Just In
- 2 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 11 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 12 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 13 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
Don't Miss
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆಯ ಸ್ವಚ್ಛತೆ- ಮೋಡಿ ಮಾಡುವ ಅಂಟುವಾಳ ಕಾಯಿ!
ಸೋಪುಗಳ ಬಳಕೆ ವ್ಯಾಪಕವಾಗುವ ಮುನ್ನ ನಮ್ಮ ಹಿರಿಯರು ಅಂಟುವಾಳ ಕಾಯಿಯನ್ನೇ ಸ್ವಚ್ಛತೆಗಾಗಿ ಅವಲಂಬಿಸಿದ್ದರು. ಇಂದಿಗೂ ಚಿನ್ನಾಭರಣಗಳನ್ನು ಸ್ವಚ್ಛಗೊಳಿಸಲು ಅಂಟುವಾಳ ಕಾಯಿಯನ್ನೇ ನೆಚ್ಚಿಕೊಂಡಿದ್ದವರಿದ್ದಾರೆ. ಏಕೆಂದರೆ ಇದೊಂದು ನೈಸರ್ಗಿಕ ಮಾರ್ಜಕವಾಗಿದ್ದು ಯಾವುದೇ ಅಡ್ಡ ಪರಿಣಾಮಗಳಿಲ್ಲದಿರುವುದು, ಯಾವುದೇ ಹಾನಿಕಾರಕ ರಾಸಾಯನಿಕವಿಲ್ಲದಿರುವುದು, ಚರ್ಮಕ್ಕೆ ಸುರಕ್ಷಿತವಾಗಿರುವುದು ಮೊದಲಾದವು ಹೆಚ್ಚಿನ ಜನಪ್ರಿಯತೆಗೆ ಕಾರಣವಾಗಿತ್ತು.
ಆದರೆ ಇದನ್ನು ಸಂಗ್ರಹಿಸುವುದು ಮತ್ತು ಉಪಯೋಗಿಸುವ ಮುನ್ನ ಕೊಂಚ ಜಜ್ಜಿ ರಸ ತೆಗೆಯುವುದು ಮೊದಲಾದ ಶ್ರಮದ ಕೆಲಸಗಳಿರುವುದರಿಂದ ಇಂದಿನ ಧಾವಂತದ ಯುಗದಲ್ಲಿ ಅಂಟುವಾಳ ಯಾರಿಗೂ ಬೇಡವಾಗಿದೆ. ಆದರೆ ಇಂದಿಗೂ ಹಸಿಯಾಗಿ ಸಿಗದಿದ್ದರೂ ಒಣಫಲಗಳ ರೂಪದಲ್ಲಿ ಅಂಟುವಾಳ ಕಾಯಿ ಗ್ರಂಥಿಗೆ ಅಂಗಡಿಗಳಲ್ಲಿ ದೊರಕುತ್ತದೆ.
ಕೆಲವು
ಬಹುಪಯೋಗಿ
ಮಳಿಗೆಗಳಲ್ಲಿ
ರೀಠಾ,
ಅರಿಠಾ
(ಹಿಂದಿ
ಪದಗಳು)
ಎಂಬ
ಹೆಸರಿನಲ್ಲಿ
ಸಿಗುತ್ತವೆ.
ಇವನ್ನು
ಬಳಸಿ
ನಿಮ್ಮ
ಮನೆಯ
ಅಂದವನ್ನು
ಅಗ್ಗದಲ್ಲಿ
ಮತ್ತು
ಸುಲಭವಾಗಿ
ಹೇಗೆ
ಹೆಚ್ಚಿಸಿಕೊಳ್ಳಬಹುದು
ಎಂಬುದನ್ನು
ಕೆಳಗಿನ
ಸ್ಲೈಡ್
ಶೋ
ವಿವರಿಸಲಾಗಿದೆ
ಮುಂದೆ
ಓದಿ..
ಮನೆಯ ಕಿಟಕಿ ಗಾಜುಗಳನ್ನು ಸ್ಪಟಿಕದಷ್ಟು ಶುಭ್ರವಾಗಿಸಿ
ನೀರನ್ನು ಸಿಂಪಡಿಸಬಲ್ಲ ವ್ಯವಸ್ಥೆಯಿರುವ ಬಾಟಲಿಯೊಂದರಲ್ಲಿ ಕಾಲು ಲೀಟರ್ ನೀರು, ತಲಾ ಹದಿನೈದು ಮಿಲಿಲೀಟರ್ ನಷ್ಟು ಅಂಟುವಾಳ ರಸ ಮತ್ತು ಶಿರ್ಕಾ ಸೇರಿಸಿ ಮಿಶ್ರಣ ಮಾಡಿ. ಈ ನೀರನ್ನು ಗಾಜಿನ ಮೇಲೆ ಸಿಂಪಡಿಸಿ ಒಣಗಿರುವ ಸ್ವಚ್ಛವಾದ ಬಟ್ಟೆಯಿಂದ ಒರೆಸಿ. ಗಾಜುಗಳು ಸ್ಪಟಿಕದಂತೆ ಹೊಳೆಯುತ್ತವೆ.
ಚಿನ್ನಾಭರಣಗಳನ್ನು ಸ್ವಚ್ಛಗೊಳಿಸಲು
ಚಿನ್ನ ಸ್ವಚ್ಛಗೊಳಿಸುತ್ತೇವೆಂದು ಚಿನ್ನ ಕರಗಿಸುವ ದ್ರಾವಣದಲ್ಲಿ ಕರಗಿಸಿ ಮೋಸಮಾಡುವ ಜನರಿಂದ ದೂರವಿರಲು ಈ ಕೆಲಸವನ್ನು ನಾವೇ ಸ್ವತಃ ಮಾಡಿಕೊಳ್ಳುವುದು ಉತ್ತಮ. ಇದಕ್ಕಾಗಿ ಅಂಟುವಾಳಕಾಯಿಗಳನ್ನು ನೆನೆಸಿಟ್ಟಿದ್ದ ನೀರಿನಲ್ಲಿ ಮುಳುಗಿಸಿಡಿ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ
ಚಿನ್ನಾಭರಣಗಳನ್ನು ಸ್ವಚ್ಛಗೊಳಿಸಲು
ಸುಮಾರು ಐದು ನಿಮಿಷಗಳ ಬಳಿಕ ಹಳೆಯ ಮೃದುವಾದ ಹಲ್ಲುಜ್ಜುವ ಬ್ರಶ್ ತೆಗೆದುಕೊಂಡು ನಯವಾಗಿ ಉಜ್ಜಿ ಕೊಳೆಯನ್ನು ತೆಗೆಯಿಸಿ. ಬಳಿಕ ಸ್ವಚ್ಛವಾದ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಿ. ನಿಮ್ಮ ಚಿನ್ನಾಭರಣಗಳು ಹೊಸತರಂತೆ ಹೊಳೆಯುತ್ತವೆ.
ಕೈ ತೊಳೆಯುವ ದ್ರಾವಣವನ್ನಾಗಿಸಿ
ಊಟದ ಬಳಿಕ ಕೈತೊಳೆಯಲು ಸೋಪಿನ ಬದಲು ಅಂಟುವಾಳದ ರಸ ಬೆರೆತ ನೀರನ್ನು ಬಳಸಬಹುದು. ಇದಕ್ಕಾಗಿ ಒಂದು ಪಾತ್ರೆಯಲ್ಲಿ ಕೆಲವು ಅಂಟುವಾಳಕಾಯಿಗಳನ್ನು ಹಾಕಿ ನೀರಿನಿಂದ ತುಂಬಿಸಿ ಒಂದು ರಾತ್ರಿಯಿಡೀ ಇಡಿ. ಮುಂಜಾನೆ ಅಂಟುವಾಳಕಾಯಿ ನೀರನ್ನು ಹೀರಿ ಮೃದುವಾಗಿರುತ್ತದೆ. ಇದನ್ನು ಹಿಚುಕಿ ರಸವನ್ನು ಹಿಂಡಿ ತೆಗೆಯಿಸಿ. ಚೆನ್ನಾಗಿ ಮಿಶ್ರಣ ಮಾಡಿದ ಬಳಿಕ ಸೋಸಿ ಒಂದು ಲಿಂಬೆಹಣ್ಣಿನ ರಸವನ್ನು ಸೇರಿಸಿ.
ಕೈ ತೊಳೆಯುವ ದ್ರಾವಣವನ್ನಾಗಿಸಿ
ಈ ದ್ರಾವಣನ್ನು ಕೈ ತೊಳೆಯಲು ಉಪಯೋಗಿಸುವುದರಿಂದ ಕೈ ಶುಭ್ರವಾಗಿರುವುದರ ಜೊತೆಗೇ ನವಿರಾದ ಲಿಂಬೆಯ ಪರಿಮಳವೂ ಹರಡುತ್ತದೆ. ಈ ನೀರನ್ನು ಒಂದು ವಾರದಲ್ಲಿ ಖಾಲಿ ಮಾಡಿ. ಆ ಬಳಿಕ ಲಿಂಬೆಯ ಪ್ರಭಾವದಿಂದ ಈ ನೀರು ಕೊಂಚ ಹುಳಿವಾಸನೆ ಬರಲು ಪ್ರಾರಂಭವಾಗುತ್ತದೆ. ಲಿಂಬೆರಸ ಸೇರಿಸದಿದ್ದರೆ ಸುಮಾರು ಒಂದು ತಿಂಗಳವರೆಗೂ ಬಳಸಬಹುದು.
ನಿಮ್ಮ ಸಾಕುಪ್ರಾಣಿಗಳನ್ನು ಸ್ನಾನ ಮಾಡಿಸಲು
ಸಾಕುಪ್ರಾಣಿಗಳನ್ನು ಸ್ನಾನ ಮಾಡಿಸಲು ನೈಸರ್ಗಿಕವಾದ ಅಂಟುವಾಳದ ರಸ ಬೆರೆತ ನೀರು ಅತ್ಯುತ್ತಮವಾಗಿದೆ. ಇದರಿಂದ ಪ್ರಾಣಿಗಳ ಮೈಮೇಲಿದ್ದ ಚಿಗಟ, ಉಣುಗು ಮೊದಲಾದ ಕ್ರಿಮಿಗಳು ನಿವಾರಣೆಯಾಗುತ್ತವೆ.
ರತ್ನಗಂಬಳಿ ಸ್ವಚ್ಛಗೊಳಿಸಲು
ಮನೆಯ ಅಂದ ಹೆಚ್ಚಿಸುವ ರತ್ನಗಂಬಳಿಯ ಸ್ವಚ್ಛತೆಯೇ ದೊಡ್ಡ ಸಮಸ್ಯೆ. ಏಕೆಂದರೆ ನೀರು ಕುಡಿದ ಬಳಿಕ ಈ ಕಂಬಳಿ ಹೆಣಭಾರವಾಗುತ್ತದೆ. ಇದನ್ನು ಹೊರಲು ಹತ್ತಾರು ಜನರ ಸಹಾಯ ಬೇಕಾಗುತ್ತದೆ. ಬದಲಿಗೆ ಅಂಟುವಾಳ ರಸ ಬೆರೆತ ನೀರನ್ನು ರತ್ನಗಂಬಳಿಯ ಎಲ್ಲೆಡೆ ನವಿರಾಗಿ ಸಿಂಪಡಿಸಿ ಕೊಂಚ ಹೊತ್ತಿನ ಬಳಿಕ ಬ್ರಶ್ ಮೂಲಕ ಅಥವಾ ವ್ಯಾಕ್ಯೂಮ್ ಕ್ಲೀನರ್ ಮೂಲಕ ಸ್ವಚ್ಛಗೊಳಿಸಿ. ಇದರಿಂದ ಕಂಬಳಿಯನ್ನು ಅದರ ಸ್ಥಾನದಿಂದ ತೆಗೆಯದೆಯೇ ಸ್ವಚ್ಛಗೊಳಿಸಬಹುದು. ಇದು ಒಣಗಲೂ ಅತಿ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಹೆಚ್ಚೂ ಕಡಿಮೆ ಸ್ವಚ್ಛಗೊಳಿಸಿದ ಮರುಕ್ಷಣವೇ ಇದನ್ನು ಬಳಸಲು ಪ್ರಾರಂಭಿಸಬಹುದು.
ದೇವರ ವಿಗ್ರಹಗಳ ಸ್ವಚ್ಛತೆಗೆ
ಅಂಟುವಾಳ ಕಾಯಿಯನ್ನು ನೀರಿನಲ್ಲಿ ನೆನೆಸಿ ಆ ನೀರಿನಲ್ಲಿ ವಿಗ್ರಹಗಳನ್ನು ಮುಳುಗಿಸಿಡಿ. ಸುಮಾರು ಅರ್ಧ ಗಂಟೆ ಅಥವಾ ಒಂದು ಗಂಟೆಯ ಬಳಿಕ ವಿಗ್ರಹವನ್ನು ಹೊರತೆಗೆದು ಇದೇ ನೀರಿನಲ್ಲಿ ಅದ್ದಿದ ಹತ್ತಿಯ ಒರಟು ಬಟ್ಟೆಯಿಂದ ಕೊಂಚ ಒತ್ತಡ ನೀಡಿ ಒರೆಸಿ. ತುಕ್ಕು ಸುಲಭವಾಗಿ ನಿವಾರಣೆಯಾಗಿ ವಿಗ್ರಹಗಳು ತಮ್ಮ ಮೂಲಬಣ್ಣದಲ್ಲಿ ಹೊಳೆಯುತ್ತವೆ.