Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ದೀಪಾವಳಿಗೆ ಮನೆ ಅಲಂಕಾರಕ್ಕೆ ವಾಸ್ತು ಟಿಪ್ಸ್
ನಮ್ಮ ಜೀವನವೇ ನಂಬಿಕೆ ಮೇಲೆ ನಡೆಯುತ್ತಿದೆ. ನಾವೆಲ್ಲಾ ಆಚಾರಗಳನ್ನು ನಂಬುತ್ತೇವೆ, ಧರ್ಮದ ಆಚರಣೆಗಳನ್ನು ನಂಬಿ ನಡೆಸಿಕೊಂಡು ಬರುತ್ತೇವೆ, ಇಂದು ಯಾವುದ ೊಂದು ಸಮಸ್ಯೆಯಿದ್ದರೆ, ನಾಳೆ ಆ ಕಷ್ಟ ದೂರವಾಗಿ ಬದುಕು ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಲ್ಲಿ ಜೀವನವನ್ನು ನಡೆಸುತ್ತೇವೆ ಅಲ್ಲವೇ?
ನಮ್ಮಲ್ಲಿ ಹೆಚ್ಚಿನವರು ವಾಸ್ತು ಶಾಸ್ತ್ರವನ್ನು ನಂಬುತ್ತಾರೆ. ಮನೆ ಕಟ್ಟುವಾಗ ವಾಸ್ತು ಪ್ರಕಾರ ಮನೆ ಕಟ್ಟಿಸುತ್ತೇವೆ. ಮನೆ ಸಾಮಾನುಗಳನ್ನು ವಾಸ್ತು ಪ್ರಕಾರ ಇಡುತ್ತೇವೆ. ಈ ದೀಪಾವಳಿಯಲ್ಲಿ ಮನೆ ಅಲಂಕಾರ ಮಾಡುವಾಗ ನೀವು ವಾಸ್ತು ಶಾಸ್ತ್ರ ನಂಬುವುದಾದರೆ ಈ ಕೆಳಗಿನ ವಾಸ್ತು ಟಿಪ್ಸ್ ನಂತೆ ಮನೆಯನ್ನು ಅಲಂಕರಿಸಿ. ಈ ಟಿಪ್ಸ್ ನಿಮ್ಮ ಮನೆಗೆ ಸುಖ, ಸತೋಷ, ಸಮೃದ್ಧಿಯನ್ನು ತರುತ್ತದೆ.

ಮನೆ ಶುಚಿತ್ವ:
ಮನೆಯನ್ನು ಶುದ್ಧವಾಗಿಟ್ಟರೆ ಮಾತ್ರ ಲಕ್ಷ್ಮಿ ಒಲಿಯುತ್ತಾಳೆ. ಹೊಸ ವಸ್ತುಗಳನ್ನು ತಂದಿಡಲು ಜಾಗ ಮಾಡಿಡಬೇಕು. ದೀಪಾವಳಿ ಹಬ್ಬದ ಮಾರನೆಯ ದಿನ ಮನೆಯನ್ನು ಶುದ್ಧ ಮಾಡಲು ಮರೆಯಬಾರದು.

ವಸ್ತುಗಳನ್ನು ಬದಲಾಯಿಸಬೇಕು:
ವಾಸ್ತು ಪ್ರಕಾರ ಮನೆಯಲ್ಲಿ 27 ವಸ್ತುಗಳನ್ನು ಬದಲಾಯಿಸಿಟ್ಟರೆ ಶುಭ ಉಂಟಾಗುತ್ತದೆ ಎನ್ನಲಾಗುತ್ತದೆ. 27 ವಸ್ತುಗಳನ್ನು ಹೇಗಪ್ಪಾ ಬದಲಾಯಿಸಿವುದು ಎಂದು ಚಿಂತೆಯಾಗುತ್ತಿದೆಯೇ? ಸೋಫಾ ಇಟ್ಟ ಜಾಗವನ್ನು ಬದಲಾಯಿಸಿ, ಕುರ್ಚಿಗಳಿಟ್ಟ ಸ್ಥಳವನ್ನು ಬದಲಾಯಿಸಿ ಈ ರೀತಿ ಮಾಡಿದರೆ ಸುಲಭವಾಗಿ ವಸ್ತುಗಳನ್ನು ಬದಲಾಯಿಸಬಹುದು.

ಉಪ್ಪು ನೀರನ್ನು ಚಿಮುಕಿಸಿ:
ಉಪ್ಪು ನೀರನ್ನು ಮನೆಯೆಲ್ಲಾ ಚಿಮುಕಿಸಿದೆ ವಾಸ್ತು ಪ್ರಕಾರದ ಉಪ್ಪು ನೀರು ಮನೆಯಲ್ಲಿರುವ ದುಷ್ಟ ಶಕ್ತಿಗಳನ್ನು ನಾಶ ಪಡಿಸುತ್ತದೆ .

ಮನೆಯಲ್ಲಿ ಸಿಹಿ ಇರಬೇಕು:
ದೀಪಾವಳಿಯಲ್ಲಿ ಮನೆಯಲ್ಲಿ ಸಾಕಷ್ಟು ಸಿಹಿ ಪದಾರ್ಥಗಳ ಜೊತೆ ಸಕ್ಕರೆ ಅಥವಾ ಬೆಲ್ಲ ಇರಬೇಕು. ಆ ದಿನ ಸಕ್ಕರೆ ಕಡಿಮೆ ಇರಬಾರದು.

ಬಾಗಿಲು:
ಲಕ್ಷ್ಮಿಯು ಮುಂಬಾಗಿಲಿನಿಂದ ಒಳಕ್ಕೆ ಬರುತ್ತಾಳೆ, ಆದ್ದರಿಂದ ಬಾಗಿಲಿಗೆ ಅಡ್ಡವಾಗಿ ಏನೂ ಇಡಬಾರದು. ಬಾಗಿಲನ್ನು ತಳಿರು ತೋರಣಗಳಿಂದ ಅಲಂಕರಿಸಬೇಕು ಮನೆ ಮುಂದೆ ರಂಗೋಲಿ ಹಾಕಿರಬೇಕು ಹಾಗೂ ಬಾಗಿಲನ್ನು ಸಂಪೂರ್ಣವನ್ನು ತೆರೆದು ಇಡಬೇಕು.

ಮನೆಯ ಉತ್ತರ ಭಾಗದಲ್ಲಿ ದೇವರ ಮೂರ್ತಿ:
ಕುಬೇರನು ಉತ್ತರ ಭಾಗದಲ್ಲಿ ನೆಲೆಸುತ್ತಾನೆ. ಆದ್ದರಿಂದ ಲಕ್ಷ್ಮಿಯ ಮೂರ್ತಿಯನ್ನು ಮನೆಯ ಉತ್ತರ ಭಾಗದಲ್ಲಿ ಇಡಬೇಕು. ಲಕ್ಷ್ಮಿಯ ಬಲ ಭಾಗದಲ್ಲಿ ಗಣಪನ ಮೂರ್ತಿ ಹಾಗೂ ಎಡ ಭಾಗದಲ್ಲಿ ಸರಸ್ವತಿ ದೇವತೆಯ ಮೂರ್ತಿಯನ್ನು ಇಡಬೇಕು.

ಹರಿಯುವ ನೀರು:
ಹರಿಯುವ ನೀರು ಮನೆಗೆ ಸೌಭಾಗ್ಯವನ್ನು ತರುತ್ತದೆ. ಆದ್ದರಿಂದ ಮನೆಯಲ್ಲಿ ಉತ್ತರ-ಪೂರ್ವದ ಕಡೆಗೆ ಚಿಕ್ಕ ನೀರಿನ ಕಾರಂಜಿ ಅಥವಾ ನೀರು ಹರಿಯಲು ವ್ಯವಸ್ಥೆ ಮಾಡಬೇಕು.



Click it and Unblock the Notifications