕೆಂದರೆ ಅತಿಯಾದ ತೇವಾಂಶವು ನಮ್ಮ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಇದು ನಮ್ಮ ಹೊಟ್ಟೆಗೆ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಕಷ್ಟವಾಗುತ್ತದೆ.

ಸೊಪ್ಪನ್ನು ತಪ್ಪಿಸಿ:
ಪೌಷ್ಠಿಕಾಂಶದ ಕೇಂದ್ರವಾಗಿರುವುದರಿಂದ ವರ್ಷಪೂರ್ತಿ ಹಸಿರುಸೊಪ್ಪನ್ನು ತಿನ್ನಲು ಸೂಚಿಸಲಾಗುತ್ತದೆ. ಆದರೆ ಮಳೆಗಾಲದಲ್ಲಿ ಅವುಗಳನ್ನು ತಪ್ಪಿಸುವುದು ಉತ್ತಮ. ತೇವಾಂಶದಿಂದಾಗಿ ಈ ಋತುವಿನಲ್ಲಿ ಎಲೆಗಳು ಸುಲಭವಾಗಿ ಹಾಳಾಗುತ್ತವೆ, ಇದಲ್ಲದೆ, ಹವಾಮಾನದಲ್ಲಿನ ಆರ್ದ್ರತೆಯಿಂದ ಕೆಲವೊಂದು ಸಸ್ಯಗಳ ಮೇಲೆ ಸೂಕ್ಷ್ಮಾಣು ಜೀವಿಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಈ ಸಮಯದಲ್ಲಿ ಪಾಲಕ್, ಎಲೆಕೋಸು, ಹೂಕೋಸು ಮುಂತಾದವುಗಳನ್ನು ತಪ್ಪಿಸುವುದು ಉತ್ತಮ.

ಮಸಾಲ ಟೀ ಕುಡಿಯಿರಿ:
ನಮ್ಮ ದೇಹವು ಮಳೆಗಾಲದಲ್ಲಿ ತೇವಾಂಶದ ಕಾರಣ ನೀರು ಕುಡಿಯಲು ಹೋಗುವುದೇ ಇಲ್ಲ. ಇದರಿಂದ ದೇಹದಲ್ಲಿನ ತೇವಾಂಶ ಕಡಿಮೆಯಾಗುವುದು. ಅದಕ್ಕಾಗಿ ನೀರು ಸಾಕಷ್ಟು ನೀರು ಮತ್ತು ಮಸಾಲೆ ಟೀ ಗಳನ್ನು ಕುಡಿಯಬೇಕು. ತುಳಸಿ, ಶುಂಠಿ, ಏಲಕ್ಕಿ ಮುಂತಾದ ಮಸಾಲೆಗಳೊಂದಿಗೆ ತಯಾರಿಸಿದ ಗಿಡಮೂಲಿಕೆಗಳ ಮಿಶ್ರಣ ಅಥವಾ ಮಸಾಲಾ ಟೀ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಎಲ್ಲಾ ರೀತಿಯ ಸೋಂಕನ್ನು ತಡೆಯುತ್ತದೆ.

ಬೇಯಿಸಿದ ಆಹಾರವನ್ನು ಮಾತ್ರ ಸೇವಿಸಿ:
ಸಲಾಡ್ ಗಳು ಆರೋಗ್ಯಕರ ಮತ್ತು ಪೌಷ್ಠಿಕಾಂಶವನ್ನು ಹೊಂದಿದ್ದರೂ, ಮಳೆಗಾಲದಲ್ಲಿ ಹಸಿ ತರಕಾರಿಗಳನ್ನು ಸೇವಿಸುವುದು ಆರೋಗ್ಯ ಸಮಸ್ಯೆಗಳಿಗೆ ಆಹ್ವಾನವಾಗಬಹುದು. ಕೆಲವು ತರಕಾರಿಗಳು ಧೂಳಿನಿಂದಾಗಿ ಹೆಚ್ಚಿನ ಪ್ರಮಾಣದ ಸೂಕ್ಷ್ಮಜೀವಿಗಳನ್ನು ಹೊಂದಿರುತ್ತವೆ, ಇದು ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಹಸಿ ಸಲಾಡ್ ಗಳಿಗೆ ಬದಲಾಗಿ, ಬೇಯಿಸಿದ ಆಹಾರ ಅಥವಾ ತರಕಾರಿಗಳನ್ನು ಸೇವಿಸಿ. ಈ ಕಾಲದಲ್ಲಿ ಸಮುದ್ರಾಹಾರವನ್ನು ಸಹ ತಪ್ಪಿಸಬೇಕು.

ಮಸಾಲೆ ಪದಾರ್ಥಗಳು:
ಮಸಾಲೆಗಳು ನಂಜುನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿಂದ ಕೂಡಿದೆ. ಅರಿಶಿನ, ಕರಿಮೆಣಸು ಮತ್ತು ಲವಂಗದಂತಹ ಹೆಚ್ಚು ಮಸಾಲೆಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳಬಹುದು. ಶೀತ ಮತ್ತು ಜ್ವರ ಮುಂತಾದ ಲಕ್ಷಣಗಳು ಕಡಿಮೆಯಾಗಬಹುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡಬಹುದು.



Click it and Unblock the Notifications