Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಿಪರೀತ ಮಳೆ: ನಿಮ್ಮ ಕೈತೋಟದ ಆರೈಕೆ ಹೀಗಿರಲಿ
ಇದು ಚಳಿಗಾಲ, ನೋಡಿದರೆ ಮಳೆಗಾಲದಲ್ಲಿ ಸುರಿಯುವುದಕ್ಕಿಂತ ಹೆಚ್ಚಾಗಿ ಮಳೆ ಸುರಿಯುತ್ತಿದೆ. ಜೋರಾಗಿ ಮಳೆ ಬಂದರೆ ಹೊಲದಲ್ಲಿ ಬೆಳೆದ ಬೆಳೆ ನಾಶವಾಗುವುದು, ಆದರೆ ಜೋರು ಮಳೆಯಿಂದ ಟೆರೇಸ್ನಲ್ಲಿ ಬೆಳೆದ ಗಿಡಗಳನ್ನು ರಕ್ಷಣೆ ಮಾಡಬಹುದು.

ನಿಮ್ಮ ಗಾರ್ಡನ್ ಅನ್ನು ರಕ್ಷಣೆ ಮಾಡಲು ನೀವು ಮಾಡಬೇಕಾಗಿರುವುದು ಏನು ಎಂದು ನೋಡೋಣ ಬನ್ನಿ:

1. ಹಾಳಾದ ಗಿಡವನ್ನು ತೆಗೆಯಿರಿ
ಜೋರಾದ ಮಳೆಗೆ ಗಿಡ ಸ್ವಲ್ಪ ಹಾಳಾಗಿದ್ದರೆ ಸಂಪೂರ್ಣ ಕೊಳೆಯುವುದು, ಜೊತೆಗೆ ಈ ಗಿಡದಿಂದಾಗಿ ಮತ್ತೊಂದು ಗಿಡ ಹಾಳಾಗುವ ಸಾಧ್ಯತೆ ಇದೆ. ಆದ್ದರಿಂದ ಹಾಳಾದ ಗಿಡ, ಮುರಿದ ಕೊಂಬೆಗಳು, ಜೋರಾಗಿ ಗಾಳಿ ಬೀಸಿದಾಗ ಮುರಿದು ಬೀಳುವಂತಿರುವ ಕೊಂಬೆಗಳು ಇವುಗಳನ್ನು ತೆಗೆಯಿರಿ.

2. ಎತ್ತರದ ಗಿಡಗಳಿಗೆ ಸಪೋರ್ಟ್ ನೀಡಿ
ಎತ್ತರದ ಗಿಡಗಳಿದ್ದರೆ ಜೋರಾದ ಮಳೆ-ಗಾಳಿಗೆ ಮುರಿದು ಬೀಳುವುದು, ಅದನ್ನು ತಡೆಯಲು ಸಪೋರ್ಟ್ಗೆ ದೊಡ್ಡ ಕೋಲು ಅಥವಾ ಮರದ ಹಲಗೆ ನೀಡಿ, ಅಥವಾ ಬೀಳದಂತೆ ಹಗ್ಗದಿಂದ ಕಟ್ಟಿ.
3. ನೀರು ನಿಲ್ಲದಂತ ವ್ಯವಸ್ಥೆ ಮಾಡಿ
ಮನೆ ಮುಂದೆ ಚಿಕ್ಕ ಗಾರ್ಡನ್ ಮಾಡಿದ್ದರೆ ನೀರು ನಿಲ್ಲದಂತೆ ಎಚ್ಚರವಹಿಸಿ, ಅದೇ ಟೆರೇಸ್ ಗಾರ್ಡನ್ ಆದರೆ ನೀರು ನಿಲ್ಲದಂತೆ ವ್ಯವಸ್ಥೆ ಇರುತ್ತದೆ. ಒಂದು ವೇಳೆ ನಿಂತರೆ ನೀರು ಹೋಗಲು ವ್ಯವಸ್ಥೆ ಮಾಡಿ.

4. ಗಿಡಗಳನ್ನು ತೆಳುವಾದ ಪ್ಲಾಸ್ಟಿಕ್ನಿಂದ ಕವರ್ ಮಾಡಿ
ಈಗಷ್ಟ ಮೊಳಕ ಬರುತ್ತಿರುವ ಅಥವಾ ಚಿಕ್ಕ ಗಿಡಗಳಿಗೆ ತುಂಬಾ ನೀರು ಬಿದ್ದರೆ ಹಾಳಾಗುತ್ತದೆ, ಅದನ್ನು ತಡೆಗಟ್ಟಲು ತೆಳುವಾದ ಪ್ಲಾಸ್ಟಿಕ್ ಬಳಸಿ.
5. ಗೊಬ್ಬರ ಹಾಕಬೇಡಿ
ತುಂಬಾ ಮಳೆ ಸುರಿಯುತ್ತಿರುವ ಸಮಯದಲ್ಲಿ ಗೊಬ್ಬರ ಹಾಕಬೇಡಿ, ಅದು ನೀರಿನಲ್ಲಿ ಕೊಚ್ಚಿ ಹೋಗುತ್ತದೆ, ಅದರ ಬದಲಿಗೆ ಮಳೆ ನಿಂತ ಬಳಿಕ ಅಥವಾ ಸ್ವಲ್ಪ ಮಳೆ ಬರುವಾಗ ಗೊಬ್ಬರ ಹಾಕಿದರೆ ಚೆನ್ನಾಗಿ ಹೀರಿಕೊಳ್ಳುವುದು.

6. ಮಳೆ ನಿಂತ ಮೇಲೆ
ಪ್ಲಾಸ್ಟಿಕ್ ಹಾಕಿರದಿದ್ದರೆ ಮಳೆ ನಿಂತ ಮೇಲೆ ಗಿಡದ ಬುಡಕ್ಕೆ ಹಾನಿಯಾಗಿದೆಯೇ ಎಂದು ಪರೀಕ್ಷಿಸಿ. ಅಲ್ಲದೆ ಮಳೆ ನಂತರ ಹುಳ-ಹುಪ್ಪಟೆಗಳು ಬಂದಿದ್ದರೆ ಅವುಗಳನ್ನು ತೆಗೆಯಿರಿ.



Click it and Unblock the Notifications