Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ವಾಸ್ತು ಪ್ರಕಾರ ಮನೆಗೆ ದೋಷ ತರುವ ವಸ್ತುಗಳು!
ಭಾರತೀಯರು ಹೆಚ್ಚಾಗಿ ವಾಸ್ತು ಪ್ರಕಾರ ಮನೆ ಕಟ್ಟಿಸುವುದು ಜಾಸ್ತಿ. ಕೆಲವರು ಅದನ್ನು ಮೂಢನಂಬಿಕೆ ಎಂದು ಹೇಳಿದರೆ ಮತ್ತೆ ಕೆಲವರು ತುಂಬಾ ದೃಢವಾಗಿ ವಾಸ್ತು ಶಾಸ್ತ್ರ ನಂಬುತ್ತಾರೆ. ವಾಸ್ತು ನಂಬಬೇಕೋ? ಬೇಡ್ವ? ಅನ್ನುವುದು ಅವರವರ ಅಭಿಪ್ರಾಯಕ್ಕೆ ಬಿಟ್ಟದ್ದು. ಪ್ರತಿಯೊಬ್ಬರೂ ನಮ್ಮ ಮನೆಯಲ್ಲಿ ಆರೋಗ್ಯ, ಸಂತೋಷ ಮತ್ತು ಐಶ್ಚರ್ಯ ಇರಬೇಕೆಂದು ಬಯಸುತ್ತೇವೆ. ಈ ರೀತಿ ಇರಬೇಕಾದರೆ ವಾಸ್ತು ಶಾಸ್ತ್ರದಲ್ಲಿ ಈ ಕೆಳಗಿನ ಪ್ರಮುಖ ವಸ್ತುಗಳನ್ನು ಮನೆಯಲ್ಲಿ ಇಡಬಾರದೆಂದು ಹೇಳುತ್ತಾರೆ, ವಾಸ್ತು ಪ್ರಕಾರ ಮನೆಗೆ ದೋಷ ತರುವ ಆ ವಸ್ತುಗಳು ಯಾವುದು ಎಂದು ತಿಳಿಯಲು ಮುಂದೆ ಓದಿ.

ಮಹಾಭಾರತದ ಚಿತ್ರಗಳು: ಮಹಾಭಾರತ ಪವಿತ್ರವಾದ ಗ್ರಂಥವಾದರೂ, ಅದರ ಕತೆಯನ್ನು ವಿವರಿಸುವ ಯಾವುದೇ ಫೋಟೊವನ್ನು ಮನೆಯಲ್ಲಿ ಇಡಬಾರದು ಎಂದು ಹೇಳಲಾಗುವುದು. ಮಹಾಭಾರತದಲ್ಲಿ ಯುದ್ಧ ಪ್ರಮುಖ ಕೇಂದ್ರಬಿಂದುವಾಗಿರುವುದರಿಂದ , ಇದರ ಪೋಟೊ ಇಟ್ಟರೆ ಮನೆಯವರ ಮಧ್ಯ ಜಗಳ ತಪ್ಪುವುದಿಲ್ಲ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.
ತಾಜ್ ಮಹಲ್: ಅಮರ ಪ್ರೇಮದ ಸಂಕೇತವಾಗಿರುವ ತಾಜ್ ಮಹಲ್ ಪ್ರಪಂಚದ ಏಳನೇ ಅದ್ಭುತಗಳಲ್ಲಿ ಒಂದು. ಇದನ್ನು ನೋಡಿದರೆ ಇದರ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ, ಆದರೆ ಎಷ್ಟೇ ಸೌಂದರ್ಯವಿರಲಿ ವಾಸ್ತು ಪ್ರಕಾರ ಹೇಳುವುದಾದರೆ ಇದೊಂದು ಸಮಾಧಿ, ಸಮಾಧಿಯ ಚಿತ್ರ ಮನೆಯಲ್ಲಿ ಇಡುವುದು ಸರಿಯಲ್ಲ, ಇದು ಮನೆಯಲ್ಲಿದ್ದರೆ ಮನೆಗೆ ಸ್ಮಶಾನದ ಕಳೆ ಬರುತ್ತದೆ.
ನಟರಾಜ: ಸಾಮಾನ್ಯವಾಗಿ ನೃತ್ಯ ಪಂಡಿತರ, ನೃತ್ಯ ಅಭ್ಯಾಸ ಮಾಡುವವರ ಮನೆಯಲ್ಲಿ ನಟರಾಜ ಮೂರ್ತಿ ಇರುತ್ತದೆ. ಇದು ಶಿವನ ತಾಂಡವ ನೃತ್ಯದ ಭಂಗಿಯಾಗಿದೆ. ಶಿವ ದುಷ್ಟರನ್ನು ಸಂಹರಿಸುವ ಸಮಯದಲ್ಲಿ ತಾಂಡವ ನೃತ್ಯ ಮಾಡುತ್ತಾ ಕೊಲ್ಲುತ್ತಾನೆ ಎಂದು ಕತೆ ಪುರಾಣದಲ್ಲಿ ಹೇಳಲಾಗುವುದು. ಆದ್ದರಿಂದ ಈ ಮೂರ್ತಿಯನ್ನು ಮನೆಯಲ್ಲಿಡುವುದು ಒಳ್ಳೆಯದಲ್ಲ ಎಂಬ ನಂಬಿಕೆ ವಾಸ್ತು ಶಾಸ್ತ್ರದಲ್ಲಿದೆ.
ಮುಳುಗುವ ಬೋಟಿನ ಚಿತ್ರ: ಮುಳುಗುವ ಬೋಟಿನ ಚಿತ್ರ ಮನೆಯಲ್ಲಿದ್ದರೆ ಮನೆಯವರ ನಡುವೆ ಸಂಬಂಧ ಹಾಳಾಗಿ ಕುಟುಂಬ ಛಿದ್ರ ಛಿದ್ರವಾಗುವುದು.
ನೀರಿನ ಕಾರಂಜಿ: ನೀರಿನ ಕಾರಂಜಿ ಮನೆಯಲ್ಲಿದ್ದರೆ ಮನೆ ಸೌಂದರ್ಯ ಹೆಚ್ಚುವುದು, ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದು ಮನೆಯಲ್ಲಿದ್ದರೆ ಹಣ, ಐಶ್ವರ್ಯ ಕೈಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಲಾಗಿದೆ.
ಕಾಡುಪ್ರಾಣಿಗಳ ಚಿತ್ರ ಅಥವಾ ಕೊಂಬುಗಳು: ಕಾಡು ಪ್ರಾಣಿಗಳ ಚರ್ಮ, ಕೊಂಬು ಅಥವಾ ಚಿತ್ರವನ್ನು ಮನೆಯಲ್ಲಿ ಇಡಬಾರದು,ಇವುಗಳು ಮನೆಯಲ್ಲಿದ್ದರೆ ಅಲ್ಲಿ ವಾಸಿಸುವ ಮನುಷ್ಯರು ಕೂಡ ಕ್ರೂರ ಸ್ವಭಾವದವರಾಗುತ್ತಾರೆ ಎಂದು ಹೇಳಲಾಗಿದೆ.



Click it and Unblock the Notifications