Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ದೀಪಾವಳಿಗೆ ಮನೆ ಅಲಂಕಾರಕ್ಕೆ ವಾಸ್ತು ಟಿಪ್ಸ್
ನಮ್ಮ ಜೀವನವೇ ನಂಬಿಕೆ ಮೇಲೆ ನಡೆಯುತ್ತಿದೆ. ನಾವೆಲ್ಲಾ ಆಚಾರಗಳನ್ನು ನಂಬುತ್ತೇವೆ, ಧರ್ಮದ ಆಚರಣೆಗಳನ್ನು ನಂಬಿ ನಡೆಸಿಕೊಂಡು ಬರುತ್ತೇವೆ, ಇಂದು ಯಾವುದ ೊಂದು ಸಮಸ್ಯೆಯಿದ್ದರೆ, ನಾಳೆ ಆ ಕಷ್ಟ ದೂರವಾಗಿ ಬದುಕು ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಲ್ಲಿ ಜೀವನವನ್ನು ನಡೆಸುತ್ತೇವೆ ಅಲ್ಲವೇ?
ನಮ್ಮಲ್ಲಿ ಹೆಚ್ಚಿನವರು ವಾಸ್ತು ಶಾಸ್ತ್ರವನ್ನು ನಂಬುತ್ತಾರೆ. ಮನೆ ಕಟ್ಟುವಾಗ ವಾಸ್ತು ಪ್ರಕಾರ ಮನೆ ಕಟ್ಟಿಸುತ್ತೇವೆ. ಮನೆ ಸಾಮಾನುಗಳನ್ನು ವಾಸ್ತು ಪ್ರಕಾರ ಇಡುತ್ತೇವೆ. ಈ ದೀಪಾವಳಿಯಲ್ಲಿ ಮನೆ ಅಲಂಕಾರ ಮಾಡುವಾಗ ನೀವು ವಾಸ್ತು ಶಾಸ್ತ್ರ ನಂಬುವುದಾದರೆ ಈ ಕೆಳಗಿನ ವಾಸ್ತು ಟಿಪ್ಸ್ ನಂತೆ ಮನೆಯನ್ನು ಅಲಂಕರಿಸಿ. ಈ ಟಿಪ್ಸ್ ನಿಮ್ಮ ಮನೆಗೆ ಸುಖ, ಸತೋಷ, ಸಮೃದ್ಧಿಯನ್ನು ತರುತ್ತದೆ.

ಮನೆ ಶುಚಿತ್ವ:
ಮನೆಯನ್ನು ಶುದ್ಧವಾಗಿಟ್ಟರೆ ಮಾತ್ರ ಲಕ್ಷ್ಮಿ ಒಲಿಯುತ್ತಾಳೆ. ಹೊಸ ವಸ್ತುಗಳನ್ನು ತಂದಿಡಲು ಜಾಗ ಮಾಡಿಡಬೇಕು. ದೀಪಾವಳಿ ಹಬ್ಬದ ಮಾರನೆಯ ದಿನ ಮನೆಯನ್ನು ಶುದ್ಧ ಮಾಡಲು ಮರೆಯಬಾರದು.

ವಸ್ತುಗಳನ್ನು ಬದಲಾಯಿಸಬೇಕು:
ವಾಸ್ತು ಪ್ರಕಾರ ಮನೆಯಲ್ಲಿ 27 ವಸ್ತುಗಳನ್ನು ಬದಲಾಯಿಸಿಟ್ಟರೆ ಶುಭ ಉಂಟಾಗುತ್ತದೆ ಎನ್ನಲಾಗುತ್ತದೆ. 27 ವಸ್ತುಗಳನ್ನು ಹೇಗಪ್ಪಾ ಬದಲಾಯಿಸಿವುದು ಎಂದು ಚಿಂತೆಯಾಗುತ್ತಿದೆಯೇ? ಸೋಫಾ ಇಟ್ಟ ಜಾಗವನ್ನು ಬದಲಾಯಿಸಿ, ಕುರ್ಚಿಗಳಿಟ್ಟ ಸ್ಥಳವನ್ನು ಬದಲಾಯಿಸಿ ಈ ರೀತಿ ಮಾಡಿದರೆ ಸುಲಭವಾಗಿ ವಸ್ತುಗಳನ್ನು ಬದಲಾಯಿಸಬಹುದು.

ಉಪ್ಪು ನೀರನ್ನು ಚಿಮುಕಿಸಿ:
ಉಪ್ಪು ನೀರನ್ನು ಮನೆಯೆಲ್ಲಾ ಚಿಮುಕಿಸಿದೆ ವಾಸ್ತು ಪ್ರಕಾರದ ಉಪ್ಪು ನೀರು ಮನೆಯಲ್ಲಿರುವ ದುಷ್ಟ ಶಕ್ತಿಗಳನ್ನು ನಾಶ ಪಡಿಸುತ್ತದೆ .

ಮನೆಯಲ್ಲಿ ಸಿಹಿ ಇರಬೇಕು:
ದೀಪಾವಳಿಯಲ್ಲಿ ಮನೆಯಲ್ಲಿ ಸಾಕಷ್ಟು ಸಿಹಿ ಪದಾರ್ಥಗಳ ಜೊತೆ ಸಕ್ಕರೆ ಅಥವಾ ಬೆಲ್ಲ ಇರಬೇಕು. ಆ ದಿನ ಸಕ್ಕರೆ ಕಡಿಮೆ ಇರಬಾರದು.

ಬಾಗಿಲು:
ಲಕ್ಷ್ಮಿಯು ಮುಂಬಾಗಿಲಿನಿಂದ ಒಳಕ್ಕೆ ಬರುತ್ತಾಳೆ, ಆದ್ದರಿಂದ ಬಾಗಿಲಿಗೆ ಅಡ್ಡವಾಗಿ ಏನೂ ಇಡಬಾರದು. ಬಾಗಿಲನ್ನು ತಳಿರು ತೋರಣಗಳಿಂದ ಅಲಂಕರಿಸಬೇಕು ಮನೆ ಮುಂದೆ ರಂಗೋಲಿ ಹಾಕಿರಬೇಕು ಹಾಗೂ ಬಾಗಿಲನ್ನು ಸಂಪೂರ್ಣವನ್ನು ತೆರೆದು ಇಡಬೇಕು.

ಮನೆಯ ಉತ್ತರ ಭಾಗದಲ್ಲಿ ದೇವರ ಮೂರ್ತಿ:
ಕುಬೇರನು ಉತ್ತರ ಭಾಗದಲ್ಲಿ ನೆಲೆಸುತ್ತಾನೆ. ಆದ್ದರಿಂದ ಲಕ್ಷ್ಮಿಯ ಮೂರ್ತಿಯನ್ನು ಮನೆಯ ಉತ್ತರ ಭಾಗದಲ್ಲಿ ಇಡಬೇಕು. ಲಕ್ಷ್ಮಿಯ ಬಲ ಭಾಗದಲ್ಲಿ ಗಣಪನ ಮೂರ್ತಿ ಹಾಗೂ ಎಡ ಭಾಗದಲ್ಲಿ ಸರಸ್ವತಿ ದೇವತೆಯ ಮೂರ್ತಿಯನ್ನು ಇಡಬೇಕು.

ಹರಿಯುವ ನೀರು:
ಹರಿಯುವ ನೀರು ಮನೆಗೆ ಸೌಭಾಗ್ಯವನ್ನು ತರುತ್ತದೆ. ಆದ್ದರಿಂದ ಮನೆಯಲ್ಲಿ ಉತ್ತರ-ಪೂರ್ವದ ಕಡೆಗೆ ಚಿಕ್ಕ ನೀರಿನ ಕಾರಂಜಿ ಅಥವಾ ನೀರು ಹರಿಯಲು ವ್ಯವಸ್ಥೆ ಮಾಡಬೇಕು.



Click it and Unblock the Notifications