Latest Updates
-
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ!
ಆತಂಕ, ಒತ್ತಡ ನಿವಾರಣೆಗೆ ಯಾವ ಆಹಾರ ಸೇವಿಸಬೇಕು..? ಏನಿದು ಪಥ್ಯ..?
ಇತ್ತೀಚನ ದಿನಗಳಲ್ಲಿ ಒತ್ತಡ ಮತ್ತು ಆತಂಕ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆ ಎನ್ನುವಂತಾಗಿದೆ. ಜನ ಹೋದಲ್ಲಿ ಬಂದಲ್ಲಿ ಒತ್ತಡ ಎದುರಿಸಬೇಕಾಗಿದೆ. ಕೈಯಲ್ಲೇ ಜಗತ್ತನ್ನು ಇಟ್ಟುಕೊಂಡು ಓಡಾಡುತ್ತಿರುವಂತಹ ಇಂದಿನ ದಿನಗಳಲ್ಲಿ ಕ್ಷಣಕ್ಷಣವೂ ಒತ್ತಡವು ಹೆಚ್ಚಾಗುತ್ತಲೇ ಇದೆ. ಅದು ಮನೆಯಾಗಲಿ ಅಥವಾ ಕಚೇರಿಯಾಗಲಿ, ಒತ್ತಡದ ಬದುಕು ಸರ್ವೇಸಾಮಾನ್ಯ. ಹೀಗಾಗಿ ಒತ್ತಡದಿಂದ ದೂರಾಗಲು ಸದಾ ನಾವು ಪ್ರಯತ್ನಿಸುತ್ತಿರುತ್ತೇವೆ, ಆದರೆ ಇದು ಆತಂಕಕ್ಕೆ ಕಾರಣವಾಗುತ್ತದೆ.
ಅದರಲ್ಲೂ ನಾವಿಂದು ಈ ಮೊಬೈಲ್ ಅಥವಾ ಇಂಟರ್ನೆಟ್ ಒಂದು ನಿಮಿಷ ಇಲ್ಲದೆ ಇದ್ದರೂ ಏನೋ ಒಂದು ರೀತಿಯ ಆತಂಕ ಉಂಟಾಗುವುದು ಮತ್ತು ಇದರಿಂದ ಒತ್ತಡ ಹೆಚ್ಚಾಗುವುದು. ಈ ಗ್ಯಾಜೆಟ್ಗಳಿಂದ ನಾವು ಎಷ್ಟು ದೂರಾಗುತ್ತೇವೀ ಅಷ್ಟು ಉತ್ತಮ. ಆದರೆ ಕೆಲವರಿಗೆ ಈ ಗ್ಯಾಜೆಟ್ಗಳಿಂದ ದೂರ ಉಳಿದರೆ ಆತಂಕ ಎದುರಾಗುತ್ತದೆ. ಆದರೆ ಈ ಒತ್ತಡ ನಿವಾರಣೆಗೆ ಕೆಲವು ಆಹಾರ ಕ್ರಮಗಳಿವೆ.

ನಾವು ಸೇವಿಸಲು ಆಹಾರವು ಸಹ ನಮ್ಮ ಒತ್ತಡ ಹಾಗೂ ಆತಂಕವನ್ನು ಹತೋಟಿಯಲ್ಲಿಎಲು ಸಹಾಯ ಮಾಡುತ್ತದೆ. ಆಹಾರ ಪಥ್ಯದ ಕಡೆ ಗಮನಹರಿಸಿಕೊಂಡರೆ ಆತಂಕವನ್ನು ನಿವಾರಿಸಬಹುದಾಗಿದೆ. ಹಲವಾರು ರೀತಿಯ ಆಹಾರಗಳು ಆತಂಕವನ್ನು ನಿವಾರಿಸುವಲ್ಲಿ ಸಮರ್ಥವಾಗಿದೆ, ಎಂಬುದು ಸಾಬೀತು ಸಹ ಆಗಿದೆ.
ಕೆಲವೊಮ್ಮೆ ಯಾವುದಾದರೂ ಸಮಸ್ಯೆಗೆ ಸಿಲುಕಿ, ನಾವು ಆಳವಾಗಿ ಯೋಚಿಸಲು ಪ್ರಾರಂಭಿಸುತ್ತೇವೆ, ಹೀಗಾದಾಗ ಅದು ನಮ್ಮ ಮನಸ್ಸಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಾವು ಆತಂಕದಲ್ಲಿದ್ದಾಗ ನಮ್ಮ ಮನೋಭಾವ ಬೇರೆಯಾಗಿರುತ್ತದೆ, ನಾವು ಒತ್ತಡದಲ್ಲಿರುವಾಗಲೂ ನಮ್ಮ ಭಾವನೆ, ಸ್ಥಿತಿ ಬೇರೆ ಸ್ವರೂಪದಲ್ಲಿರುತ್ತದೆ.
ಹಾಗಾದರೆ ಒತ್ತಡ ಮತ್ತು ಆತಂಕವನ್ನು ದೂರ ಮಾಡಲು ಯಾವ ರೀತಿಯ ಆಹಾರ ಸೇವಿಸಬೇಕು. ಯಾವ ಆಹಾರ ಸೇವಿಸದರೆ ಈ ಅಂಶಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂಬುದನ್ನು ನಾವಿಂದು ನೋಡೋಣ.
ಆತಂಕ ಕಡಿಮೆ ಮಾಡಲು ನೀವು ಬೆರ್ರಿ ಹಣ್ಣುಗಳ ಸೇವಿಸಬಹುದು ಈ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ಗಳು ಅಧಿಕವಾಗಿದ್ದು ಇದರಿಂದ ನಿಮ್ಮಲ್ಲಿ ಆತಂಕ ಮತ್ತು ಒತ್ತಡ ನಿವಾರಣೆಗೆ ಸಹಾಯಕವಾಗಲಿದೆ. ಈ ಬೆರ್ರಿ ವಿಟಮಿನ್ ಗಳಿಂದ ಸಮೃದ್ಧವಾಗಿದೆ. ಈ ಹಣ್ಣುಗಳನ್ನು ತಿಂದರೆ ಮನಸ್ಸು ತುಂಬಾ ಶಾಂತವಾಗಿರುತ್ತದೆ. ಇದಲ್ಲದೆ ನೀವು ಬಾದಾಮಿಯನ್ನು ಆಗಾಗ ಸೇವಿಸಯ ಅಭ್ಯಾಸ ಬೆಳೆಸಿಕೊಂಡರೆ ಉತ್ತಮ ಏಕೆಂದರೆ ಬಾದಾಮಿಯಲ್ಲಿ ಕಬ್ಬಿನ ಮತ್ತು ಸತು ಹೇರಳವಾಗಿದೆ. ಇದು ಮೆದುಳನ್ನು ಶಾಂತವಾಗಿರಿಸಿ ಭಾವನೆಗಳನ್ನು ಸಮತೋಲನದಲ್ಲಿಡುತ್ತದೆ. ಅಷ್ಟೇ ಅಲ್ಲದೆ ಕಲೆವೊಮ್ಮೆ ಆತಂಕಕ್ಕೆ ಕಾರಣವಾಗುವಂತಹ ಕೊರ್ಟಿಸೊಲ್ ಹಾರ್ಮೋನು ಮಟ್ಟವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ನಿತ್ಯವು ಹಸಿರು, ಹಳದಿ ಮತ್ತು ಕಿತ್ತಳೆ ಬಣ್ಣದ ತರಕಾರಿಗಳನ್ನು ಸೇವಿಸುವುದರಿಂದ ಮೆದುಳಿನಲ್ಲಿ ಸೆರೊಟಿನಿನ್ ಸ್ರವಿಸುವಿಕೆಗೆ ನೆರವಾಗುವುದು. ಈ ಸೆರೊಟಿನಿನ್ ನಮ್ಮ ದೇಹದಲ್ಲಿ ಆತಂಕ ಮತ್ತು ಒತ್ತಡಕ್ಕೆ ಕಾರಣವಾಗುವ ಹಾರ್ಮೋನುಗಳ ಮೇಲೆ ಹತೋಟಿ ತೆಗದುಕೊಳ್ಳುತ್ತದೆ. ಅಂದರೆ ಯಾವಾಗ ನಮ್ಮಲ್ಲಿ ಆತಂಕ ಉಂಟಾದಾಗ ಬಿಡುಗಡೆಯಾಗುವ ಹಾರ್ಮೋನುಗಳಿಗೆ ಕಡಿವಾಣ ಹಾಕಲಿದೆ. ಮಾಂಸಗಳಲ್ಲಿ ಸಹ ಈ ಸೆರೊಟಿನಿನ್ ಅಂಶ ಕಂಡುಬರುತ್ತದೆ.
ಇದಿಷ್ಟೇ ಅಲ್ಲದೆ ಸುಲಭವಾಗಿ ಸಿಗುವಂತಹ ಓಟ್ ಮೀಲ್ನಿಂದಲೂ ಸಹ ನಮ್ಮ ಒತ್ತಡ ಹಾಗೂ ಆತಂಕಕ್ಕೆ ಕಾರಣವಾಗುವ ಹಾರ್ಮೋನುಗಳ ಮೇಳೆ ಹಿಡಿತ ಸಾಧಿಸಬಹುದು. ಓಟ್ಸ್ನಲ್ಲಿ ಸಿಗುವ ಕಾರ್ಬೋಹೈಡ್ರೇಟ್ಸ್ ಗಳು ಮೆದುಳಿನಲ್ಲಿ ಸೆರೊಟೊನಿನ್ ಉತ್ಪತ್ತಿಯು ಉತ್ತೇಜಿಸಲ್ಪಡುವುದು. ಇದರಿಂದಾಗಿ ಕಾರ್ಬೊಹೈಡ್ರೇಟ್ಸ್ ಹೀರುವಿಕೆಯು ನಿಧಾನವಾಗುವುದು ಮತ್ತು ಸೆರೊಟೊನಿನ್ ಹರಿವು ಸ್ಥಿರವಾಗುತ್ತದೆ. ಇದರಿಂದ ನಿಮಗೆ ಯಾವುದೇ ಪರಿಸ್ಥಿತಿಯಲ್ಲಿ ಕೋಪ, ಆತಂಕ, ಒತ್ತಡ ಉಂಟಾದಾಗ ಪರಿಣಾಮಕಾರಿಯಾಗಿ ನಿಯಂತ್ರಣ ಸಾಧ್ಯವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications