Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ವಾಸ್ತು ಪ್ರಕಾರ ಮನೆಗೆ ದೋಷ ತರುವ ವಸ್ತುಗಳು!
ಭಾರತೀಯರು ಹೆಚ್ಚಾಗಿ ವಾಸ್ತು ಪ್ರಕಾರ ಮನೆ ಕಟ್ಟಿಸುವುದು ಜಾಸ್ತಿ. ಕೆಲವರು ಅದನ್ನು ಮೂಢನಂಬಿಕೆ ಎಂದು ಹೇಳಿದರೆ ಮತ್ತೆ ಕೆಲವರು ತುಂಬಾ ದೃಢವಾಗಿ ವಾಸ್ತು ಶಾಸ್ತ್ರ ನಂಬುತ್ತಾರೆ. ವಾಸ್ತು ನಂಬಬೇಕೋ? ಬೇಡ್ವ? ಅನ್ನುವುದು ಅವರವರ ಅಭಿಪ್ರಾಯಕ್ಕೆ ಬಿಟ್ಟದ್ದು. ಪ್ರತಿಯೊಬ್ಬರೂ ನಮ್ಮ ಮನೆಯಲ್ಲಿ ಆರೋಗ್ಯ, ಸಂತೋಷ ಮತ್ತು ಐಶ್ಚರ್ಯ ಇರಬೇಕೆಂದು ಬಯಸುತ್ತೇವೆ. ಈ ರೀತಿ ಇರಬೇಕಾದರೆ ವಾಸ್ತು ಶಾಸ್ತ್ರದಲ್ಲಿ ಈ ಕೆಳಗಿನ ಪ್ರಮುಖ ವಸ್ತುಗಳನ್ನು ಮನೆಯಲ್ಲಿ ಇಡಬಾರದೆಂದು ಹೇಳುತ್ತಾರೆ, ವಾಸ್ತು ಪ್ರಕಾರ ಮನೆಗೆ ದೋಷ ತರುವ ಆ ವಸ್ತುಗಳು ಯಾವುದು ಎಂದು ತಿಳಿಯಲು ಮುಂದೆ ಓದಿ.

ಮಹಾಭಾರತದ ಚಿತ್ರಗಳು: ಮಹಾಭಾರತ ಪವಿತ್ರವಾದ ಗ್ರಂಥವಾದರೂ, ಅದರ ಕತೆಯನ್ನು ವಿವರಿಸುವ ಯಾವುದೇ ಫೋಟೊವನ್ನು ಮನೆಯಲ್ಲಿ ಇಡಬಾರದು ಎಂದು ಹೇಳಲಾಗುವುದು. ಮಹಾಭಾರತದಲ್ಲಿ ಯುದ್ಧ ಪ್ರಮುಖ ಕೇಂದ್ರಬಿಂದುವಾಗಿರುವುದರಿಂದ , ಇದರ ಪೋಟೊ ಇಟ್ಟರೆ ಮನೆಯವರ ಮಧ್ಯ ಜಗಳ ತಪ್ಪುವುದಿಲ್ಲ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.
ತಾಜ್ ಮಹಲ್: ಅಮರ ಪ್ರೇಮದ ಸಂಕೇತವಾಗಿರುವ ತಾಜ್ ಮಹಲ್ ಪ್ರಪಂಚದ ಏಳನೇ ಅದ್ಭುತಗಳಲ್ಲಿ ಒಂದು. ಇದನ್ನು ನೋಡಿದರೆ ಇದರ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ, ಆದರೆ ಎಷ್ಟೇ ಸೌಂದರ್ಯವಿರಲಿ ವಾಸ್ತು ಪ್ರಕಾರ ಹೇಳುವುದಾದರೆ ಇದೊಂದು ಸಮಾಧಿ, ಸಮಾಧಿಯ ಚಿತ್ರ ಮನೆಯಲ್ಲಿ ಇಡುವುದು ಸರಿಯಲ್ಲ, ಇದು ಮನೆಯಲ್ಲಿದ್ದರೆ ಮನೆಗೆ ಸ್ಮಶಾನದ ಕಳೆ ಬರುತ್ತದೆ.
ನಟರಾಜ: ಸಾಮಾನ್ಯವಾಗಿ ನೃತ್ಯ ಪಂಡಿತರ, ನೃತ್ಯ ಅಭ್ಯಾಸ ಮಾಡುವವರ ಮನೆಯಲ್ಲಿ ನಟರಾಜ ಮೂರ್ತಿ ಇರುತ್ತದೆ. ಇದು ಶಿವನ ತಾಂಡವ ನೃತ್ಯದ ಭಂಗಿಯಾಗಿದೆ. ಶಿವ ದುಷ್ಟರನ್ನು ಸಂಹರಿಸುವ ಸಮಯದಲ್ಲಿ ತಾಂಡವ ನೃತ್ಯ ಮಾಡುತ್ತಾ ಕೊಲ್ಲುತ್ತಾನೆ ಎಂದು ಕತೆ ಪುರಾಣದಲ್ಲಿ ಹೇಳಲಾಗುವುದು. ಆದ್ದರಿಂದ ಈ ಮೂರ್ತಿಯನ್ನು ಮನೆಯಲ್ಲಿಡುವುದು ಒಳ್ಳೆಯದಲ್ಲ ಎಂಬ ನಂಬಿಕೆ ವಾಸ್ತು ಶಾಸ್ತ್ರದಲ್ಲಿದೆ.
ಮುಳುಗುವ ಬೋಟಿನ ಚಿತ್ರ: ಮುಳುಗುವ ಬೋಟಿನ ಚಿತ್ರ ಮನೆಯಲ್ಲಿದ್ದರೆ ಮನೆಯವರ ನಡುವೆ ಸಂಬಂಧ ಹಾಳಾಗಿ ಕುಟುಂಬ ಛಿದ್ರ ಛಿದ್ರವಾಗುವುದು.
ನೀರಿನ ಕಾರಂಜಿ: ನೀರಿನ ಕಾರಂಜಿ ಮನೆಯಲ್ಲಿದ್ದರೆ ಮನೆ ಸೌಂದರ್ಯ ಹೆಚ್ಚುವುದು, ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದು ಮನೆಯಲ್ಲಿದ್ದರೆ ಹಣ, ಐಶ್ವರ್ಯ ಕೈಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಲಾಗಿದೆ.
ಕಾಡುಪ್ರಾಣಿಗಳ ಚಿತ್ರ ಅಥವಾ ಕೊಂಬುಗಳು: ಕಾಡು ಪ್ರಾಣಿಗಳ ಚರ್ಮ, ಕೊಂಬು ಅಥವಾ ಚಿತ್ರವನ್ನು ಮನೆಯಲ್ಲಿ ಇಡಬಾರದು,ಇವುಗಳು ಮನೆಯಲ್ಲಿದ್ದರೆ ಅಲ್ಲಿ ವಾಸಿಸುವ ಮನುಷ್ಯರು ಕೂಡ ಕ್ರೂರ ಸ್ವಭಾವದವರಾಗುತ್ತಾರೆ ಎಂದು ಹೇಳಲಾಗಿದೆ.



Click it and Unblock the Notifications