Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ವಾಸ್ತು ಪ್ರಕಾರ ಮನೆಯಲ್ಲಿ ಈ ವಸ್ತುಗಳಿದ್ದರೆ ದರಿದ್ರವಂತೆ
ವಾಸ್ತು ಶಾಸ್ತ್ರವು ನಮ್ಮ ಜೀವನ ಸಂತೋಷವಾಗಿಡಲು, ಮನೆಯಲ್ಲಿ ಸಮೃದ್ಧಿ ಹೆಚ್ಚಿಸಲು ವಾಸ್ತು ಶಾಸ್ತ್ರವೂ ಸಲಹೆ ನೀಡುತ್ತದೆ. ಈ ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ಅಶುಭವೆಂದು ಪರಿಗಣಿಸಲಾಗಿದೆ ಏಕೆಂದರೆ ಇಂಥ ವಸ್ತುಗಳು ಮನೆಯಲ್ಲಿದ್ದರೆ ನಕಾರಾತ್ಮಕ ಶಕ್ತಿಯ ಹರಿವು ಉಂಟಾಗುತ್ತದೆ, ಇದು ಮನೆಯಲ್ಲಿ ಬಡತನಕ್ಕೆ ಕಾರಣವಾಗಬಹುದು. ಹಾಗಾಗಿ ವಾಸ್ತು ಪ್ರಕಾರ ಮನೆಯಲ್ಲಿ ಕಷ್ಟ ಉಂಟಾಗದಿರಲು ಈ ವಾಸ್ತು ಸಲಹೆ ಪಾಲಿಸಿದರೆ ಒಳ್ಳೆಯದು.
ನಾವು ಮನೆಯನ್ನು ಹೇಗೆ ಇಟ್ಟುಕೊಳ್ಳುತ್ತೇವೆ ಎಂಬುವುದರ ಮೇಲೆ ಲಕ್ಷ್ಮಿ ಒಲಿಯುತ್ತಾಳೆ ಎಂದು ಹೇಳಲಾಗುವುದು. ಹಾಗಾಗಿ ಮನೆಯನ್ನು ಐಶ್ವರ್ಯವಾಗಿ ಇಟ್ಟುಕೊಳ್ಳಬೇಕು, ಹಾಗಾಗಿ ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಮನೆಯಲ್ಲಿ ಇಡಲೇಬಾರದು. ವಾಸ್ತು ಶಾಸ್ತ್ರದಲ್ಲಿ ಕೂಡ ಈ ಬಗ್ಗೆ ಹೇಳಲಾಗಿದೆ. ಹಾಗಾಗಿ ಈ ವಸ್ತುಗಳನ್ನು ಮನೆಯಲ್ಲಿದ್ದರೆ ಅವುಗಳನ್ನು ಬಿಸಾಡಿ:

ತುಕ್ಕು ಹಿಡಿದ ಕಬ್ಬಿಣ
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ತುಕ್ಕು ಹಿಡಿದ ಕಬ್ಬಿಣವನ್ನು ಮನೆಯಲ್ಲಿ ಇಡಲೇಬೇಡಿ. ತುಕ್ಕು ಹಿಡಿದ ಕಬ್ಬಿಣವನ್ನು ಮನೆಯಲ್ಲಿ ಇಟ್ಟರೆ ಮನೆಗೆ ಶ್ರೇಯಸ್ಸು ಅಲ್ಲ, ತುಕ್ಕು ಹಿಡಿದ ಇಡಿದ ಕಬ್ಬಿಣ ನಕರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ, ಇಂಥ ವಸ್ತುಗಳು ಮನೆಯಲ್ಲಿ ಇದ್ದರೆ ಮನೆಯಲ್ಲಿ ನೆಮ್ಮದಿ ಇರಲ್ಲ, ಆರ್ಥಿಕ ತೊಂದರೆಗಳು ಉಂಟಾಗುವುದು, ಹಣ ನಷ್ಟ ಉಂಟಾಗುವುದು.
ವೈಜ್ಞಾನಿಕ ದೃಷ್ಟಿಯಿಂದಲೂ ನೋಡುವುದಾದರೆ ಇಂಥ ವಸ್ತಗಳು ಮನೆಯಲ್ಲಿ ಇರಬಾರದು. ಏಕೆಂದರೆ ತುಕ್ಕು ಹಿಡಿದ ವಸ್ತುಗಳು ನಮ್ಮ ಕೈ ಕಾಲಿಗೆ ತಾಗಿದರೆ ಅದರಿಂದ ಆದ ಗಾಯ ಕೂಡ ಬೇಗ ಒಣಗುವುದಿಲ್ಲ, ಅದರಲ್ಲಿಯೂ ಮಧುಮೇಹಿಗಳಿಗೆ ತಾಗಿದರೆ ತುಂಬಾನೇ ಕಷ್ಟ.
ಖಾಲಿ ಪರ್ಸ್
ವಾಸ್ತು ಶಾಸ್ತ್ರದ ಪ್ರಕಾರ ಖಾಲಿ ಪರ್ಸ್ ಅಶುಭವೆಂದು ಪರಿಗಣಿಸಲಾಗಿದೆ. ಪರ್ಸ್ನಲ್ಲಿ ಹಣವಿರಬೇಕು, ಖಾಲಿ ಪರ್ಸ್ ಇದ್ದರೆ ಅದು ದರಿದ್ರ ಎಂದು ಹೇಳಲಾಗುವುದು . ಖಾಲಿ ಪರ್ಸ್ ಇದ್ದರೆ ಲಕ್ಷ್ಮಿ ಅವರಲ್ಲಿ ನೆಲೆಸಲ್ಲ ಎಂದು ಹೇಳಲಾಗುವುದು. ಹೊಸ ಪರ್ಸ್ ಖರೀದಿಸಿದಾಗ ಕೂಡ ಆ ಪರ್ಸ್ ಹಾಗೆಯೇ ಇಡಬೇಡಿ, ಸ್ವಲ್ಪ ಹಣ ನೀವು ಪರ್ಸ್ನಲ್ಲಿ ಇಡಲೇಬೇಕು. ನಾವು ಹೊಸ ಪರ್ಸ್ ಗಿಫ್ಟ್ ನೀಡುವಾಗಲೂ ಅದರಲ್ಲಿ ಹಣ ಹಾಕಿ ನೀಡುವುದು ಒಳ್ಳೆಯದು.
ಬಳಸದೆ ಇರುವ ಶೂಗಳು
ಹಳೆಯದ ಅಥವಾ ಬಳಸದೆ ಇರುವ ಶೂಗಳು ಮನೆಯಲ್ಲಿದ್ದರೆ ಅದನ್ನು ಬಿಸಾಡಿ. ಇಂಥ ಶೂಗಳು ಮನೆಯಲ್ಲಿದ್ದರೆ ನಕಾರಾತ್ಮಕ ಶಕ್ತಿ ಹೆಚ್ಚಿಸುತ್ತದೆ, ಬಳಕೆಯಾಗದ ಬೂಟುಗಳನ್ನು ಮನೆಯಲ್ಲಿ ಇಟ್ಟುಕೊಂಡರೆ ಬದುಕಿನಲ್ಲಿ ಒಂದರ ಹಿಂದೆ ಮತ್ತೊಂದು ಸವಾಲು ಎದುರಾಗುವುದು.
ದೇವರ ಕೋಣೆಯಲ್ಲಿ ಒಡೆದ ಫೋಟೋಗಳಿದ್ದರೆ
ದೇವರ ಕೋಣೆಯಲ್ಲಿ ಒಡೆದ ಫೋಟೋಗಳು ಮನೆಯಲ್ಲಿ ಇದ್ದರೆ ಅದನ್ನು ಹೊರಗಡೆ ಹಾಕಬೇಕು, ಇಂಥ ಫೋಟೋಗಳನ್ನು ಮನೆಯಲ್ಲಿ ಇಡುವುದು ಮನೆಗೆ ಶ್ರೇಯಸ್ಸು ಅಲ್ಲ.
ಮುರಿದ ವಸ್ತುಗಳು
ಮುರಿದ ಚೇರ್ಗಳು, ಇತರ ಬಳಕೆಯ ವಸ್ತುಗಳು, ಒಡೆದ ಪಾತ್ರೆಗಳು ಇವುಗಳನ್ನು ಮನೆಯಲ್ಲಿ ಇಡಬಾರದು, ಇಂಥ ವಸ್ತುಗಳು ಮನೆಯಲ್ಲಿದ್ದರೆ ಅವುಗಳನ್ನು ಹೊರಹಾಕಿ.
ಚಲಿಸದೆ ಇರುವ ಗಡಿಯಾರದ ಮುಳ್ಳುಗಳು
ಮನೆಯಲ್ಲಿ ಚಲಿಸದೆ ಇರುವ ಗಡಿಯಾರದ ಮುಳ್ಳು ಇದ್ದರೆ ಅದನ್ನು ಮನೆಯಲ್ಲಿ ಇಡಬೇಡಿ, ಬ್ಯಾಟರಿ ಹಾಕಿದರೆ ಸರಿಯಾಗುವುದಾದರೆ ಬ್ಯಾಟರಿ ಹಾಕಿ, ಇಲ್ಲದಿದ್ದರೆ ಅದನ್ನು ಬಿಸಾಡಿ.
ಈ ವಾಸ್ತು ಸಲಹೆ ಪಾಲಿಸುವುದರಿಂದ ಮನೆಯಲ್ಲಿ ಋಣಾತ್ಮಕ ಶಕ್ತಿ ಕಡಿಮೆಯಾಗಿ ಧನಾತ್ಮಕ ಶಕ್ತಿ ಹೆಚ್ಚಾಗುವುದು, ಇದರಿಂದ ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಮನೆಯಲ್ಲಿ ನೆಮ್ಮದಿ ಇರಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.



Click it and Unblock the Notifications