Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಮನೆಯಲ್ಲಿ ಹಣ, ಸಂಪತ್ತು ಹೆಚ್ಚಲು ಇಲ್ಲಿದೆ ಸರಳ ವಾಸ್ತು ಟಿಪ್ಸ್..!!
ನಮ್ಮ ಆರೋಗ್ಯ, ಹಣಕಾಸು ಪರಿಸ್ಥಿತಿ, ಮನೆಯಲ್ಲಿನ ವಾತಾವರಣ ಇದಕ್ಕೆಲ್ಲ ನೇರವಾಗಿ ವಾಸ್ತು ಶಾಸ್ತ್ರದ ಸಂಬಂಧವಿರುತ್ತದೆ. ಯಾವ ಮನೆಯಲ್ಲಿ ವಾಸ್ತು ಚಿಹ್ನೆಗಳು ಶಾಸ್ತ್ರದಲ್ಲಿ ಹೇಳಲಾಗಿದ್ಯೋ ಅದೇ ರೀತಿ ಇದ್ದರೆ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ, ಐಶ್ವರ್ಯ, ಸಂಪತ್ತು ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.
ಆದರೆ ಕೆಲವು ಬಾರಿ ನಾವು ಸರಳವಾಗಿ ವಾಸ್ತುವನ್ನು ಪಾಲಿಸುವ ಬದಲಾಗಿ ನಿರ್ಲಕ್ಷ್ಯ ಮಾಡುತ್ತೇವೆ. ಇದು ನಮ್ಮಲ್ಲಿ ವಾಸ್ತು ದೋಷಕ್ಕೆ ಕಾರಣವಾಗುತ್ತದೆ. ಈ ರೀತಿಯ ವಾಸ್ತು ದೋಷದಿಂದ ಒಬ್ಬ ವ್ಯಕ್ತಿ ಏಳಿಗೆ ಕಾಣುವುದು ಕಷ್ಟವಾಗುತ್ತದೆ. ಹಾಗಾದರೆ ಮನೆಯಲ್ಲಿ ನಾವು ಯಾವ ರೀತಿಯ ವಾಸ್ತುವನ್ನು ಪಾಲಿಸಬೇಕು? ಯಾವ ವಾಸ್ತು ದೋಷ ಯಾವ ನಷ್ಟಕ್ಕೆ ಕಾರಣವಾಗುತ್ತದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಮನೆಯಲ್ಲಿ ಕುಬೇರ ಯಂತ್ರ ಇಡಿ
ಮನೆಯಲ್ಲಿ ಹಣದ ಸಮಸ್ಯೆ ಮತ್ತು ಖರ್ಚು ಹೆಚ್ಚಾಗುತ್ತಿದ್ದರೆ ಕುಬೇರ ಯಂತ್ರವನ್ನು ಇಡಬೇಕು ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಕುಬೇರ ಸಂಪತ್ತಿನ ಪ್ರತೀಕವಾಗಿದ್ದು, ಮನೆಯ ಈಶಾನ್ಯ ಮೂಲೆಯಲ್ಲಿ ಕುಬೇರ ಯಂತ್ರ ಇಡಬೇಕು. ಈಶಾನ್ಯ ಮೂಲೆಯು ಸಂಪತ್ತು ಸಂಗ್ರಹದ ಪ್ರತೀಕವಾಗಿದೆ ಹೀಗಾಗಿ ಆ ಮೂಲೆಯಲ್ಲಿ ಶೌಚಾಲಯ, ಚಪ್ಪಲಿ ಬಿಡುವುದು, ಪೊರಕೆ ಇಡುವುದು ಮಾಡಬಾರದು ಎಂದು ವಾಸ್ತು ಶಾಸ್ತ್ರದ ಉಲ್ಲೇಖವಾಗಿದೆ.
ಮನೆಯಲ್ಲಿ ವಸ್ತುಗಳ ಜೋಡಿಸಿಡಿ
ಕೆಲವು ಬಾರಿ ಮನೆಯಲ್ಲಿ ಇಲ್ಲವೆ ನಿಮ್ಮ ರೂಮಿಯಲ್ಲಿ ಎಲ್ಲಾ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಿರುತ್ತಾರೆ. ಈ ರೀತಿ ಮಾಡಬಾರದು ಎಂಬುದು ವಾಸ್ತು ಶಾಸ್ತ್ರದ ಉಲ್ಲೇಖವಾಗಿದೆ. ನಿಮ್ಮ ಮನೆಯು ಆರ್ಥಿಕ, ಭಾವನಾತ್ಮಕ ರೀತಿಯ ಅಂಶವೂ ಧನಾತ್ಮಕ ಶಕ್ತಿಯ ಒಟ್ಟಾರೆ ಸಾರವಾಗಿದೆ. ಆದರೆ ಮನೆಯಲ್ಲಿ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೆ ಅಲ್ಲಿ ಧನಾತ್ಮಕ ಶಕ್ತಿ ನೆಲೆಸುವುದಿಲ್ಲ ಎಂಬುದು ಶಾಸ್ತ್ರದ ಉಲ್ಲೇಖವಾಗಿದೆ.
ಲಾಕರ್ ಯವಾಗಲು ನೈಋತ್ಯ ಮೂಲೆಯಲ್ಲಿರಲಿ
ನಮ್ಮ ಮನೆಯಲ್ಲಿ ಸಾಮಾನ್ಯವಾಗಿ ಲಾಕರ್ ಇಲ್ಲವೆ, ಹಣವಿಡಲು ಒಂದು ಕಮೋಡ್ ಇದ್ದೇ ಇರುತ್ತದೆ. ಆದರೆ ನಮ್ಮ ಅರಿವಿಲ್ಲದೆ ನಾವು ಅದನ್ನು ಎಲ್ಲಿ ಜಾಗ ಸಿಗುತ್ತದೆಯೋ ಅಲ್ಲಿ ಇಡುತ್ತೇವೆ. ಆದರೆ ಈ ರೀತಿ ಮಾಡುವುದರಿಂದ ಹಣದ ಸಮಸ್ಯೆ ಉದ್ಭವಿಸುತ್ತದೆ. ಹೀಗಾಗಿ ಲಾಕರ್ ಇಲ್ಲವೆ ಹಣವಿಡುವ ಕಮೋಡ್ ಅನ್ನು ಮನೆಯ ನೈರುತ್ಯ ಮೂಲೆಯಲ್ಲಿ ಇಡುವುದು ಸೂಕ್ತ. ಆದರೆ ಎಂದಿಗೂ ಲಾಕರ್ ಅನ್ನು ಪಶ್ಚಿಮ ಇಲ್ಲವೆ ದಕ್ಷಿಣ ದಿಕ್ಕಿನೆಡೆಗೆ ಇಡಬಾರದು.
ನೀರಿನ ಟ್ಯಾಂಕ್ ತಪ್ಪು ದಿಕ್ಕಿಗೆ ಇಡಬೇಡಿ
ನಿಮ್ಮ ಮನೆಯಲ್ಲಿ ನೀರಿನ ಟ್ಯಾಂಕ್ ಇದ್ದರೆ ಅದನ್ನು ಟೆರೆಸ್ ಮೇಲೆ ಇರಿಸುತ್ತೇವೆ. ಆದರೆ ಆ ಟ್ಯಾಂಕ್ ಅನ್ನು ಆಗ್ನೇಯ ಅಥವಾ ಈಶಾನ್ಯ ಮೂಲೆಯಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಸಂಪತ್ತು ಮತ್ತು ಆರೋಗ್ಯದಲ್ಲಿ ವೇಗದ ಬದಲಾವಣೆ ಹಾಗೂ ಯಶಸ್ಸು ಸಾಧಿಸಬಹುದು ಎಂಬುದು ವಾಸ್ತುಶಾಸ್ತ್ರದ ಉಲ್ಲೇಖವಾಗಿದೆ.
ಮನೆಯಲ್ಲಿ ವಾಸ್ತು ಗಿಡಗಳು ಇರಲಿ
ಮನೆಯಲ್ಲಿ ಗಿಡಗಳನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ಧನಾತ್ಮಕ ಶಕ್ತಿ ವೃದ್ಧಿಗೆ ಕಾರಣವಾಗುತ್ತದೆ. ಸ್ತು ಶಾಸ್ತ್ರದ ಪ್ರಕಾರ, ವಿವಿಧ ಸಸ್ಯಗಳು ವಿಭಿನ್ನ ಪ್ರಾಮುಖ್ಯತೆಯನ್ನು ಹೊಂದಿವೆ. ಕೆಲವು ಸಸ್ಯಗಳು ಮನೆಯಲ್ಲಿ ಹಣ ಮತ್ತು ಸಂಪತ್ತನ್ನು ಆಕರ್ಷಿಸುತ್ತವೆ. ಈ ಸಸ್ಯಗಳಲ್ಲಿ ಮನಿ ಪ್ಲಾಂಟ್, ಬಿದಿರಿನ ಸಸ್ಯ ಮತ್ತು ರಬ್ಬರ್ ಪ್ಲಾಂಟ್ ಸೇರಿವೆ. ಈ ಸಸ್ಯಗಳನ್ನು ಮನೆಯೊಳಗೆ ಇಟ್ಟು ಪೋಷಿಸಬೇಕು. ಜೊಗೆಗೆ ಅವುಗಳನ್ನು ಇಡುವ ಜಾಗವೂ ಹೊಂದಾಣಿಕೆಯಾಗಬೇಕು.
ತಾಮ್ರದ ಸ್ವಸ್ತಿಕ್ ಇಡುವುದು
ಮನೆಯಲ್ಲಿ ತಾಮ್ರದಿಂದ ಮಾಡಲಾಗಿರುವ ಸ್ವಸ್ತಿಕ್ ಚಿಹ್ನೆಯನ್ನು ಇಡುವುದು ಸಹ ಸಂಪತ್ತು ಮತ್ತು ಶಾಂತಿಯ ಸಂಕೇತವಾಗಿದೆ. ಜೊತೆಗೆ ಹಣದ ಸಮಸ್ಯೆಗೆ ಪರಿಹಾರ ಬೇಕೆಂದರೆ ನೀವು ತಾಮ್ರದಿಂದ ಮಾಡಲಾದ ಸ್ವಸ್ತಿಕ್ ಅನ್ನು ಮನೆಯ ಆಗ್ನೇಯ ಭಾಗದ ಗೋಡೆಯ ಮೇಲೆ ಇಡಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.



Click it and Unblock the Notifications