Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ದೀಪಾವಳಿಗೆ ಮನೆ ಅಲಂಕಾರಕ್ಕೆ ವಾಸ್ತು ಟಿಪ್ಸ್
ನಮ್ಮ ಜೀವನವೇ ನಂಬಿಕೆ ಮೇಲೆ ನಡೆಯುತ್ತಿದೆ. ನಾವೆಲ್ಲಾ ಆಚಾರಗಳನ್ನು ನಂಬುತ್ತೇವೆ, ಧರ್ಮದ ಆಚರಣೆಗಳನ್ನು ನಂಬಿ ನಡೆಸಿಕೊಂಡು ಬರುತ್ತೇವೆ, ಇಂದು ಯಾವುದ ೊಂದು ಸಮಸ್ಯೆಯಿದ್ದರೆ, ನಾಳೆ ಆ ಕಷ್ಟ ದೂರವಾಗಿ ಬದುಕು ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಲ್ಲಿ ಜೀವನವನ್ನು ನಡೆಸುತ್ತೇವೆ ಅಲ್ಲವೇ?
ನಮ್ಮಲ್ಲಿ ಹೆಚ್ಚಿನವರು ವಾಸ್ತು ಶಾಸ್ತ್ರವನ್ನು ನಂಬುತ್ತಾರೆ. ಮನೆ ಕಟ್ಟುವಾಗ ವಾಸ್ತು ಪ್ರಕಾರ ಮನೆ ಕಟ್ಟಿಸುತ್ತೇವೆ. ಮನೆ ಸಾಮಾನುಗಳನ್ನು ವಾಸ್ತು ಪ್ರಕಾರ ಇಡುತ್ತೇವೆ. ಈ ದೀಪಾವಳಿಯಲ್ಲಿ ಮನೆ ಅಲಂಕಾರ ಮಾಡುವಾಗ ನೀವು ವಾಸ್ತು ಶಾಸ್ತ್ರ ನಂಬುವುದಾದರೆ ಈ ಕೆಳಗಿನ ವಾಸ್ತು ಟಿಪ್ಸ್ ನಂತೆ ಮನೆಯನ್ನು ಅಲಂಕರಿಸಿ. ಈ ಟಿಪ್ಸ್ ನಿಮ್ಮ ಮನೆಗೆ ಸುಖ, ಸತೋಷ, ಸಮೃದ್ಧಿಯನ್ನು ತರುತ್ತದೆ.

ಮನೆ ಶುಚಿತ್ವ:
ಮನೆಯನ್ನು ಶುದ್ಧವಾಗಿಟ್ಟರೆ ಮಾತ್ರ ಲಕ್ಷ್ಮಿ ಒಲಿಯುತ್ತಾಳೆ. ಹೊಸ ವಸ್ತುಗಳನ್ನು ತಂದಿಡಲು ಜಾಗ ಮಾಡಿಡಬೇಕು. ದೀಪಾವಳಿ ಹಬ್ಬದ ಮಾರನೆಯ ದಿನ ಮನೆಯನ್ನು ಶುದ್ಧ ಮಾಡಲು ಮರೆಯಬಾರದು.

ವಸ್ತುಗಳನ್ನು ಬದಲಾಯಿಸಬೇಕು:
ವಾಸ್ತು ಪ್ರಕಾರ ಮನೆಯಲ್ಲಿ 27 ವಸ್ತುಗಳನ್ನು ಬದಲಾಯಿಸಿಟ್ಟರೆ ಶುಭ ಉಂಟಾಗುತ್ತದೆ ಎನ್ನಲಾಗುತ್ತದೆ. 27 ವಸ್ತುಗಳನ್ನು ಹೇಗಪ್ಪಾ ಬದಲಾಯಿಸಿವುದು ಎಂದು ಚಿಂತೆಯಾಗುತ್ತಿದೆಯೇ? ಸೋಫಾ ಇಟ್ಟ ಜಾಗವನ್ನು ಬದಲಾಯಿಸಿ, ಕುರ್ಚಿಗಳಿಟ್ಟ ಸ್ಥಳವನ್ನು ಬದಲಾಯಿಸಿ ಈ ರೀತಿ ಮಾಡಿದರೆ ಸುಲಭವಾಗಿ ವಸ್ತುಗಳನ್ನು ಬದಲಾಯಿಸಬಹುದು.

ಉಪ್ಪು ನೀರನ್ನು ಚಿಮುಕಿಸಿ:
ಉಪ್ಪು ನೀರನ್ನು ಮನೆಯೆಲ್ಲಾ ಚಿಮುಕಿಸಿದೆ ವಾಸ್ತು ಪ್ರಕಾರದ ಉಪ್ಪು ನೀರು ಮನೆಯಲ್ಲಿರುವ ದುಷ್ಟ ಶಕ್ತಿಗಳನ್ನು ನಾಶ ಪಡಿಸುತ್ತದೆ .

ಮನೆಯಲ್ಲಿ ಸಿಹಿ ಇರಬೇಕು:
ದೀಪಾವಳಿಯಲ್ಲಿ ಮನೆಯಲ್ಲಿ ಸಾಕಷ್ಟು ಸಿಹಿ ಪದಾರ್ಥಗಳ ಜೊತೆ ಸಕ್ಕರೆ ಅಥವಾ ಬೆಲ್ಲ ಇರಬೇಕು. ಆ ದಿನ ಸಕ್ಕರೆ ಕಡಿಮೆ ಇರಬಾರದು.

ಬಾಗಿಲು:
ಲಕ್ಷ್ಮಿಯು ಮುಂಬಾಗಿಲಿನಿಂದ ಒಳಕ್ಕೆ ಬರುತ್ತಾಳೆ, ಆದ್ದರಿಂದ ಬಾಗಿಲಿಗೆ ಅಡ್ಡವಾಗಿ ಏನೂ ಇಡಬಾರದು. ಬಾಗಿಲನ್ನು ತಳಿರು ತೋರಣಗಳಿಂದ ಅಲಂಕರಿಸಬೇಕು ಮನೆ ಮುಂದೆ ರಂಗೋಲಿ ಹಾಕಿರಬೇಕು ಹಾಗೂ ಬಾಗಿಲನ್ನು ಸಂಪೂರ್ಣವನ್ನು ತೆರೆದು ಇಡಬೇಕು.

ಮನೆಯ ಉತ್ತರ ಭಾಗದಲ್ಲಿ ದೇವರ ಮೂರ್ತಿ:
ಕುಬೇರನು ಉತ್ತರ ಭಾಗದಲ್ಲಿ ನೆಲೆಸುತ್ತಾನೆ. ಆದ್ದರಿಂದ ಲಕ್ಷ್ಮಿಯ ಮೂರ್ತಿಯನ್ನು ಮನೆಯ ಉತ್ತರ ಭಾಗದಲ್ಲಿ ಇಡಬೇಕು. ಲಕ್ಷ್ಮಿಯ ಬಲ ಭಾಗದಲ್ಲಿ ಗಣಪನ ಮೂರ್ತಿ ಹಾಗೂ ಎಡ ಭಾಗದಲ್ಲಿ ಸರಸ್ವತಿ ದೇವತೆಯ ಮೂರ್ತಿಯನ್ನು ಇಡಬೇಕು.

ಹರಿಯುವ ನೀರು:
ಹರಿಯುವ ನೀರು ಮನೆಗೆ ಸೌಭಾಗ್ಯವನ್ನು ತರುತ್ತದೆ. ಆದ್ದರಿಂದ ಮನೆಯಲ್ಲಿ ಉತ್ತರ-ಪೂರ್ವದ ಕಡೆಗೆ ಚಿಕ್ಕ ನೀರಿನ ಕಾರಂಜಿ ಅಥವಾ ನೀರು ಹರಿಯಲು ವ್ಯವಸ್ಥೆ ಮಾಡಬೇಕು.



Click it and Unblock the Notifications