Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಆಹಾರ ಕೆಡದಂತೆ ಶೇಖರಿಸಿಡುವ ವಿಧಾನ

ದವಸ ಧಾನ್ಯಗಳನ್ನು, ಒಣ ಹಣ್ಣುಗಳನ್ನು ತುಂಬಾ ಕಾಲ ಇಡಬಹುದಾದರೂ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಡದಿದ್ದರೆ ಆ ವಸ್ತುಗಳಲ್ಲಿ ಬೂಸ್ಟು ಕಂಡು ಬರುವುದು. ಇನ್ನು ತರಕಾರಿ ಮತ್ತು ಹಣ್ಣುಗಳನ್ನು ತುಂಬಾ ಕಾಲ ಇಡಲು ಸಾಧ್ಯವಾಗದಿದ್ದರೂ ಸ್ವಲ್ಪ ಗಮನಕೊಟ್ಟರೆ ಎರಡು ದಿನ ಹೆಚ್ಚು ಬಾಳಿಕೆ ಬರುವಂತೆ ಮಾಡಬಹುದು.
ಆದ್ದರಿಂದ ಆಹಾರದಲ್ಲಿರುವ ಪೋಷಕಾಂಶಗಳು ಹಾಳಾಗದಂತೆ ನೋಡಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಬಳಸಬಹುದು:
ಶಾಖದಿಂದ ದೂರವಿಡಿ: ತುಪ್ಪ ಅಥವಾ ಸಂಬಾರ ಪದಾರ್ಥಗಳನ್ನು ಉರಿಯಿಂದ ದೂರವಿಡಬೇಕು. ತುಪ್ಪವನ್ನು ಒಂದು ರಾತ್ರಿ ಬೆಂಕಿಯ ಹತ್ತಿರ ಇಟ್ಟು ಬೆಳಗ್ಗೆ ತುಪ್ಪದ ರುಚಿ ನೋಡಿದರೆ ಅದು ರುಚಿಯನ್ನು ಕಳೆದುಕೊಂಡಿರುವಂತೆ ಭಾಸವಾಗುತ್ತದೆ. ಆದ್ದರಿಂದ ಅಂತಹ ವಸ್ತುಗಳನ್ನು ಉರಿಯಿಂದ ದೂರ ಇಡಬೇಕು.
ಸೊಪ್ಪು: ಕೊತ್ತಂಬರಿ ಸೊಪ್ಪು, ಮೆಂತೆ ಸೊಪ್ಪು, ಕರಿಬೇವಿನ ಎಲೆ ಮತ್ತು ಇತರ ಸೊಪ್ಪುಗಳನ್ನು ಪ್ರಿಜ್ ನಲ್ಲಿ ಇಡುವ ಮುನ್ನ ಅದನ್ನು ಪೇಪರ್ ನಿಂದ ಸುತ್ತಿ ಪ್ರಿಜ್ ನಲ್ಲಿ ಇಟ್ಟರೆ ಅದು ತನ್ನ ತಾಜಾತನವನ್ನು ಕಳೆದುಕೊಳ್ಳುವುದಿಲ್ಲ.
ಎಲ್ಲಾ ವಸ್ತುಗಳನ್ನು ಪ್ರಿಜ್ ನಲ್ಲಿ ಇಡುವುದು ಸೂಕ್ತವಲ್ಲ: ಕಾಳುಗಳನ್ನು ಡಬ್ಬದಲ್ಲಿ ಸಂಗ್ರಹಿಸುವುದು ಸೂಕ್ತ. ಹಾಗೆಯೇ ಬಾಳೆ ಹಣ್ಣು, ಬೇಕರಿ ತಿಂಡಿಗಳನ್ನು ಪ್ರಿಜ್ ನಲ್ಲಿಟ್ಟರೆ ಅದರ ಮೂಲ ರುಚಿ ಕಳೆದುಕೊಳ್ಳುವುದು.
ಗಾಳಿಯಾಡದಂತಹ ಡಬ್ಬಿ: ಮೆಂತೆ, ಉದ್ದಿನ ಬೇಳೆ, ತೊಗರಿ ಬೇಳೆ, ಉಪ್ಪಿನಕಾಯಿ ಮುಂತಾದ ವಸ್ತುಗಳನ್ನು ಗಾಳಿಯಾಡದಂತಹ ಡಬ್ಬದಲ್ಲಿ ಶೇಖರಿಸಿಡಬೇಕು.



Click it and Unblock the Notifications
