Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸುಂದರ ಕೈ ತೋಟಕ್ಕೆ ನೈಸರ್ಗಿಕ ಕ್ರಿಮಿನಾಶಕ

ಈ ಕ್ರಿಮಿನಾಶಕಗಳನ್ನು ಹೇಗೆ ತಯಾರಿಸಬಹುದು ಎಂದು ತಿಳಿಯೋಣ:
1. ಮೊಟ್ಟೆ ಸಿಪ್ಪೆ ಮತ್ತು ಉಪ್ಪು: ಮೊಟ್ಟೆಯ ಸಿಪ್ಪೆ ಮತ್ತು ಸ್ವಲ್ಪ ಉಪ್ಪನ್ನು ಗಿಡದ ಬುಡಕ್ಕೆ ಹಾಕಬೇಕು. ಇದು ಸಸ್ಯಗಳನ್ನು ಹಾಳು ಮಾಡುವ ಬಸವನ ಹುಳು, ಗೊಂಡೆ ಹುಳುಗಳನ್ನು ನಾಶಪಡಿಸುತ್ತದೆ.
2. ಈರುಳ್ಳಿ : ಬೆಳ್ಳುಳ್ಳಿ, ಈರುಳ್ಳಿಯ ಎಸಳುಗಳನ್ನು ನೀರಿನೊಂದಿಗೆ ಬೆರೆಸಿ, ಹಿಂಡಿ ಮಣ್ಣಿನ ಮೇಲೆ ಹಾಕಿದರೆ ಹುಳುಗಳನ್ನು ನಾಶ ಪಡಿಸುತ್ತದೆ ಮತ್ತು ಹಾರುವ ಚಿಟ್ಟೆಗಳನ್ನು ನಿಯಂತ್ರಣ ಮಾಡುತ್ತದೆ. ಇದನ್ನು ತರಕಾರಿ ಎಣ್ಣೆಯೊಂದಿಗೆ ಬೆರೆಸಿ ಹಾಕಿದರೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ.
3. ಬೆಳ್ಳುಳ್ಳಿ: ಬೆಳ್ಳುಳ್ಳಿ ಸಿಪ್ಪೆ ಸಮೇತ ಎಸಳುಗಳನ್ನು ಎರಡು ಮೆಣಸಿನ ಕಾಯಿಯೊಂದಿಗೆ ಬ್ಲೀಚ್ ಸೇರಿಸಿ ನೀರಿನೊಂದಿಗೆ ಬೆರೆಸಿ ಸಿಂಪಡಿಸಿದರೆ ಎಂತಹ ಹುಳುವಿದ್ದರೂ ನಿಯಂತ್ರಣಕ್ಕೆ ಬರುತ್ತದೆ. ಇದನ್ನು ಎಲೆಯ ಕೆಳಗೆಯೂ ಸಿಂಪಡಿಸಬೇಕು.
4. ಸೋಪು: ಪಾತ್ರೆ ತೊಳೆಯುವ ಸೋಪುಗಳನ್ನು ಸಹ ಕ್ರಿಮಿನಾಶಕದಂತೆ ಬಳಸಬಹುದು. ನೀರಿನೊಂದಿಗೆ ದ್ರವರೂಪದಲ್ಲಿ ಸೋಪನ್ನು ಬೆರೆಸಿ ಗಿಡಗಳಿಗೆ ಸಿಂಪಡಿಸಬೇಕು. ಹಣ್ಣು, ತರಕಾರಿಗಳ ಮೇಲೆ ಸಿಂಪಡಿಸಬಾರದು. ಇದನ್ನು ಆಗಾಗ್ಗೆ ಮಾತ್ರ ಉಪಯೋಗಿಸಬೇಕು.
5. ಟೊಮೊಟೊ: ಟೊಮೊಟೊಗಳ ಎಲೆಯಲ್ಲಿ ಕ್ರಿಮಿಗಳನ್ನು ನಾಶ ಮಾಡುವಂತ ಸತ್ವವಿರುವುದರಿಂದ ಇವುಗಳ ಎಲೆಯನ್ನು ಬಳಸಬಹುದು. ಎಲೆಯನ್ನು ಚಿಕ್ಕದಾಗಿ ಕತ್ತರಿಸಿ ಒಂದು ಕಪ್ ಎಲೆಗೆ ಒಂದು ಕಪ್ ನೀರು ಬೆರೆಸಿ 24 ಗಂಟೆ ನೆನೆಯಿಸಿ ಸೋಸಿದ ನೀರನ್ನು ಗಿಡಕ್ಕೆ ಸಿಂಪಡಿಸಬೇಕು. ಇದು ಗಿಡಗಳ ಬೆಳವಣಿಗೆಗೆ ಮಾರಕವಾಗಿರುವ ಕ್ರಿಮಿಗಳನ್ನು ನಾಶಪಡಿಸುತ್ತದೆ.
6. ಬೇವಿನ ಎಣ್ಣೆ: ಬೇವಿನ ಎಣ್ಣೆಯ ಸಿಂಪಡಿಸುವುದರಿಂದ ಕ್ರಿಮಿಗಳೂ ನಾಶವಾಗುವುದು ಮಾತ್ರವಲ್ಲ, ಮತ್ತೆ ಕ್ರಿಮಿಗಳು ಮರುಕಳಿಸದಂತೆ ಮಾಡುತ್ತದೆ. ಇದು ಇನ್ನೂ ಅನೇಕ ಸಸ್ಯ ಸಂಬಂಧಿ ರೋಗಗಳನ್ನು ತಡೆಗಟ್ಟುತ್ತದೆ.
7. ಕಾಫಿ ಪುಡಿ ಉಳಿಕೆ: ಕಾಫಿ ಪುಡಿಯ ಉಳಿಕೆಯನ್ನು ಗಿಡಗಳ ಸುತ್ತ ಹಾಕಿದರೆ ಗಿಡಗಳು ಚೈತನ್ಯ ಪಡೆದುಕೊಳ್ಳುತ್ತವೆ.
8. ಎರೆಹುಳ: ಎರೆಹುಳುವನ್ನು ಮಣ್ಣಿನಲ್ಲಿ ಹಾಕುವುದರಿಂದ ಫಲವತ್ತತೆ ಹೆಚ್ಚಾಗಿ ಗಿಡಗಳಿಗೆ ಸೂಕ್ತ ಪೋಷಕಾಂಶ ದೊರೆಯುತ್ತದೆ.



Click it and Unblock the Notifications