Latest Updates
-
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್
ಕೊರೊನಾ ಸೇರಿದಂತೆ ಹತ್ತಾರು ಕಾಯಿಲೆಗಳಿಗೆ ಈ ಗಿಡವೇ ಮದ್ದು
ಈಗ ಅಂತೂ ಕೊರೊನಾ ಭಯ ಮನುಷ್ಯರ ಜೀವವನ್ನು ಹಿಂಡುತ್ತಿದೆ. ಇವುಗಳ ಜೊತೆಗೆ ಮಳೆಗಾಲವಾಗಿರುವುದರಿಂದ ಡೆಂಗ್ಯೂ, ಚಿಕನ್ ಗುನ್ಯಾಗಳ ಆರ್ಭಟವೂ ಹೆಚ್ಚಾಗಿಯೇ ಇದೆ. ಮನುಷ್ಯ ಒಂಥರಾ ಭಯಭೀತನಾಗಿದ್ದಾನೆ.

ಈಗ ನಾವೆಲ್ಲಾ ಭಯಪಟ್ಟು ಕೂರುವುದಕ್ಕಿಂತ ಈ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವುದು ಹೇಗೆ ಎಂದು ಕಲಿಯಬೇಕಾಗಿದೆ. ಮೊದಲಿಗೆ ಭಯ ಬಿಡಬೇಕಾಗಿದೆ. ಇನ್ನು ನಮ್ಮ ಸುತ್ತ ಮುತ್ತ ಇರುವ ಔಷಧೀಯ ಗಿಡಗಳನ್ನು ಬಳಸಿಕೊಳ್ಳುವುದನ್ನು ತಿಳಿದುಕೊಳ್ಳಬೇಕಾಗಿದೆ.
ಎಷ್ಟೋ ಸಮಸ್ಯೆಗಳಿಗೆ ಪರಿಹಾರ ಪರಿಸರದಲ್ಲಿ ಅದನ್ನು ಮೊದಲು ನಾವು ಅರಿತುಕೊಳ್ಳಬೇಕು. ಆಯುರ್ವೇದ ಹಾಗೂ ಆಯುಷ್ ಇಲಾಖೆ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಕಾಯಿಲೆ ಬರುವುದನ್ನು ತಡೆಗಟ್ಟಲು ಗಿಡ ಮೂಲಿಕೆ ಬಳಸುವಂತೆ ಸಲಹೆ ನೀಡಿದೆ. ಇಲ್ಲಿ ನಾವು ಕೊರೊನಾವೈರಸ್ ತಡೆಗಟ್ಟುವುದರ ಜೊತೆಗೆ ಸೊಳ್ಳೆಯಿಂದ ಹರಡುವ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ ಮುಂತಾದ ರೋಗಗಳನ್ನು ತಡೆಗಟ್ಟುವಲ್ಲಿ ತುಳಸಿ ಹೇಗೆ ಸಹಕಾರಿ ಹಾಗೂ ತುಳಸಿಯ ಇತರ ಪ್ರಯೋಜನಗಳ ಬಗ್ಗೆ ಹೇಳಿದ್ದೇವೆ ನೋಡಿ:

ನೆಗಡಿ, ಕೆಮ್ಮಿಗೆ ಮನೆಮದ್ದು
ತುಳಸಿ ನೆಗಡಿ, ಕೆಮ್ಮು ಹೋಗಲಾಡಿಸುವಲ್ಲಿ ಪರಿಣಾಮಕಾರಿಯಾದ ಮನೆಮದ್ದಾಗಿದೆ, ಕೆಮ್ಮು-ಶೀತ ಉಂಟಾದಾಗ ಇದರ ಅರ್ಧ ಚಮಚ ರಸಕ್ಕೆ ಸ್ವಲ್ಪ ಜೇನು ಹಾಗೂ ಕಾಳು ಮೆಣಸಿನಪುಡಿ ಮಿಕ್ಸ್ ಮಾಡಿ ಸೇವಿಸಿ. ಈ ರೀತಿ ದಿನದಲ್ಲಿ 3 ಬಾರಿ ಸೇವಿಸಿದರೆ ಒಂದೆರಡು ದಿನದಲ್ಲಿ ನೆಗಡಿ, ಕೆಮ್ಮು ಮಾಯ.

H1N1/ ಹಂದಿ ಜ್ವರ ತಡೆಗಟ್ಟುತ್ತದೆ
ಹೆಚ್1ಎನ್1 ತಡೆಗಟ್ಟುವಲ್ಲಿಯೂ ತುಳಸಿ ಪರಿಣಾಮಕಾರಿ. ಪ್ರತಿದಿನ 4-5 ತುಳಸಿ ಎಲೆಗಳನ್ನು ತಿನ್ನುವುದರಿಂದ ಹಂದಿ ಜ್ವರ ಬಾರದಂತೆ ತಡೆಗಟ್ಟುವುದರ ಜೊತೆಗೆ ರೋಗ ಪೀಡಿತರು ಬೇಗನೆ ಗುಣಮುಖರಾಗಲೂ ಸಹಾಯ ಮಾಡುತ್ತದೆ.

ಕೊರೊನಾ, ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ತುಳಸಿ
ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಚೆನ್ನಾಗಿದ್ದರೆ ಈ ಕಾಯಿಲೆಗಳು ಬಾಧಿಸುವುದೇ ಇಲ್ಲ. ಆದ್ದರಿಂದ ಪ್ರಸಿದ್ಧ ಆಯುರ್ವೇದ ವೈದ್ಯರಾದ ಡಾ. ಗಿರಿಧರ್ ಕಜೆಯವರು ಹೇಳಿರುವ ಪ್ರಕಾರ ಒಬ್ಬ ವ್ಯಕ್ತಿ ಒಂದು ಲೀಟರ್ ನೀರಿಗೆ 4-5 ತುಳಸಿ ಎಲೆ ಹಾಕಿ ಕುದಿಸಿ ಆ ನೀರನ್ನು ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ರೋಗ ನಿರೋಧಕ ಶಕ್ತಿ ಹೆಚ್ಚಿರುವವರಿಗೆ ಕೊರೊನಾವೈರಸ್ ಏನೂ ಮಾಡಲು ಸಾಧ್ಯವಾಗುವುದಿಲ್ಲ.

ಮಧುಮೇಹ ಕೂಡ ನಿಯಂತ್ರಣದಲ್ಲಿಡಬಹುದು
ಇನ್ನು ಮಧುಮೇಹಿಗಳು ಈ ಸಮಯದಲ್ಲಿ ಆರೋಗ್ಯದ ಕಡೆಗೆ ಮತ್ತಷ್ಟು ಗಮನ ನೀಡಬೇಕು. 3-4 ತುಳಸಿ ಎಲೆ ಪ್ರತಿದಿನ ತಿಂದರೆ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ಅಲ್ಲದೆ ರಕ್ತದೊತ್ತಡ ಕೂಡ ನಿಯಂತ್ರಣದಲ್ಲಿಡುತ್ತದೆ.

ಬ್ಯಾಕ್ಟಿರಿಯಾ ಮತ್ತು ವೈರಸ್ ನಾಶ ಪಡಿಸುತ್ತದೆ
ತುಳಸಿಗೆ ಬ್ಯಾಕ್ಟಿರಿಯಾ ಹಾಗೂ ವೈರಸ್ ನಾಶ ಪಡಿಸುವ ಗುಣವಿದೆ. ಇದಕ್ಕೆ ವಾಂತಿ, ಬೇಧಿ, ಕ್ಷಯಾ ರೋಗಗಳನ್ನು ಗುಣೊಡಿಸುವ ಶಕ್ತಿಯನ್ನು ಹೊಂದಿದೆ. ಅಲ್ಲದೆ ಇದು ತ್ವಚೆ ಅಲರ್ಜಿ ಅಂಥ ಸಮಸ್ಯೆ ಕೂಡ ಹೋಗಲಾಡಿಸುತ್ತೆ.

ಜ್ಞಾಪಕ ಶಕ್ತಿ ಹೆಚ್ಚುವುದು, ಮಾನಸಿಕ ಒತ್ತಡ ಕಡಿಮೆಯಾಗುವುದು
ಇದನ್ನು ಪ್ರತಿದಿನ ತಿನ್ನುವುದರಿಂದ ವಯಸ್ಸಾದಾಗ ಕಾಡುವ ಮರೆವು ಸಮಸ್ಯೆ ಉಂಟಾಗುವುದಿಲ್ಲ. ಜ್ಞಾಪಕ ಶಕ್ತಿ ಚೆನ್ನಾಗಿ ಇರುತ್ತದೆ ಹಾಗೂ ಇದರ ಕಷಾಯ ಮಾನಸಿಕ ಒತ್ತಡ ಕಡಿಮೆ ಮಾಡುವಲ್ಲಿಯೂ ಸಹಕಾರಿ.

ತಲೆ ಹೇನು ಸಮಸ್ಯೆ ಕೂಡ ಇರಲ್ಲ
ಮಕ್ಕಳ ತಲೆ ಹೇನಾಗಿದ್ದರೆ ಕೊಬ್ಬರಿ ಎಣ್ಣೆಗೆ ಸ್ವಲ್ಪ ತುಳಸಿ ಹಾಕಿ ಕುದಿಸಿ, ಆ ಎಣ್ಣೆಯನ್ನು ಹಚ್ಚುವುದರಿಂದ ಹೇನು ಇಲ್ಲವಾಗುವುದು, ಇನ್ನು ತ್ವಚೆ ಅಲರ್ಜಿಗೂ ಇದನ್ನು ಮನೆಮದ್ದಾಗಿ ಬಳಸಬಹುದು.

ಸೊಳ್ಳೆ ತಡೆಗಟ್ಟುತ್ತದೆ
ತುಳಸಿ ಗಿಡ ಮನೆ ಮುಂದೆ ಇದ್ದರೆ ಸೊಳ್ಳೆ ಕಾಟ ಕಡಿಮೆಯಾಗುವುದು. ಇದರ ಎಲೆಯನ್ನು ನೀರಿಗೆ ಹಾಕಿ ಕುದಿಸಿ, ಅದನ್ನು ಕೋಣೆಗೆ ಸ್ಪ್ರೇ ಮಾಡಿದರೆ ಸೊಳ್ಳೆ ಬರುವುದಿಲ್ಲ. ಹೀಗೆ ತುಳಸಿಯಿಂದ ಹತ್ತಾರು ಪ್ರಯೋಜನಗಳನ್ನು ಪಡೆಯಬಹುದಾಗಿದೆ.



Click it and Unblock the Notifications