Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು!
ಮಂಗಳ ಗೌರಿ ವ್ರತಕ್ಕೆ ದೇವರ ಕೋಣೆಯ ಅಲಂಕಾರ
ಮಂಗಳ ಗೌರಿ ವ್ರತದಲ್ಲಿ ಮುತ್ತೈದೆಯರು ಗೌರಿಯನ್ನು ಪೂಜಿಸುತ್ತಾರೆ. ಈ ವ್ರತವನ್ನು ತುಂಬಾ ಜೋರಾಗಿ ಮಾಡಲಾಗುವುದು ಮನೆ ಮತ್ತು ದೇವರ ಕೋಣೆಯನ್ನು ಶುದ್ಧ ಮಾಡಿ, ದೇವರ ಕೋಣೆಯನ್ನು ಅಲಂಕರಿಸಲಾಗುವುದು. ಮಂಗಳ ಗೌರಿವ್ರತಕ್ಕೆ ಈ ಕೆಳಗಿನಂತೆ ದೇವರ ಕೋಣೆಯನ್ನು ಅಲಂಕರಿಸಲಾಗುವುದು.

ಈ ವ್ರತ ಮಾಡುವವರು ಮನೆಯನ್ನು ಶುದ್ಧ ಮಾಡಿ ದೇವರ ಕೋಣೆಯನ್ನುರಂಗೋಲಿ ಮತ್ತು ದೀಪ, ಹೂಗಳಿಂದ ಅಲಂಕರಿಸುತ್ತಾರೆ. ಗೌರಿ ಮೂರ್ತಿಗೆ ತುಂಬಾ ಅಲಂಕಾರ ಮಾಡಲಾಗುವುದು.
ದೇವರ ಕೋಣೆಯ ಮುಂದುಗಡೆ ರಂಗೋಲಿ ಹಾಕಿ ಅದರಲ್ಲಿ ಒಂದು ಮರದ ಹಲಗೆ ಇಟ್ಟು ಅದರ ಮೇಲೆ ಬ್ಲೌಸ್ ಪೀಸ್ ಇಟ್ಟು ಅದರಲ್ಲಿ ಅಕ್ಕಿ ಹಾಕಿ ಅದರ ಮೇಲೆ ಕಲಶ ಇಡಲಾಗುವುದು. ಕಲಶದಲ್ಲಿ ಅರ್ಧ ಭಾಗದಷ್ಟು ಶುದ್ಧ ನೀರು ತುಂಬಬೇಕು. ಅದರ ಸುತ್ತ ವೀಳ್ಯದೆಲೆಯಿಂದ ಅಲಂಕಾರ ಮಾಡಿರುತ್ತಾರೆ.
ಸಾಮಾನ್ಯವಾಗಿ 5 ವೀಳ್ಯದೆಲೆ ಇಡಲಾಗುವುದು. ನಂತರ ಒಂದು ತಟ್ಟೆಯಲ್ಲಿ ಅರಿಶಿಣ, ಕುಂಕುಮ, ತೇಯ್ದ ಗಂಧ ಇತರ ಪೂಜಾ ಸಾಮಾಗ್ರಿಗಳನ್ನು ಇಡಲಾಗುವುದು. ನಂತರ ಕಲಶದ ಬಾಯಿಯನ್ನು ತೆಂಗಿನ ಕಾಯಿಯನ್ನು ಕೆಂಪು ಬಟ್ಟೆಯಿಂದ ಸುತ್ತಿ ಅದನ್ನು ಕಲಶದ ಮೇಲೆ ಇಡಲಾಗುವುದು. ಹೂ, ಹಣ್ಣುಗಳು, ತೆಂಗಿನಕಾಯಿ ಮತ್ತು ಪಾಯಸವನ್ನು ತಯಾರಿಸಿ ಗೌರಿ ಮೂರ್ತಿ ಮುಂದೆ ಇಡಬೇಕು.
ಪೂಜೆ ಮಾಡುವಾಗ ತೇಯ್ದ ಗಂಧ, ಕೆಂಪು ಹೂ, ಅಗರಬತ್ತಿ ಮತ್ತು ದೀಪಗಳಿಂದ ಅಲಂಕರಿಸಲಾಗುವುದು. ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ಹಾಗೂ ಮದುವೆಯಾಗಿ ಐದು ವರ್ಷ ಆಗಿರದ ಮುತ್ತೈದೆಯರು ಸೇರಿ ಪೂಜೆ ಮಾಡಿ ಪೂಜೆಗೆ ಬಂದಂತಹ ಮುತ್ತೈದೆಯರಿಗೆ ಉಡುಗೊರೆ ಮತ್ತು ಅರಿಶಿಣ, ಕುಂಕುಮ ನೀಡಿ ಆರ್ಶೀವಾದ ಪಡೆಯುವುದು ಈ ವ್ರತದ ವಿಶೇಷ.



Click it and Unblock the Notifications