Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಆಹಾರ ಕೆಡದಂತೆ ಶೇಖರಿಸಿಡುವ ವಿಧಾನ

ದವಸ ಧಾನ್ಯಗಳನ್ನು, ಒಣ ಹಣ್ಣುಗಳನ್ನು ತುಂಬಾ ಕಾಲ ಇಡಬಹುದಾದರೂ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಡದಿದ್ದರೆ ಆ ವಸ್ತುಗಳಲ್ಲಿ ಬೂಸ್ಟು ಕಂಡು ಬರುವುದು. ಇನ್ನು ತರಕಾರಿ ಮತ್ತು ಹಣ್ಣುಗಳನ್ನು ತುಂಬಾ ಕಾಲ ಇಡಲು ಸಾಧ್ಯವಾಗದಿದ್ದರೂ ಸ್ವಲ್ಪ ಗಮನಕೊಟ್ಟರೆ ಎರಡು ದಿನ ಹೆಚ್ಚು ಬಾಳಿಕೆ ಬರುವಂತೆ ಮಾಡಬಹುದು.
ಆದ್ದರಿಂದ ಆಹಾರದಲ್ಲಿರುವ ಪೋಷಕಾಂಶಗಳು ಹಾಳಾಗದಂತೆ ನೋಡಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಬಳಸಬಹುದು:
ಶಾಖದಿಂದ ದೂರವಿಡಿ: ತುಪ್ಪ ಅಥವಾ ಸಂಬಾರ ಪದಾರ್ಥಗಳನ್ನು ಉರಿಯಿಂದ ದೂರವಿಡಬೇಕು. ತುಪ್ಪವನ್ನು ಒಂದು ರಾತ್ರಿ ಬೆಂಕಿಯ ಹತ್ತಿರ ಇಟ್ಟು ಬೆಳಗ್ಗೆ ತುಪ್ಪದ ರುಚಿ ನೋಡಿದರೆ ಅದು ರುಚಿಯನ್ನು ಕಳೆದುಕೊಂಡಿರುವಂತೆ ಭಾಸವಾಗುತ್ತದೆ. ಆದ್ದರಿಂದ ಅಂತಹ ವಸ್ತುಗಳನ್ನು ಉರಿಯಿಂದ ದೂರ ಇಡಬೇಕು.
ಸೊಪ್ಪು: ಕೊತ್ತಂಬರಿ ಸೊಪ್ಪು, ಮೆಂತೆ ಸೊಪ್ಪು, ಕರಿಬೇವಿನ ಎಲೆ ಮತ್ತು ಇತರ ಸೊಪ್ಪುಗಳನ್ನು ಪ್ರಿಜ್ ನಲ್ಲಿ ಇಡುವ ಮುನ್ನ ಅದನ್ನು ಪೇಪರ್ ನಿಂದ ಸುತ್ತಿ ಪ್ರಿಜ್ ನಲ್ಲಿ ಇಟ್ಟರೆ ಅದು ತನ್ನ ತಾಜಾತನವನ್ನು ಕಳೆದುಕೊಳ್ಳುವುದಿಲ್ಲ.
ಎಲ್ಲಾ ವಸ್ತುಗಳನ್ನು ಪ್ರಿಜ್ ನಲ್ಲಿ ಇಡುವುದು ಸೂಕ್ತವಲ್ಲ: ಕಾಳುಗಳನ್ನು ಡಬ್ಬದಲ್ಲಿ ಸಂಗ್ರಹಿಸುವುದು ಸೂಕ್ತ. ಹಾಗೆಯೇ ಬಾಳೆ ಹಣ್ಣು, ಬೇಕರಿ ತಿಂಡಿಗಳನ್ನು ಪ್ರಿಜ್ ನಲ್ಲಿಟ್ಟರೆ ಅದರ ಮೂಲ ರುಚಿ ಕಳೆದುಕೊಳ್ಳುವುದು.
ಗಾಳಿಯಾಡದಂತಹ ಡಬ್ಬಿ: ಮೆಂತೆ, ಉದ್ದಿನ ಬೇಳೆ, ತೊಗರಿ ಬೇಳೆ, ಉಪ್ಪಿನಕಾಯಿ ಮುಂತಾದ ವಸ್ತುಗಳನ್ನು ಗಾಳಿಯಾಡದಂತಹ ಡಬ್ಬದಲ್ಲಿ ಶೇಖರಿಸಿಡಬೇಕು.



Click it and Unblock the Notifications