Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಿಸಿ ನೀರಿಗೆ ಜೇನು ಹಾಕಿ ಕುಡಿದರೆ ದೇಹಕ್ಕೆ ಹಾನಿಕರವೇ?
ಬೆಳಗ್ಗೆ ಬಿಸಿ ನೀರಿಗೆ ಜೇನು ಹಾಕಿ ಕುಡಿದರೆ ತೂಕ ಇಳಿಕೆಗೆ ತುಂಬಾನೇ ಒಳ್ಳೆಯದು ಎಂದು ಹೇಳುವುದನ್ನು ಕೇಳಿರಬಹುದು. ಆದರೆ ಆಯುರ್ವೇದ ಜೇನನ್ನು ಬಿಸಿ ನೀರಿಗೆ ಹಾಕುವುದು ಒಳ್ಳೆಯದಲ್ಲ ಎಂಬುವುದಾಗಿ ಹೇಳುತ್ತದೆ. ಏಕೆ ಜೇನನ್ನು ಬಿಸಿ ನೀರಿಗೆ ಹಾಕಿ ಸೇವಿಸಬಾರದು, ಈ ಕುರಿತು ಆಯುರ್ವೇದ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:

ಜೇನನ್ನು ಬಿಸಿ ನೀರಿಗೆ ಹಾಕಿ ಕುಡಿಯುವ ಉದ್ದೇಶ
ಮೈ ತೂಕ ಕಡಿಮೆ ಮಾಡಬೇಕು ಎಂದು ಬಯಸುವವರು ಜೇನನ್ನು ಬಿಸಿ ನೀರಿಗೆ ಹಾಕಿ ಕುಡಿಯುತ್ತಾರೆ. ಇದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ, ಕೊಬ್ಬು ಕರಗಿಸುತ್ತದೆ ಎಂದು ಹೇಳಲಾಗುವುದು. ಈ ಕಾರಣಕ್ಕೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ಜೇನು ಹಾಕಿ ಕುಡಿಯುವ ಅಭ್ಯಾಸ ಹಲವರಲ್ಲಿದೆ, ಆದರೆ ಆಯುರ್ವೇದ ಇದು ಉತ್ತಮ ಆಯ್ಕೆಯಲ್ಲ ಎಂಬುವುದಾಗಿ ಹೇಳುತ್ತದೆ.
ಜೇನನ್ನು ಬಿಸಿ ನೀರಿಗೆ ಹಾಕಿ ಕುಡಿದರೆ ಸ್ಲೋ ಪಾಯಿಸನ್ ಆಗುವುದು
ಆಯುರ್ವೇದ ಪ್ರಕಾರ ಜೇನನ್ನು ಬಿಸಿ ನೀರಿಗೆ ಹಾಕಿ ಕುಡಿಯುವುದರಿಂದ ಆಮ ಅಥವಾ ವಿಷವಾಗುವುದು. ಇದು ಒಂದು ರೀತಿ ಸ್ಲೋ ಪಾಯಿಸನ್ ಅಂತೆ ಆಗುವುದು. ಜೇನನ್ನು ಬಿಸಿ ನೀರಿಗೆ ಹಾಕಿ ಸೇವಿಸಿದಾಗ ಆಮ ಅಥವಾ ಕಫದ ಅಂಶ ಹೆಚ್ಚಾಗುವುದು, ಇದರಿಂದ ಅನೇಕ ಸಮಸ್ಯೆಗಳು ಉಂಟಾಗುವುದು.
ಜೇನನ್ನು ನೈಸರ್ಗಿಕವಾಗಿಯೇ ಸೇವಿಸಬೇಕು
ಜೇನು ಹೇಗೆ ಸಿಗುವುದೋ ಹಾಗೆ ನೈಸರ್ಗಿಕವಾಗಿ ಸೇವಿಸಬೇಕು. ಜೇನನ್ನು ಬಿಸಿ ಮಾಡಿದರೆ ಅದು ವಿಷವಾಗುವುದು ಈ ಕಾರಣಕ್ಕೆ ಜೇನನ್ನು ಬಿಸಿ ನೀರಿಗೆ ಕೂಡ ಹಾಕಿ ಸೇವಿಸುವುದು ಒಳ್ಳೆಯದಲ್ಲ ಎಂಬುವುದಾಗಿ ಹೇಳಿದೆ.
ಜೇನನ್ನು ಬಿಸಿ ಮಾಡಬಾರದು
ಜೇನನ್ನು ನೀವು ಜ್ಯೂಸ್, ಸಲಾಡ್, ಮನೆ ಔಷಧಿ ಮಾಡುವಾಗ ಬಳಸಬಹುದು. ಅದೇ ಜೇನನ್ನು ಬೇಯಿಸುವಾಗ ಬಳಸಬಾರದು, ಇದರಿಂದ ಫುಡ್ ಪಾಯಿಸನ್ ಆಗಿ ಆಹಾರದ ಮೇಲೆ ಗಂಭೀರ ಪರಿಣಾಮ ಬೀರುವುದು, ಈ ಕಾರಣಕ್ಕೆ ಜೇನನ್ನು ಯಾವುದೇ ಕಾರಣಕ್ಕೆ ಬಿಸಿ ಮಾಡಬಾರದು ಎಂದು ಹೇಳಲಾಗುವುದು.
ಜೇನಿನಲ್ಲಿದೆ ಔಷಧೀಯ ಗುಣ
ನೈಸರ್ಗಿಕವಾಗಿ ಸಿಗುವ ಜೇನನ್ನು ಅನೇಕ ಆರೋಗ್ಯ ಸಮಸ್ಯೆ ಹೋಗಲಾಡಿಸಲು ಮನೆಮದ್ದಾಗಿ ಬಳಸಲಾಗುವುದು. ಕೆಮ್ಮು, ಶೀತ, ಕಫ ಈ ಬಗೆಯ ಸಮಸ್ಯೆ ಹೋಗಲಾಡಿಸಲು ಜೇನು ತುಂಬಾನೇ ಪರಿಣಾಮಕಾರಿಯಾಗಿದೆ. ನೀವು ಕಲಬೆರಿತ ಜೇನು ಬಳಸುವ ಬದಲಿಗೆ ಯಾವಾಗಲೂ ನೈಸರ್ಗಿಕವಾದ ಜೇನನ್ನೇ ಬಳಸಿ.
ಜೇನನ್ನು ಬಿಸಿ ಮಾಡಿದಾಗ ಏನಾಗುತ್ತದೆ?
* ಜೇನನ್ನು ಬಿಸಿ ಮಾಡಿದಾಗ ಅದರ ಆ್ಯಂಟಿಬ್ಯಾಕ್ಟಿರಿಯಾ ಅಂದರೆ ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುವ ಗುಣ ಹಾಳಾಗುವುದು.
* ಇದರಲ್ಲಿರುವ ಆ್ಯಂಟಿಆಕ್ಸಿಡೆಂಡ್ ಗುಣಗಳು ನಾಶವಾಗುವುದು.
ಈ ಕಾರಣಕ್ಕೆ ಜೇನನ್ನು ಬಿಸಿ ನೀರಿಗೆ ಹಾಕಿ ಕುಡಿಯುವುದು ಆರೋಗ್ಯಕರವಲ್ಲ ಎಂದು ಆಯುರ್ವೇದ ಹೇಳುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications