Latest Updates
-
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ!
ಮನೆ ಮುಂದೆ ಈ ಗಿಡಗಳಿದ್ದರೆ ಲಕ್ಷ್ಮಿ ಮನೆಯೊಳಗೆ ನೆಲೆಸುತ್ತಾಳೆ..!
ಮನೆ ಕಟ್ಟುವಾಗ ವಾಸ್ತು ಪ್ರಕಾರವಾಗಿ ಕಟ್ಟಲಾಗುತ್ತದೆ, ವಾಸ್ತುಶಸ್ತ್ರದಲ್ಲಿ ಹಾಗೂ ಸಂಖ್ಯಾಶಾಸ್ತ್ರಗಳ ಕೆಲವು ನಿಯಮಗಳ ಅನ್ವಯ ಮನೆಯ ಅಡಿಪಾಯದಿಂದ ಹಿಡಿದು ಎಲ್ಲಾ ಪ್ರಕ್ರಿಯೆಗಳು ನಡೆಯುತ್ತವೆ. ಏಕೆಂದರೆ ವಾಸ್ತುವಿನಲ್ಲಿ ಹೇಳುವಂತೆ, ದೋಷಯುಕ್ತ ಮನೆ ನಿರ್ಮಾಣವು ಇಡೀ ಮನೆಯ ಶಾಂತಿ ಹಾಳು ಮಾಡುತ್ತದೆ.
ಆದರೆ ಮನೆಯಲ್ಲಿ ವಾಸ್ತು ಸಮಸ್ಯೆಗಳು ಕಂಡುಬಂದಾಗ ಏನು ಮಾಡಬೇಕು? ಕೆಲವೊಮ್ಮೆ ಹಲವು ನೂರಾರು ರೀತಿಯ ಸಲಹೆ ನೀಡುತ್ತಾರೆ. ಆದ್ರೆ ನಾವಿಂದು ಕೆಲವೊಂದು ಗಿಡಗಳ ನೆಡುವುದರಿಂದ ಆಗುವ ಲಾಭದ ಕುರಿತು ತಿಳಿಸುತ್ತೇವೆ. ಸದಸ್ಯರು ಇಲ್ಲವೆ ಮನೆಯಲ್ಲಿ ವಾಸ್ತು ದೋಷ ಕಂಡುಬಂದರೆ ಹೇಗೆ ಅದನ್ನು ಪರಿಹರಿಸಬೇಕು? ಇದಕ್ಕೆ ಯಾವ ಗಿಡ ಅಥವಾ ಸಸ್ಯದಲ್ಲಿ ಪರಿಹಾರ ನೀಡಲಾಗಿದೆ ಎಂಬುದನ್ನು ನಾವಿಂದು ತಿಳಿಯೋಣ.

ಮನೆ ಮುಂಭಾಗದಲ್ಲಿ ಕೆಲವೊಂದು ಗಿಡ ನೆಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗಲಿದೆ. ದೇವಿಯ ಅನುಗ್ರಹಕ್ಕಾಗಿ ಯಾವ ಗಿಡ ಇಡಬೇಕು ಎಂಬುದನ್ನು ನೋಡೋಣ.
ತುಳಸಿ ಗಿಡ
ಎಲ್ಲರ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ. ಅದ್ರಲ್ಲೂ ಮನೆಯ ದ್ವಾರಕ್ಕೆ ನೇರವಾಗಿ ತುಳಸಿ ಕಟ್ಟೆ ಇರಬೇಕು. ಜೊತೆಗೆ ಎರಡು ರೀತಿಯ ತುಳಿಸಿ ಗಿಡ ಇದ್ದರೆ ಇನ್ನಷ್ಟು ಒಳ್ಳೆಯದು. ಒಂದು ಲಕ್ಷ್ಮಿ ತುಳಸಿ ಹಾಗೂ ಮತ್ತೊಂದು ವಿಷ್ಣು ತುಳಸಿ. ಒಂದು ಕಂದು ಬಣ್ಣದಲ್ಲಿರುವ ತುಳಸಿಯನ್ನು ನೀವು ನೋಡಿರಬಹುದು, ಇರನ್ನು ರಾಮ ತುಳಸಿ ಅಂತಲೂ ಕರೆಯುತ್ತಾರೆ. ಈ ಗಿಡಗಳು ಮನೆಯ ಮುಂಭಾಗದಲ್ಲಿರಬೇಕು ಜೊತೆಗೆ ಅದಕ್ಕೆ ನೀರು ಹಾಕಿ ಸಲಹಬೇಕು.
ಬಿಲ್ವ ಪತ್ರೆ
ಕೆಲವರು ಇದನ್ನು ಬಿಲ್ಪತ್ರೆ ಅಂತಲೂ ಕರೆಯುತ್ತಾರೆ. ಇದು ಸಣ್ಣ ಮಡಕೆಯಲ್ಲಿ ಹಾಕಿ ಮನೆ ಮುಂದೆ ನಡೆಬೇಕು ಎನ್ನಲಾಗಿದೆ. ಇದು ಲಕ್ಷ್ಮಿಯ 16 ಸ್ಥಾನಗಳಲ್ಲಿ ಬಿಲ್ವ ವೃಕ್ಷವೂ ಒಂದಾಗಿದೆ. ಹೀಗಾಗಿ ಲಕ್ಷ್ಮಿಯ ಅನುಗ್ರಹಕ್ಕಾಗಿ ಈ ಗಿಡ ನೆಡಬೇಕು ಎಂದು ಹೇಳಲಾಗಿದೆ. ಇದಕ್ಕೆ ತಾಮ್ರದ ಪಾತ್ರೆಯಿಂದ ನೀರು ಹಾಕಬೇಕು ಎಂದು ಹೇಳಲಾಗಿದೆ.
ಅಲೂವೇರಾ
ಅಲೂವೇರಾ ಗಿಡ ಮನೆಯಲ್ಲಿ ಇರಬೇಕು. ಮನೆಯ ಮುಂದಿನ ಬಲಗಡೆಯ ಮೂಲೆಯಲ್ಲಿ ನೇತುಹಾಕುತ್ತಾರೆ. ಇದರಿಂದ ಮಾಠ ಮಂತ್ರದಂತಹ ಕಾರ್ಯಗಳು ವಿಫಲಾವಾಗುತ್ತದೆ ಎಂದು ನಂಬಲಾಗುತ್ತದೆ. ಇದು ನೀರಿಲ್ಲದೆಯೂ ಬೆಳೆಯುತ್ತದೆ. ಇದನ್ನು ಮನೆಯಲ್ಲಿ ಇಟ್ಟರೆ ಧನಾತ್ಮಕ ಶಕ್ತಿ ನೆಲೆಸುತ್ತದೆ ಎನ್ನಲಾಗಿದೆ.
ಮನಿ ಪ್ಲಾಂಟ್
ನೀವು ಮನಿ ಪ್ಲಾಂಟ್ ನೋಡಿರುತ್ತೀರಿ. ರೆಂಬೆ ಕೊಂಬೆ ಇರದೆ ಇದು ಬೆಳಯುತ್ತದೆ. ಇದನ್ನು ನೆಲದ ಮೇಲೆ ಹರಡಲು ಬಿಡಬಾರದು. ಇದಕ್ಕೆ ಹಗ್ಗ ಅಥವಾ ತಂತಿ ಹಾಕಿ ಅದನ್ನು ಮೇಲೆ ಹೋಗುವಂತೆ ಬಿಡಬೇಕು. ಈ ಗಿಡಕ್ಕೆ ನೀರು ಹಾಕಿ ಬೆಳೆಸಬೇಕು.
ಅರಶಿನ
ಅರಶಿನದ ಗಿಡವನ್ನು ಒಂದು ಪಾಟ್ನಲ್ಲಿ ನೆಡಬೇಕು. ಲಕ್ಷ್ಮಿ ಹಾಗೂ ಗೌರಮ್ಮನಿಗೆ ಈ ಲಕ್ಷ್ಮಿ ಗಿಡ ತುಂಬಾ ಇಷ್ಟ, ಯಾವ ಮನೆಯಲ್ಲಿ ಅರಶಿನ ಗಿಡ ನೆಟ್ಟು ಬೆಳೆಸುತ್ತಾರೋ ಆ ಮನೆಯಲ್ಲಿ ಮಹಿಳೆಯರಿಗೆ ಶ್ರೇಯವಂತೆ. ಅಲ್ಲದೆ ಅರಶಿನ ದರಿದ್ರತನವನ್ನು ದೂರ ಮಾಡುತ್ತದೆ ಎಂದು ನಂಬಲಾಗಿದೆ.
ಬಾಳೆಗಿಡ ಮತ್ತು ಕಬ್ಬು
ಯಾವುದೇ ಶುಭ ಸಮಾರಂಭದಲ್ಲಿ ಬಾಳೆಗಿಡ ಹಾಗೂ ಕಬ್ಬಿನ ಬಳಕೆ ಮಾಡುತ್ತೇವೆ. ಅಂದರೆ ಇದು ದೇವರಿಗೆ ಅಂತ್ಯಂತ ಶ್ರೇಷ್ಟ. ಬಾಳೆಗಿಡದಲ್ಲಿ ಲಕ್ಷ್ಮಿ ದೇವಿ ನೆಲೆಸಿರುತ್ತಾಳೆ ಎಂದು ನಂಬಲಾಗಿದೆ. ಇನ್ನು ಕಬ್ಬು ಸಹ ಲಕ್ಷ್ಮಿ ನಾರಾಯಣನಿಗೆ ಶ್ರೇಷ್ಟವಾದ ಗಿಡವಾಗಿದೆ.
ಇದೆಲ್ಲಾ ಗಿಡಗಳು ನಿಮ್ಮ ಮನೆ ಮುಂದೆ ಇದ್ದರೆ ಲಕ್ಷ್ಮಿ ಅನುಗ್ರಹವಾಗಲಿದೆ, ಆಕೆ ಸದಾ ಮನೆಯಲ್ಲಿ ನೆಲೆಸುತ್ತಾಳೆ ಎಂದು ನಂಬಲಾಗಿದೆ.



Click it and Unblock the Notifications