Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪೂಜೆಯಲ್ಲಿ ಪಾರಿಜಾತ ಹೂವಿನ ಮಹತ್ವ ಹಾಗೂ ಇದರಲ್ಲಿರುವ ಔಷಧೀಯ ಗುಣಗಳು
ಭೂಮಿ ಪೂಜೆಯಲ್ಲಿ ಪವಿತ್ರವಾದ ಪಾರಿಜಾತ ಹೂ ಗಿಡವನ್ನು ನೆಡಲಾಗಿದೆ. ನಮ್ಮ ತತ್ತ್ವ ಶಾಸ್ತ್ರದಲ್ಲಿನ ಪಾರಿಜಾತ ಗಿಡಕ್ಕೆ ಎಲ್ಲಿಲ್ಲದ ಮಹತ್ವವಿದೆ. ಸಮುದ್ರ ಮಥನ ಕಾಲದಲ್ಲಿ ಸುರಭಿ, ವಾರಣಿಯ ನಂತರ ಜನಿಸಿದ್ದು ಪಾರಿಜಾತ ಎಂಬ ಕತೆಯಿದೆ. ಕ್ಷೀರ ಸಮುದ್ರದಿಂದ ಹುಟ್ಟಿದ 5 ಕಲ್ಪ ವೃಕ್ಷಗಳಲ್ಲಿ ಇದೂ ಕೂಡ ಒಂದು. ಕಲ್ಪ ವೃಕ್ಷ ಹಾಗೂ ಕಾಮಧೇನುವನ್ನು ಋಷಿಗಳಿಗೆ ಕೊಟ್ಟ ಇಂದ್ರ, ಇಂದ್ರಾಣಿಗಾಗಿ ಪಾರಿಜಾತ ವೃಕ್ಷವನ್ನು ತನ್ನ ನಂದನವನಕ್ಕೆ ಕೊಂಡೊಯೊದ್ದ. ಕೃಷ್ಣನಿಗೆ ತುಂಬಾ ಪ್ರಿಯವಾದ ಗಿಡ ಪಾರಿಜಾತ. ಕೃಷ್ಣ ಇಂದ್ರ ಲೋಕದಿಂದ ಪಾರಿಜಾತ ಗಿಡವನ್ನು ತಂದು ಸತ್ಯಭಾಮೆಯ ಅಂಗಳದಲ್ಲಿ ನೆಟ್ಟನೆಂಬ ಕತೆಯಿದೆ.

ಪಾರಿಜಾತ ಹೂವನ್ನು ತಿಳುವಳಿಕೆ ಹಾಗೂ ಜ್ಞಾನದ ಸಂಕೇತ ಎನ್ನುತ್ತಾರೆ. ಈ ಹೂವಿನ ಕಂಪು ಮೂಗಿಗೆ ತುಂಬಾ ಹಿತ, ಈ ಹೂ ಸೂರ್ಯ ಮುಳುಗಿದ ನಂತರ ಅರಳುವುದರಿಂದ ಇದನ್ನು ನೈಟ್ ಜಾಸ್ಮಿನ್ ಎಂದು ಕೂಡ ಕರೆಯಲಾಗುವುದು. ಇದನ್ನು ದೇವ ಪುಷ್ಮ ಎಂದು ಕರೆಯಲಾಗುವುದು.

ಪೂಜೆಯಲ್ಲಿ ಪಾರಿಜಾತ
ಪಾರಿಜಾತ ಹೂವನ್ನು ಪೂಜೆಗೆ ಬಳಸುವುದು ಶ್ರೇಷ್ಠವೆಂದು ಹೇಳಲಾಗುತ್ತದೆ. ಇದರ ಸುವಾಸನೆ ಮನಸ್ಸಿಗೆ ತುಂಬಾ ಆಹ್ಲಾದಕರವಾಗಿರುತ್ತದೆ. ಈ ಹೂವನ್ನು ಪೂಜೆಗೆ ಮಾತ್ರವಲ್ಲ, ಆಯುರ್ವೇದಲ್ಲಿ ಔಷಧಿಯಾಹಿಯೂ ಬಳಸಲಾಗುವುದು. ತುಂಬೆ ಮುಂತಾದ ಔಷಧಿ ಸಸ್ಯಗಳಲ್ಲಿ ತುಂಬೆ ಹೂವಿಗೆ ಅಗ್ರಸ್ಥಾನ.

ಸಂಧಿವಾತ ನಿವಾರಣೆ ಮಾಡುವ ಪಾರಿಜಾತ
ವಿಪರೀತ ಕಾಡುವ ಕೀಲುನೋವು ಶಮನ ಮಾಡುವ ಗುಣ ಪಾರಿಜಾತ ಗಿಡಕ್ಕಿದೆ, ಇದರ ಎಲೆಗಳಿಂದ ಮಾಡುವ ಕಷಾಯ ಸಂಧಿವಾತ ನೋವು ಕಡಿಮೆಯಾಗುವುದು. ಪ್ರತಿದಿನ ಮುಂಜಾನೆ ಪಾರಿಜಾತದ ಎಲೆಗಳ ಕಷಾಯ ಕುಡಿಯುತ್ತಿದ್ದರೆ ಸಂಧಿವಾತ ನಿಯಂತ್ರಣಕ್ಕೆ ಬರುತ್ತದೆ.
ಪಾರಿಜಾತ ಎಲೆಯನ್ನು ಜಜ್ಜಿ ಅದನ್ನು ತೆಂಗಿನೆಣ್ಣೆಯಲ್ಲಿ ಕುದಿಸಿ ಅದನ್ನು ಹಚ್ಚುವುದರಿಂದಲೂ ನೋವು ಕಡಿಮೆಯಾಗುವುದು.

ಕೆಮ್ಮು, ಜಂತು ಹುಳ ನಿವಾರಣೆ
ಪಾರಿಜಾತ ಗಿಡದ ಎಲೆಯಿಂದ ಮಾಡಿದ ಕಷಾಯ ಕೆಮ್ಮು ಹಾಗೂ ಜಂತುಹುಳ ನಿವಾರಣೆಗೆ ಬಳಸುತ್ತಾರೆ. ಮಕ್ಕಳಿಗೆ ಇದರ ಎಲೆಯ ಔಷಧ ಮಾಡಿ ನೀಡಲಾಗುವುದು. ಮಲಬದ್ಧತೆ ಸಮಸ್ಯೆ ನಿವಾರಣೆ ಮಾಡುವಲ್ಲಿಯೂ ಪಾರಿಜಾತ ಎಲೆಯ ಕಷಾಯ ಪರಿಣಾಮಕಾರಿಯಾಗಿದೆ.
ಹತ್ತು ಪಾರಿಜಾತ ಎಲೆಯನ್ನು ಒಂದು ಕಪ್ ನೀರಿಗೆ ಹಾಕಿ ಅದು ಅರ್ಧ ಕಪ್ ಆಗುವಷ್ಟು ಹೊತ್ತು ಕುದಿಸಿ, ಅದಕ್ಕೆ ಶುಂಠಿ ರಸ ಹಾಗೂ ಜೇನು ಸೇರಿಸಿ ಕುಡಿಯಿರಿ. ಇದನ್ನು ಮೂರು ಹೊತ್ತು ಕುಡಿಯುತ್ತಿದ್ದರೆ ಬೇಗನೆ ಕೆಮ್ಮು ಕಡಿಮೆಯಾಗುವುದು.
ಅಲ್ಲದೆ ಇದರ ಎಲೆಗಳನ್ನು ಕುದಿಸಿ ಕುಡಿಯುವುದರಿಮದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.

ಪಾರಿಜಾತ ಬೀಜ
ಪಾರಿಜಾತ ಬೀಜವನನ್ನು ಸಂಗ್ರಹಿಸಿ ಪುಡಿ ಮಾಡಿ ಇದನ್ನು ಔಷಧಿಯಾಗಿ ಕಾಮಲೆ ರೋಗ ನಿವಾರಣೆಗೆ ಕೂಡ ಬಳಸಲಾಗುವುದು.
ಸೌಂದರ್ಯ ಉತ್ಪನ್ನ
ಪಾರಿಜಾತ ಬೀಜದ ಪುಡಿಯನ್ನು ಪೌಡರ್ ಮಾಡಿ ಇದನ್ನು ಮುಖದ ಸೌಂದರ್ಯ ವೃದ್ದಿಸಲು ಬಳಸಬಹುದು. ಅಲ್ಲದೆ ಇದನ್ನು ಸುಗಂಧ ದ್ರವ್ಯಗಳ ಔಷಧ ತಯಾರಿಕೆಯಲ್ಲಿ ಕೂಡ ಬಳಸುತ್ತಾರೆ.

ಪಾರಿಜಾತ ಗಿಡ ಬೆಳೆಸುವುದು ಹೇಗೆ?
- ಈ ಗಿಡಕ್ಕೆ ಪ್ರತಿದಿನ ನೀರು ಹಾಕಬೇಕು (ಹೆಚ್ಚು ನೀರು ಹಾಕಬಾರದು, ಹವಾಮಾನಕ್ಕೆ ತಕ್ಕಂತೆ ನೀರುಣಿಸಬೇಕು)
- ಗಿಡ ನೆಟ್ಟು ಒಂದು ತಿಂಗಳಾಗುವಷ್ಟರಲ್ಲಿ ಗಿಡದಲ್ಲಿ ಹೂ ಬಿಡಲಾರಂಭಿಸುತ್ತದೆ. ಹೂ ಅರಳಿದರೆ ಒಂದು ವಾರಗಳ ಕಾಲ ಇರುತ್ತದೆ.
- ಹೂ ಅರಳಿ ಉದುರಿದ ತುದಿಯನ್ನು ಕತ್ತರಿಸಬೇಕು, ಈ ಕೊಂಬೆ ನೆಟ್ಟರೆ ಹೊಸ ಗಿಡ ಬೆಳೆಯುತ್ತದೆ.
- ಎಲ್ಲಾ ಕಾಲದಲ್ಲಿ ಪುಷ್ಪ ಬಿಡುವ ಈ ಗಿಡವನ್ನು ಮಳೆಗಾಲದಲ್ಲಿ ಕತ್ತರಿಸಬಾರದು.



Click it and Unblock the Notifications