Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ವರಮಹಾಲಕ್ಷ್ಮೀ ವ್ರತದ ಆಚರಣೆ ಹೇಗೆ?
ಶ್ರಾವಣದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮೀ ಹಬ್ಬವನ್ನು ಸ್ವಾಗತಿಸಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ. ಮಾರ್ಕೆಟ್ ಗೆ ಹೋದರೆ ಹಬ್ಬಕ್ಕೆ ಬೇಕಾದ ಪೂಜಾ ಸಾಮಾಗ್ರಿಗಳೇ ಕಂಡು ಬರುತ್ತಿದೆ.
ಹಣ್ಣು, ಹೂವು, ತರಕಾರಿಗಳ ಮೇಲೆ ಉಳಿದ ಸಮಯಕ್ಕಿಂತ ಸ್ವಲ್ಪ ಜಾಸ್ತಿ ಅನಿಸಿದರೂ ಹೂ ಮತ್ತು ಹಣ್ಣು ತಂದೇ ತರುತ್ತೇವೆ. ಹೀಗೆ ಭಾಗ್ಯದ ಲಕ್ಷ್ಮಿಯನ್ನು ಮನೆಗೆ ತುಂಬಿಸಿಕೊಳ್ಳುವ ಸಡಗರದಲ್ಲಿ ಮನೆಮನೆಗಳಲ್ಲಿ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.

ವರಮಹಾಲಕ್ಷ್ಮೀ ಹಬ್ಬದ ಸಮಯದಲ್ಲಿ ವೃತ ಮಾಡಲಾಗುವುದು. ಹೆಸರೇ ಸೂಚಿಸುವಂತೆ ಮನೆಗೆ ಐಶ್ವರ್ಯ ಬರುವಂತೆ ವರವನ್ನು ನೀಡು ತಾಯಿ ಎಂದು ಲಕ್ಷ್ಮಿ ದೇವಿಯ ವ್ರತ ಮಾಡಲಾಗುವುದು. ಈ ವ್ರತವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ಮಾಡಲಾಗುವುದು. ಈ ಸಮಯದಲ್ಲಿ ಮನೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗುವುದು.
ನಂತರ ವ್ರತ ಮಾಡುವಾಗ ಈ ಕೆಳಗಿನ ಕ್ರಮಗಳನ್ನು ಅನುಸರಿಸಲಾಗುವುದು.
ವರಮಹಾಲಕ್ಷ್ಮೀ ಹಬ್ಬದ ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ನಂತರ ವ್ರತ ಮಾಡುವವರು ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗೋಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ನಾಣ್ಯ ಇಟ್ಟು ಅದರ ಮೇಲೆ ಅರಿಶಿಣ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಬೇಕು.
ಕಲಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಈ ಕಲಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬೇಕು.
ನಂತರ ಮುತ್ತೈದೆಯರನ್ನು ಕರೆದು ಪೂಜೆ ಮಾಡಿ ಅವರಿಗೆ ತಾಂಬೂಲ ನೀಡಲಾಗುವುದು. ವ್ರತ ಮಾಡುವವರು ಪೂಜೆ ಮುಗಿದ ನಂತರ ಆಹಾರ ಸೇವಿಸುತ್ತಾರೆ. ಮದುವೆ ಮಾಡಿ ಕೊಟ್ಟ ಹೆಣ್ಣು ಮಗಳು ತವರಿಗೆ ಬಂದಿರುತ್ತಾಳೆ, ಈ ಸಂದರ್ಭದಲ್ಲಿ ತಾಯಿ ಬಾಗಿನ ಕೊಟ್ಟು ಅವಳನ್ನು ಹರಿಸುತ್ತಾಳೆ. ಈ ವ್ರತದಲ್ಲಿ ಹಬ್ಬದ ಅಡುಗೆಯನ್ನು ಮಾಡಿ ಮನೆಮಂದಿಯೆಲ್ಲ ಸೇರಿ ಬಹಳ ಸಂಭ್ರಮದಿಂದ ಈ ಹಬ್ಬ ಆಚರಿಸಲಾಗುವುದು.
ಕನ್ನಡ ಬೋಲ್ಡ್ ಸ್ಕೈ ಓದುಗರಿಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು.



Click it and Unblock the Notifications











